ರೈಲು ನಿಲ್ದಾಣದಲ್ಲಿ ವೈ-ಫೈ; ಪ್ರಿಪೇಯ್ಡ್ ಯೋಜನೆ ಬಿಡುಗಡೆ
ನವದೆಹಲಿ, ಮಾರ್ಚ್ 05: ಪ್ರಯಾಣಿಕರ ಅನುಕೂಲಕ್ಕಾಗಿ ಭಾರತೀಯ ರೈಲ್ವೆ ದೇಶದ 4000ಕ್ಕೂ ಹೆಚ್ಚು ರೈಲು ನಿಲ್ದಾಣದಲ್ಲಿ ವೈ-ಫೈ ಸೇವೆಯನ್ನು ಆರಂಭಿಸಿದೆ. ಪ್ರಯಾಣಿಕರು ಹೆಚ್ಚು ವೇಗದ ವೈ-ಫೈ ಸೇವೆ ಉಪಯೋಗಿಸಲು ಪ್ರೀಪೇಯ್ಡ್ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ.
ಭಾರತೀಯ ರೈಲ್ವೆ ಈ ಕುರಿತು ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ. ರೈಲು ನಿಲ್ದಾಣದಲ್ಲಿ ವೈ-ಫೈ ಸೌಲಭ್ಯವನ್ನು ಬಳಕೆ ಮಾಡಲು ರೈಲ್ ಟೆಲ್ ಪ್ರಿಪೇಯ್ಡ್ ಯೋಜನೆಗಳನ್ನು ಬಿಡುಗಡೆ ಮಾಡಿದೆ. ಪ್ರಯಾಣಿಕರು ಒಂದು ದಿನದಲ್ಲಿ ಮೊದಲ 30 ನಿಮಿಷ 1 ಎಂಬಿಪಿಎಸ್ ವೇಗದಲ್ಲಿ ಉಚಿತವಾಗಿ ವೈ-ಫೈ ಬಳಸಬಹುದು.
ವೇಗದ ವೈ-ಫೈ ಸೌಲಭ್ಯಗಳು 34 ಎಂಬಿಪಿಎಸ್ ತನಕ ಲಭ್ಯವಿದೆ. ಇದಕ್ಕಾಗಿ ಪ್ರಯಾಣಿಕರು ಪ್ರಿಪೇಯ್ಡ್ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳಬೇಕಿದೆ. ದೇಶದ 4 ಸಾವಿರಕ್ಕೂ ಅಧಿಕ ರೈಲು ನಿಲ್ದಾಣದಲ್ಲಿ ರೈಲ್ ವೈರ್ ಎಂಬ ಯೋಜನೆಯಡಿ ರೈಲ್ ಟೆಲ್ ವೈ-ಫೈ ಸೌಲಭ್ಯವನ್ನು ನೀಡುತ್ತಿದೆ.

ಪ್ರಿಪೇಯ್ಡ್ ಯೋಜನೆಯನ್ನು ಉಪಯೋಗಿಸಲು ಪ್ರಯಾಣಿಕರು ನೆಟ್ ಬ್ಯಾಂಕಿಂಗ್, ವ್ಯಾಲೆಟ್, ಕ್ರೆಡಿಟ್ ಕಾರ್ಡ್ ಹೀಗೆ ಸುಲಭವಾಗಿ ಹಣವನ್ನು ಪಾವತಿ ಮಾಡುವ ಅವಕಾಶವನ್ನು ನೀಡಲಾಗಿದೆ. ಜನರು ತಮಗೆ ಅಗತ್ಯವಿರುವ ಯೋಜನೆಯನ್ನು ಆಯ್ಕೆ ಮಾಡಿಕೊಂಡು ಹಣ ಪಾವತಿಸಬಹುದು.
ರೈಲ್ವೆ ನಿಲ್ದಾಣವನ್ನು ಡಿಲಿಟಲೀಕರಣಗೊಳಿಸುವ ಉದ್ದೇಶದಿಂದ ವೈ-ಫೈ ವ್ಯವಸ್ಥೆಯನ್ನು ಮಾಡಲಾಗಿದೆ. ಭಾರತೀಯ ರೈಲ್ವೆ ಇಲಾಖೆ ಮಾಹಿತಿಯಂತೆ 5950 ನಿಲ್ದಾಣಗಳಲ್ಲಿ ಉತ್ತಮ ಗುಣಮಟ್ಟದ ವೇಗದ ಇಂಟರ್ ನೆಟ್ ವ್ಯವಸ್ಥೆ ಇದೆ. ನಿಲ್ದಾಣಕ್ಕೆ ಬರುವ ಜನರು ಎಸ್ಎಂಎಸ್ ಮೂಲಕ ಬರುವ ಓಟಿಪಿ ಆಧರಿಸಿ ವೈ-ಫೈ ಉಪಯೋಗಿಸಬಹುದಾಗಿದೆ.
ಕೋವಿಡ್ ಲಾಕ್ ಡೌನ್ ಪರಿಸ್ಥಿತಿಗೂ ಮೊದಲು ತಿಂಗಳಿಗೆ 2.9 ಕೋಟಿ ಜನರು ರೈಲು ನಿಲ್ದಾಣದ ವೈ-ಫೈ ಸೌಲಭ್ಯವನ್ನು ಉಪಯೋಗಿಸುತ್ತಿದ್ದರು. ರೈಲುಗಳ ಸಂಚಾರ ಸಹಜ ಸ್ಥಿತಿಗೆ ಬಂದರೆ ವೈ-ಫೈ ಬಳಕೆಯಿಂದಲೇ ವಾರ್ಷಿಕ 10-15 ಕೋಟಿ ಆದಾಯದ ನಿರೀಕ್ಷೆ ಮಾಡಲಾಗಿದೆ.
ಪ್ರಿಪೇಯ್ಡ್ ಯೋಜನೆಯನ್ನು ಪ್ರಾಯೋಗಿಕವಾಗಿ ಉತ್ತರ ಪ್ರದೇಶದ 20 ರೈಲು ನಿಲ್ದಾಣಗಳಲ್ಲಿ ಪರಿಚಯಿಸಲಾಗಿದೆ. ಪ್ರಯಾಣಿಕರ ಪ್ರತಿಕ್ರಿಯೆ ನೋಡಿಕೊಂಡು ಬೇರೆ ನಿಲ್ದಾಣಗಳಲ್ಲಿ ಪರಿಚಯಿಸಲು ತೀರ್ಮಾನಿಸಲಾಗಿದೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
ಭಾರತದ ಏಕೈಕ ರೈಲು ಸಂಪರ್ಕವಿಲ್ಲದ ರಾಜ್ಯ ಸಿಕ್ಕಿಂ: ಕಾರಣ ಮತ್ತು ಪ್ರಯಾಣ ಮಾರ್ಗಗಳ ವಿವರ -
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು? -
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications