Rain Alert: ಭಾರೀ ಮಳೆ ಮುನ್ಸೂಚನೆಯಿಂದ ಈ ರಾಜ್ಯಗಳ ರೈತರಿಗೆ ಆತಂಕ ಶುರು-ಕಾರಣ ಏನು ಗೊತ್ತೇ?
Rain Alert: ದೇಶದ ಹಲವೆಡೆ ಇದೀಗ ಮಳೆರಾಯ ಮೆಲ್ಲಗೆ ಕರುಣೆ ತೋರಿದ್ದಾನೆ. ಇನ್ನುಳಿದೆಡೆ ತಾಪಮಾನ ಏರಿಕೆಯಾಗುತ್ತಲೇ ಇದೆ. ಇನ್ನು ಏಪ್ರಿಲ್ 20ರ ಒಳಗಡೆ ಹಲವು ರಾಜ್ಯಗಳಲ್ಲಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಯಾವ್ಯಾವ ಜಿಲ್ಲೆಗಳಲ್ಲಿ ಯಾವಾಗ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಪಂಜಾಬ್ ಮತ್ತು ಹರಿಯಾಣದಲ್ಲಿ ಏಪ್ರಿಲ್ 13-15ರ ಅವಧಿಯಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಪಶ್ಚಿಮದಲ್ಲಿ ಗಾಳಿಯು ಏಪ್ರಿಲ್ 12ರಿಂದ ವಾಯುವ್ಯ ಭಾರತದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಈ ಹಿನ್ನೆಲೆ 13-15 ರ ಅವಧಿಯಲ್ಲಿ ಪಂಜಾಬ್ ಮತ್ತು ಹರಿಯಾಣದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ವ್ಯಾಪಕವಾಗಿ ಮಳೆಯಾಗುವ ಸಾಧ್ಯೆತೆಯಿದೆ. ಇನ್ನು ಗಾಳಿ ವೇಗವು ಗಂಟೆಗೆ 30-50 ಕಿಲೋ ಮೀಟರ್ ತಲುಪುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಪಂಜಾಬ್ ಮುಖ್ಯ ಕಾರ್ಯದರ್ಶಿಗೆ ಕಳುಹಿಸಲಾದ ವಿಶೇಷ ಸಂದೇಶದಲ್ಲಿ, IMD ಏಪ್ರಿಲ್ 13 ಮತ್ತು 14ರಂದು ದೇಶದ ಹಲವೆಡೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇನ್ನು ಕೆಲವು ಸ್ಥಳಗಳಲ್ಲಿ ಏಪ್ರಿಲ್ 15ರಂದು ಕೆಲವೆಡೆ ಸಾಧಾರಣ ಮಳೆಯಾಗಲಿ ಎಂದು ತಿಳಿಸಲಾಗಿದೆ.
ಏಪ್ರಿಲ್ 13ರಂದು ಪ್ರತ್ಯೇಕ ಸ್ಥಳಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಇನ್ನು ಗೋಧಿ ಬೆಳೆ ಫಸಲಿಗೆ ಬರುವ ಹಂತದಲ್ಲಿದೆ. ಆದ್ದರಿಂದ ಗೋಧಿ ಕೊಯ್ಲು ಮಾಡುವ ಸಮಯವಾಗಿದ್ದು, ಈ ಹಂತದಲ್ಲಿ ಮಳೆ, ಹೆಚ್ಚಿನ ವೇಗದ ಗಾಳಿ ಬೀಸಿದರೆ, ಅದು ಬೆಳೆಯನ್ನು ನೆಲಸಮಗೊಳಿಸುತ್ತದೆ ಮತ್ತು ಕಟಾವು ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುತ್ತದೆ ಎನ್ನುತ್ತಾರೆ ಪಂಬಾಜ್, ಹರಿಯಾಣದ ರೈತರು.
ಈಗಾಗಲೇ ಮಾರ್ಚ್ 30ರ ಹಿಂದಿನ ಆಲಿಕಲ್ಲು ಮಳೆಯಿಂದ ಮಾಲ್ವಾ ಪ್ರದೇಶದ ವಿವಿಧ ಭಾಗಗಳಲ್ಲಿ ಬೆಳೆ ನೆಲಸಮವಾಗಿದ್ದು, ಮತ್ತೆ ಇದೀಗ ಮಳೆ ಮುನ್ಸೂಚನೆ ಇರುವುದರಿಂದ ಈ ಭಾಗದ ರೈತರು ಆತಂಕಕ್ಕೆ ಒಳಗಾಗಿದ್ದಾರೆ.
ಇನ್ನು IMD ಮುನ್ಸೂಚನೆಯ ಪ್ರಕಾರ, ಏಪ್ರಿಲ್ 7-9 ರವರೆಗೆ ಗೋವಾದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಆದರೆ ಈ ವೇಳೆ ಯಾವುದೇ ಬದಲಾವಣೆಗಳಾಗಿಲ್ಲ, ಬದಲಿಗೆ ತಾಪಮಾನದ ಪ್ರಮಾಣ ಹೆಚ್ಚಾಗಿತ್ತು
ಗೋವಾದಲ್ಲಿ ಏಪ್ರಿಲ್ 11 ರವರೆಗೆ ಕನಿಷ್ಠ ತಾಪಮಾನ ಏರಿಳಿತ ಆಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನ ನೀಡಿದೆ. ಇನ್ನು ಪಣಜಿಯಲ್ಲಿ ಗರಿಷ್ಠ ತಾಪಮಾನ 33.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ತಿಳಿಸಿದೆ.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications