ರೈಲ್ವೆ ಇಲಾಖೆಯಲ್ಲಿನ್ನು ಅಧಿಕಾರಿಗಳ ಶಿಷ್ಟಾಚಾರಕ್ಕೆ ಕೊನೆ
ನವದೆಹಲಿ, ಅಕ್ಟೋಬರ್ 9: ಈ ವರೆಗೆ ಜಾರಿಯಲ್ಲಿದ್ದ ಶಿಷ್ಟಾಚಾರಗಳಿಗೆ ಕೊನೆ ಹೇಳಲು ರೈಲ್ವೆ ಸಚಿವಾಲಯವು ತೀರ್ಮಾನಿಸಿದೆ. ಅದರ ಭಾಗವಾಗಿ ವಿಐಪಿ ಸಂಸ್ಕೃತಿ ಕೊನೆಯಾಗಲಿದೆ.
ರೈಲ್ವೆ ಮಂಡಳಿ ಅಧ್ಯಕ್ಷರು ಮತ್ತು ಸದಸ್ಯರು ವಲಯಗಳಿಗೆ ಭೇಟಿ ನೀಡಲು ಬರುವಾಗ ಹಾಗೂ ಆ ನಂತರ ತೆರಳುವಾಗ ಪ್ರಧಾನ ವ್ಯವಸ್ಥಾಪಾಕರು ಹಾಜರಿರಬೇಕು ಎಂಬ ಶಿಷ್ಟಾಚಾರ ಮೂವತ್ತಾರು ವರ್ಷಗಳಿಂದ ಜಾರಿಯಲ್ಲಿದೆ. ಇಂಥ ಹಲವು ಶಿಷ್ಟಾಚಾರ ಇನ್ನು ಮುಂದೆ ಇರುವುದಿಲ್ಲ.

ವಿಮಾನ ನಿಲ್ದಾಣ ಹಾಗೂ ರೈಲು ನಿಲ್ದಾಣದಲ್ಲಿ ರೈಲ್ವೆ ಮಂಡಳಿ ಅಧ್ಯಕ್ಷರು ಹಾಗೂ ಸದಸ್ಯರಿಗೆ ಅನುಸರಿಸುತ್ತಿದ್ದ ಶಿಷ್ಟಾಚಾರ ತಕ್ಷಣದಿಂದಲೇ ಅನ್ವಯ ಆಗುವಂತೆ ತೆಗೆದುಹಾಕಲಾಗಿದೆ. "ಯಾವುದೇ ರೈಲ್ವೆ ಅಧಿಕಾರಿ ಹೂಗುಚ್ಛ ಅಥವಾ ಉಡುಗೊರೆ ಕೊಡುವುದನ್ನು ಪ್ರೋತ್ಸಾಹಿಸುವುದಿಲ್ಲ" ಎಂದು ರೈಲ್ವೆ ಮಂಡಳಿ ಅಧ್ಯಕ್ಷ ಅಶ್ವನಿ ಲೋಹಾನಿ ತಿಳಿಸಿದ್ದಾರೆ.
ಇನ್ನು ರೈಲ್ವೆಯ ಹಿರಿಯ ಅಧಿಕಾರಿಗಳ ಮನೆಗಳಲ್ಲಿ ಸಹಾಯಕರಂತೆ ಕೆಲಸ ನಿರ್ವಹಿಸುತ್ತಿರುವವರನ್ನೂ ಬಿಡುಗಡೆಗೊಳಿಸುವಂತೆ ಸೂಚಿಸಿದ್ದು, ಕಳೆದ ಒಂದು ತಿಂಗಳಲ್ಲಿ ಆರರಿಂದ ಏಳು ಸಾವಿರ ನೌಕರರು ತಮ್ಮ ಕೆಲಸಗಳಿಗೆ ಮರಳಿದ್ದಾರೆ. ತುಂಬ ವಿಶೇಷ ಪ್ರಕರಣಗಳನ್ನು ಹೊರತುಪಡಿಸಿದಂತೆ, ಎಲ್ಲರೂ ತಮ್ಮ ಕೆಲಸಗಳಿಗೆ ಮರಳಲಿದ್ದಾರೆ.
ಅಷ್ಟೇ ಅಲ್ಲ, ಸ್ವತಃ ರೈಲ್ವೆ ಸಚಿವ ಪಿಯೂಷ್ ಗೋಯಲ್ ಸೂಚನೆ ನೀಡಿದ್ದು, ಹಿರಿಯ ಅಧಿಕಾರಿಗಳು, ಮೇಲ್ ಸ್ತರದ ಅಧಿಕಾರಿಗಳು ದುಬಾರಿ ಪ್ರಯಾಣಗಳನ್ನು ಬಿಟ್ಟು ಸಾಮಾನ್ಯ ಜನರ ಜತೆಗೆ ಬೆರೆಯುವಂತೆ ತಿಳಿಸಿದ್ದಾರೆ.
"ಈ ರೀತಿಯ ಶಿಷ್ಟಾಚಾರಗಳ ಹಿಂದೆ ಕಾರಣಗಳಿದ್ದವು. ಅವುಗಳೇನು ಅಂತ ನನ್ನಿಂದ ಹೇಳುವುದಕ್ಕೆ ಕಷ್ಟ. ಆದರೆ ಈಗ ಅವುಗಳಲ್ಲಿ ತರ್ಕವಿಲ್ಲ ಅನ್ನಿಸಬಹುದು. ಆದರೆ ಅಧಿಕಾರಿಗಳಿಗೆ ಏನು ಮಾಡಬೇಕು ಹಾಗೂ ಮಾಡಬಾರದು ಎಂಬ ಸ್ಪಷ್ಟ ಮಾರ್ಗಸೂಚಿ ಇದೆ. ಅವುಗಳನ್ನು ಆಗಾಗ ಪರಿಶೀಲಿಸಲಾಗುತ್ತದೆ" ಎಂದು ಹೆಸರು ಹೇಳಲಿಚ್ಛಿಸದ ರೈಲ್ವೆ ಮಂಡಳಿ ಮಾಜಿ ಸದಸ್ಯರೊಬ್ಬರು ಅಭಿಪ್ರಾಯ ಪಟ್ಟಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications