ಲಂಡನ್ನಿನಿಂದಲೇ ಚಿಯರ್ಸ್ ಹೇಳಲಿದ್ದಾರೆ ರಾಹುಲ್ ಗಾಂಧಿ
ಬೆಂಗಳೂರು, ಡಿಸೆಂಬರ್ 31 : ಅಪನಗದೀಕರಣದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಈಬಾರಿ ಲಂಡನ್ನಿನಿಂದಲೇ ಭಾರತೀಯರಿಗೆ 'ಹ್ಯಾಪಿ ನ್ಯೂ ಇಯರ್' ಹೇಳಲಿದ್ದಾರೆ. ಖಾಸಗಿ ಭೇಟಿಗಾಗಿ ರಾಹುಲ್ ಅವರು ಈಗಾಗಲೆ ಲಂಡನ್ನಿಗೆ ತೆರಳಿದ್ದಾರೆ.
ಪ್ರತಿಬಾರಿ ತಾವು ವಿದೇಶಕ್ಕೆ ತೆರಳುವಾಗ ಟ್ವಿಟ್ಟರಲ್ಲಿ ಒಂದು ಸಂದೇಶವನ್ನು ಬಿಟ್ಟು ಹೋಗುತ್ತಿದ್ದರು. ಆದರೆ ಈಬಾರಿ ಸದ್ದಿಲ್ಲದೆ ಟ್ವೀಟ್ ಕೂಡ ಮಾಡದೆ, ಲಂಡನ್ನಿಗೆ ತೆರಳಿದ್ದು, ಅಲ್ಲಿಂದಲೇ ಚಿಯರ್ಸ್ ಹೇಳುವುದು ಹೆಚ್ಚೂಕಡಿಮೆ ಖಚಿತವಾಗಿದೆ. [ರಾಹುಲ್ ಕೇಳಿದ 5 ಪ್ರಶ್ನೆಗಳಿಗೆ ಮೋದಿ ಉತ್ತರಿಸುವರೆ?]

ಬಲ್ಲ ಮೂಲಗಳ ಪ್ರಕಾರ, ಬುಧವಾರವೇ ಅವರು ಲಂಡನ್ ವಿಮಾನ ಹತ್ತಿದ್ದು, ಒಂದು ವಾರ ಅಲ್ಲೇ ತಂಗಲಿದ್ದಾರೆ. ಆದರೆ, ಈ ಬಗ್ಗೆ ಪಕ್ಷದ ವಕ್ತಾರರು ಏನನ್ನೂ ಖಚಿತವಾಗಿ ಹೇಳುತ್ತಿಲ್ಲ. ಹೊಸವರ್ಷಾರಂಭವಾದ ನಂತರವೇ ವಿದೇಶಕ್ಕೆ ತೆರಳಬಹುದು ಎಂದು ಹಾರಿಕೆ ಹೇಳಿಕೆ ನೀಡುತ್ತಿದ್ದಾರೆ.
ನೋಟು ನಿಷೇಧ ಮಾಡಿದ್ದಕ್ಕಾಗಿ ನರೇಂದ್ರ ಮೋದಿ ವಿರುದ್ಧ ಪುಂಖಾನುಪುಂಖವಾಗಿ ವಾಗ್ದಾಳಿ ಮಾಡಿರುವ ರಾಹುಲ್ ಗಾಂಧಿ, ಅವರ ವಿರುದ್ಧ ಭ್ರಷ್ಟಾಚಾರದ ಆರೋಪವನ್ನೂ ಹೊರಿಸಿದ್ದಾರೆ. ಹೊಸವರ್ಷದ ಮುನ್ನಾದಿನ ಮೋದಿಯವರು ದೇಶವನ್ನು ಉದ್ದೇಶಿಸಿ ಮಾತನಾಡಲಿರುವ ಹೊತ್ತಿನಲ್ಲಿ ರಾಹುಲ್ ವಿದೇಶಕ್ಕೆ ಹಾರಿದ್ದಾರೆ. [ಮೋದಿಗೆ ಸಹಾರಾದಿಂದ 40 ಕೋಟಿ ಲಂಚ : ರಾಹುಲ್ ಆರೋಪ]
ಕಳೆದ ವರ್ಷ ಇದೇ ಸಮಯದಲ್ಲಿ ಅವರು ರಜಾದಿನಗಳನ್ನು ಕಳೆಯಲೆಂದು ಯುರೋಪಿಗೆ ತೆರಳಿದ್ದರು. ಈಕುರಿತು ಅವರು ತಮ್ಮ ಅಧಿಕೃತ ಟ್ವಿಟ್ಟರ್ ಪುಟದಲ್ಲಿ ಟ್ವೀಟ್ ಕೂಡ ಮಾಡಿದ್ದರು. ಆದರೆ, ಈಗ ಏಕೆ ಟ್ವೀಟನ್ನು ಕೂಡ ಮಾಡಿಲ್ಲ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. [ಟ್ವಿಟ್ಟರಲ್ಲಿ ಅಪಹಾಸ್ಯಕ್ಕೀಡಾದ ರಾಹುಲ್ 'ಭೂಕಂಪ'ದ ಮಾತು]
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications