ಗುಜರಾತ್-ಮುಂಬೈ ರೈಲಿನಲ್ಲಿ ರೈಲ್ವೇ ರಕ್ಷಣಾ ಪಡೆ ಯೋಧನಿಂದ ಗುಂಡಿನ ದಾಳಿ, 4 ಮಂದಿ ಸಾವು!
ಗುಜರಾತ್ನಿಂದ ಮುಂಬೈಗೆ ತೆರಳುತ್ತಿದ್ದ ರೈಲಿನಲ್ಲಿ ರೈಲ್ವೇ ಸಂರಕ್ಷಣಾ ಪಡೆ (ಆರ್ಪಿಎಫ್) ಯೋಧ ನಾಲ್ವರನ್ನು ಗುಂಡಿಕ್ಕಿ ಕೊಂದಿದ್ದಾನೆ. ಬಲಿಯಾದವರಲ್ಲಿ ಮೂವರು ಪ್ರಯಾಣಿಕರು ಮತ್ತು ಆರ್ಪಿಎಫ್ ಸಹಾಯಕ ಸಬ್-ಇನ್ಸ್ಪೆಕ್ಟರ್ (ಎಎಸ್ಐ) ಸೇರಿದ್ದಾರೆ.
ರೈಲ್ವೆ ಸಂರಕ್ಷಣಾ ಪಡೆಯ ಕಾನ್ಸ್ಟೆಬಲ್ ಚೇತನ್ ಎಂಬುವವರು ನಾಲ್ವರ ಮೇಲೆ ಗುಂಡು ಹಾರಿಸಿದ್ದಾರೆ. ಸೋಮವಾರ ಮುಂಜಾನೆ 5 ಗಂಟೆ ಸುಮಾರಿಗೆ ವಾಪಿಯಿಂದ ಬೊರಿವಲಿಯಿಂದ ಮೀರಾ ರೋಡ್ ನಿಲ್ದಾಣದ ನಡುವೆ ಈ ಘಟನೆ ನಡೆದಿದೆ. ಆರೋಪಿ ಕಾನ್ಸ್ಟೆಬಲ್ನನ್ನು ಮುಂಬೈ ರೈಲ್ವೇ ಪೊಲೀಸರು ಬಂಧಿಸಿದ್ದಾರೆ.ಘಟನೆಗೆ ಕಾರಣವೇನು ಎನ್ನುವ ಬಗ್ಗೆ ಇನ್ನೂ ತಿಳಿದು ಬಂದಿಲ್ಲ.

ಜೈಪುರ ಎಕ್ಸ್ಪ್ರೆಸ್ನ (ರೈಲು ಸಂಖ್ಯೆ 12956) B5 ಕೋಚ್ನಲ್ಲಿ ಈ ಘಟನೆ ನಡೆದಿದೆ.ಪೊಲೀಸರ ಹೇಳಿಕೆಯ ಪ್ರಕಾರ, "ರೈಲು ಸಂಖ್ಯೆ 12956 ರಲ್ಲಿ 31.7.23 ರಂದು ಬೆಳಿಗ್ಗೆ 5.23 ಕ್ಕೆ ಬಿ 5 ಕೋಚ್ನಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ. ಬೆಂಗಾವಲು ಕರ್ತವ್ಯದಲ್ಲಿದ್ದ ಸಿ.ಟಿ.ಚೇತನ್ ಅವರು ಎಸ್ಕಾರ್ಟ್ ಪ್ರಭಾರಿ ಎಎಸ್ಐ ಟಿಕಾ ರಾಮ್ ಮೇಲೆ ಗುಂಡು ಹಾರಿಸಿರುವುದು ದೃಢಪಟ್ಟಿದೆ. ರೈಲು BVI ಗೆ ಆಗಮಿಸಿದೆ ಮತ್ತು ಮುಂಗಡ ಮಾಹಿತಿಯ ಪ್ರಕಾರ, ASI ಜೊತೆಗೆ 3 ನಾಗರಿಕರ ಸಾವುನೋವುಗಳು ವರದಿಯಾಗಿದೆ. ಕಾನ್ಸ್ಟೆಬಲ್ ಸಿಕ್ಕಿಬಿದ್ದಿದ್ದಾನೆ'.
'ವಿವರವಾದ ವರದಿಯನ್ನು ನೀಡಲು ಡಿಸಿಪಿ ಉತ್ತರ ಜಿಆರ್ಪಿಗೆ ಮಾಹಿತಿ ನೀಡಲಾಗಿದೆ" ಎಂದು ಪೊಲೀಸ್ ಹೇಳಿಕೆ ಸೇರಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications