ರೈಲ್ವೆ ಪ್ರಯಾಣಿಕರೇ ಗಮನಿಸಿ: ಜೂನ್ 1 ರಿಂದ ದೇಶದೆಲ್ಲೆಡೆ 200 ರೈಲುಗಳು ಸಂಚಾರ
ನವದೆಹಲಿ, ಮೇ 19: ಲಾಕ್ ಡೌನ್ 4.0 ಜಾರಿಯಲ್ಲಿರುವಾಗಲೇ ಶ್ರಮಿಕ್ ರೈಲು ಮತ್ತು ವಿಶೇಷ ರೈಲುಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಆದರೆ, ಪ್ರಯಾಣಿಕರ ರೈಲು ಸಂಚಾರ ಪೂರ್ಣಪ್ರಮಾಣದಲ್ಲಿ ಸಂಚಾರ ಆರಂಭಿಸಿಲ್ಲ.
ಜೂನ್ 30 ರವರೆಗೆ ಪ್ರಯಾಣಿಕರ ರೈಲು ಸಂಚಾರ ಇರುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಆದರೆ, ಜೂನ್ 1 ರಿಂದ ಸುಮಾರು 200ಕ್ಕೂ ಅಧಿಕ ರೈಲು ಸಂಚಾರ ಆರಂಭವಾಗಲಿದೆ ಎಂದು ರೈಲ್ವೆ ಸಚಿವ ಪಿಯೂಷ್ ಗೋಯೆಲ್ ಹೇಳಿದ್ದಾರೆ.
ಲಾಕ್ಡೌನ್ ಹಂತ ಹಂತವಾಗಿ ಸಡಿಲಗೊಳಿಸಲಾಗುತ್ತಿದ್ದು, ಜೂನ್ 1 ರಿಂದ ದೇಶದೆಲ್ಲೆಡೆ ಸುಮಾರು 200 ಪ್ರಯಾಣಿಕ ರೈಲುಗಳು ಸಂಚಾರ ಆರಂಭಿಸಲಿವೆ ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಮಂಗಳವಾರ(ಮೇ 19) ತಿಳಿಸಿದರು. ಈ 200 ನಾನ್ ಎಸಿ ರೈಲುಗಳು ಪ್ರತಿದಿನ ಸಂಚರಿಸಲಿವೆ. ಈ ರೈಲಿಗಳಿಗೆ ಶೀಘ್ರವೇ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಆರಂಭಗೊಳ್ಳಲಿದೆ ಎಂದರು.

ಜೂನ್ 01 ರಿಂದ ಎಸಿ ಅಲ್ಲದ ದ್ವಿತೀಯ ದರ್ಜೆಯ 200 ರೈಲುಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು. ಶ್ರಮಿಕ ರೈಲುಗಳು ಎಂದಿನಂತೆ ವಲಸೆ ಕಾರ್ಮಿಕರನ್ನು ನಿಗದಿತ ತಾಣಕ್ಕೆ ಸೇರಿಸುತ್ತಿವೆ. ಮೇ 1ರಿಂದ ಇಲ್ಲಿ ತನಕ 1595 ಶ್ರಮಿಕ ವಿಶೇಷ ರೈಲುಗಳು ಸಂಚರಿಸಿದ್ದು, 21 ಲಕ್ಷ ವಲಸಿಗರನ್ನು ಅವರ ಊರಿಗೆ ತಲುಪಿಸಿದೆ. ಈ ಬಗ್ಗೆ ಉತ್ತರಪ್ರದೇಶದಲ್ಲಿ ಅಧಿಕ 837 ರೈಲು ಹಾಗೂ ಬಿಹಾರ 428 ರೈಲು ಮತ್ತು ಮಧ್ಯಪ್ರದೇಶದಲ್ಲಿ 100 ವಿಶೇಷ ರೈಲು ಸಂಚಾರ ಕಂಡಿದೆ ಎಂದು ಹೇಳಿದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications