ನ.14ರಿಂದ ಶ್ರೀರಾಮಚಂದ್ರನ ಮಾರ್ಗದಲ್ಲಿ ರಾಮಾಯಣ ಎಕ್ಸ್ ಪ್ರೆಸ್
ಬೆಂಗಳೂರು, ನವೆಂಬರ್ 13: ರಾಮಾಯಣ ಕಾಲದ ಪುರಾಣ ಪ್ರಸಿದ್ಧ ನಗರಗಳನ್ನು ಸಂಪರ್ಕಿಸುವ, ಶ್ರೀರಾಮಚಂದ್ರ ಸಾಗಿದ ಮಾರ್ಗದಲ್ಲಿ ಸಂಚರಿಸುವ ವಿಶೇಷ ರೈಲು ರಾಮಾಯಣ ಎಕ್ಸ್ ಪ್ರೆಸ್ ಗೆ ನವೆಂಬರ್ 14ರಿಂದ ಚಾಲನೆ ಸಿಗಲಿದೆ.
ದೆಹಲಿಯ ಸಫ್ದರ್ಜಂಗ್ ರೈಲ್ವೆ ನಿಲ್ದಾಣ, ತಮಿಳುನಾಡಿನ ಮಧುರೈನಿಂದ ಏಕಕಾಲಕ್ಕೆ ಚಾಲನೆ ಸಿಗಲಿದೆ. 16 ದಿನಗಳ ಈ ಟೂರ್ ಪ್ಯಾಕೇಜ್ ನಲ್ಲಿ ಶ್ರೀರಾಮನ ಕಾಲದ ನಗರಗಳನ್ನು ವೀಕ್ಷಿಸಬಹುದಾಗಿದೆ. ಭಾರತವಲ್ಲದೆ ಶ್ರೀಲಂಕಾದ ನಗರಕ್ಕೂ ಸಂಪರ್ಕ ಸಿಗಲಿದೆ.
ಶ್ರೀ ರಾಮಾಯಣ ಯಾತ್ರಾ-ಶ್ರೀಲಂಕಾ ಯಾತ್ರೆ ವಿಶೇಷ ರೈಲಿನಲ್ಲಿ 800 ಮಂದಿ ಸಂಚರಿಸಬಹುದು. ದೆಹಲಿಯಿಂದ ಹೊರಟ ರೈಲು ಅಯೋಧ್ಯದಲ್ಲಿ ಮೊದಲಿಗೆ ತಲುಪಲಿದೆ. ಹನುಮನ್ ಗರ್ಹಿ ರಾಮ್ ಕೋಟ್ ಹಾಗೂ ಕನಕ್ ಭವನ್ ದೇಗುಲ ದರ್ಶಿಸಬಹುದು.

ನಂತರ ರಾಮಾಯಣ ಕಾಲದ ನಂದಿಗ್ರಾಮ, ಸೀತಾಮಾರ್ಹಿ, ಜನಕಪುರ, ವಾರಣಾಸಿ, ಪ್ರಯಾಗ್, ಶ್ರೀಂಗ್ವೇರ್ ಪುರ್, ಚಿತ್ರಕೂಟ, ನಾಸಿಕ್, ಹಂಪೆ ಹಾಗೂ ರಾಮೇಶ್ವರಂ ತಲುಪಲಿದೆ. ಸಫ್ದರ್ಜಂಗ್, ಗಾಜಿಯಾಬಾದ್, ಮೊರಾದಾಬಾದ್, ಬರೇಲಿ ಹಾಗೂ ಲಕ್ನೋ ಬೋರ್ಡಿಂಗ್ ತಾಣಗಳಾಗಿವೆ.
ಶ್ರೀಲಂಕಾದಿಂದ ಪ್ರಯಾಣಿಸುವವರಿಗೆ ಪ್ರತ್ಯೇಕ ಶುಲ್ಕ ಟಿಕೆಟ್ ಇರುತ್ತದೆ. ಶ್ರೀಲಂಕಾದಿಂದ ಪ್ರಯಾಣ ಆರಂಭಿಸಲು ಬಯಸುವವರು ಚೆನ್ನೈನಿಂದ ಕೊಲಂಬೋಗೆ ವಿಮಾನದಲ್ಲಿ ಪ್ರಯಾಣಿ ನಂತರ ರಾಮಾಯಣ ಯಾತ್ರಾ ಪ್ಯಾಕೇಜ್ ಪಡೆಯಬಹುದು. ಐ ಆರ್ ಸಿ ಟಿಸಿ 5ರಾತ್ರಿ/ 6 ದಿನಗಳ ಶ್ರೀಲಂಕಾ ಟೂರ್ ಪ್ಯಾಕೇಜ್ ಒಬ್ಬ ಪ್ರಯಾಣಿಕರಿಗೆ 36,970ರು ನಷ್ಟಿದೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
ಭಾರತದ ಏಕೈಕ ರೈಲು ಸಂಪರ್ಕವಿಲ್ಲದ ರಾಜ್ಯ ಸಿಕ್ಕಿಂ: ಕಾರಣ ಮತ್ತು ಪ್ರಯಾಣ ಮಾರ್ಗಗಳ ವಿವರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು? -
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications