ರೈಲ್ವೆ ಬಜೆಟ್ 2016 : ಮಾಜಿ ರೈಲ್ವೆ ಸಚಿವರು ಹೇಳುವುದೇನು?
ಬೆಂಗಳೂರು, ಫೆಬ್ರವರಿ 26 : ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಅವರು ಮಂಡನೆ ಮಾಡಿದ 2016-17ನೇ ಸಾಲಿನ ರೈಲ್ವೆ ಬಜೆಟ್ಗೆ ರಾಜಕೀಯ ಪಕ್ಷಗಳು, ಜನರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಾಜಿ ರೈಲ್ವೆ ಸಚಿವರು ಬಜೆಟ್ ಬಗ್ಗೆ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ರೈಲ್ವೆ ಸಚಿವರಾಗಿ ಎರಡನೇ ಬಾರಿಗೆ ಬಜೆಟ್ ಮಂಡನೆ ಮಾಡಿರುವ ಸುರೇಶ್ ಪ್ರಭು ಅವರು ಹೊಸ ಯೋಜನೆಗಳನ್ನು ಘೋಷಣೆ ಮಾಡುವುದಕ್ಕಿಂತ, ಹಳೆಯ ಘೋಷಣೆಗಳನ್ನು ಕಾರ್ಯಗತಗೊಳಿಸಲು ಒತ್ತು ನೀಡಿದ್ದಾರೆ. [ರೈಲ್ವೆ ಬಜೆಟ್ ಪ್ರಮುಖ ಅಂಶಗಳು]
ಮಾಜಿ ರೈಲ್ವೆ ಸಚಿವ ಡಿ.ವಿ.ಸದಾನಂದ ಗೌಡ ಅವರು, 'ರೈಲು ಸೇವೆ ಜನರಿಗೆ ಹತ್ತಿರವಾಗುವಂತೆ ಎಲ್ಲಾ ವರ್ಗಕ್ಕೂ ಬಜೆಟ್ ನಲ್ಲಿ ಆದ್ಯತೆ ನೀಡಲಾಗಿದೆ. ಪ್ರಗತಿಪರ ಮತ್ತು ದೂರದರ್ಶಿತ್ವದ ಬಜೆಟ್' ಎಂದು ಬಣ್ಣಿಸಿದ್ದಾರೆ. [ರೈಲ್ವೆ ಬಜೆಟ್ 2016-17 : ಕರ್ನಾಟಕಕ್ಕೆ ಸಿಕ್ಕಿದ್ದೇನು?]
ಮಾಜಿ ರೈಲ್ವೆ ಸಚಿವರಾದ ಲಾಲೂ ಪ್ರಸಾದ್ ಯಾದವ್, ನಿತೀಶ್ ಕುಮಾರ್, ಪವನ್ ಕುಮಾರ್ ಬನ್ಸಾಲ್ ಬಜೆಟ್ನಲ್ಲಿ ಹೊಸದೇನು ಇಲ್ಲ ಎಂದು ಟೀಕಿಸಿದ್ದಾರೆ. ಬಜೆಟ್ ಬಗ್ಗೆ ಯಾರು ಏನು ಹೇಳಿದರು? ಚಿತ್ರಗಳಲ್ಲಿ ನೋಡಿ...

'ನಿರಾಶದಾಯಕ ಬಜೆಟ್'
ಮಾಜಿ ರೈಲ್ವೆ ಸಚಿವ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, 'ರೈಲ್ವೆ ಬಜೆಟ್ ನಿರಾಶದಾಯಕ' ಎಂದು ಹೇಳಿದ್ದಾರೆ. 'ಬಜೆಟ್ನಲ್ಲಿ ಸ್ವಚ್ಛತೆ, ಭದ್ರತೆ, ರೈಲುಗಳು ಸರಿಯಾದ ಸಮಯಕ್ಕೆ ಬರುವಂತೆ ಮಾಡಲು ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ತೈಲ ಬೆಲೆ ಇಳಿಕೆಯಾಗಿದೆ. ಪ್ರಯಾಣದರ ಕಡಿಮೆ ಮಾಡಬೇಕಿತ್ತು' ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

ಎಲ್ಲಾ ರಾಜ್ಯಗಳಿಗೂ ಸಮಪಾಲು
'ರೈಲ್ವೆ ಬಜೆಟ್ನಲ್ಲಿ ದೇಶದ ಎಲ್ಲಾ ರಾಜ್ಯಗಳಿಗೂ ಸಮಪಾಲು ನೀಡಲಾಗಿದೆ. ಎಲ್ಲಾ ವರ್ಗದ ಶ್ರೀಸಾಮಾನ್ಯರಿಗೆ ರೈಲು ಸೇವೆ ಹತ್ತಿರವಾಗುವಂತೆ ವಿಶೇಷ ಆದ್ಯತೆ ಕೊಡಲಾಗಿದೆ. ಇದು ಪ್ರಗತಿಪರ ಮತ್ತು ದೂರದರ್ಶಿತ್ವ ಹೊಂದಿರುವ ಬಜೆಟ್' ಎಂದು ಮಾಜಿ ರೈಲ್ವೆ ಸಚಿವ ಡಿ.ವಿ.ಸದಾನಂದ ಗೌಡ ಪ್ರತಿಕ್ರಿಯೆ ನೀಡಿದ್ದಾರೆ.

ಹಣಕಾಸನ್ನು ತರುವುದು ಕಷ್ಟ
'ಹೊಸ ಯೋಜನೆಗಳಿಗೆ ಹಣವನ್ನು ತರಲು ಬಾಹ್ಯ ಮೂಲಗಳನ್ನು ಅವಲಂಬಿಸಬೇಕಾಗುತ್ತದೆ. ಯೋಜನೆಗಳನ್ನು ಜಾರಿ ಮಾಡುವುದು ಕಷ್ಟ. ಆದಾಯ ಸಂಗ್ರಹಣೆಗೆ ಬಜೆಟ್ನಲ್ಲಿ ಒತ್ತು ನೀಡಬೇಕಾಗಿತ್ತು' ಎಂದು ಮಾಜಿ ರೈಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಬಜೆಟ್ ಜನರಿಗೆ ಮೋಸ ಮಾಡಿದೆ
'ದೇಶಾದ್ಯಂತ ಬಜೆಟ್ ಹಳಿ ತಪ್ಪಿದೆ. ಪ್ರಯಾಣಿಕರ ಭದ್ರತೆಗಾಗಿ ಕ್ರಮಗಳನ್ನು ಕೈಗೊಂಡಿಲ್ಲ. ಬಜೆಟ್ ಜನರಿಗೆ ಮೋಸ ಮಾಡಿದೆ' ಎಂದು ಮಾಜಿ ರೈಲ್ವೆ ಸಚಿವ ಲಾಲೂ ಪ್ರಸಾದ್ ಯಾದವ್ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ. 'ಇಲಾಖೆಗೆ ಹಣಕಾಸಿನ ನೆರವನ್ನು ನೀಡುವಂತೆ ಸರ್ಕಾರವನ್ನು ನಾನೆಂದೂ ಕೇಳಿರಲಿಲ್ಲ' ಎಂದು ಅವರು ಹೇಳಿದ್ದಾರೆ.

ಬಜೆಟ್ನಲ್ಲಿ ಹೊಸದೇನು ಇಲ್ಲ
'ಈ ಬಾರಿಯ ರೈಲ್ವೆ ಬಜೆಟ್ನಲ್ಲಿ ಹೊಸದೇನು ಇಲ್ಲ' ಎಂದು ಮಾಜಿ ರೈಲ್ವೆ ಸಚಿವ ಪವನ್ ಕುಮಾರ್ ಬನ್ಸಾಲ್ ಹೇಳಿದ್ದಾರೆ. 'ಎರಡು ಲೋಕೋಮೇಟಿವ್ ಇಂಜಿನ್ ಫ್ಯಾಕ್ಟರಿಗಳನ್ನು ಸ್ಥಾಪನೆ ಮಾಡುವ ಕುರಿತು ನಾನು ಸಚಿವನಾಗಿದ್ದಾಗಲೇ ತೀರ್ಮಾನ ಕೈಗೊಳ್ಳಲಾಗಿತ್ತು' ಇದರಲ್ಲಿ ಹೊಸತಿಲ್ಲ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications