Winter Rain Update: ಮಾಸಿದ ಮಂಜು, ಬಿಸಿಯಾದ ಬಿಸಿಲು, ಮತ್ತೆ ಮಳೆ: ಮುಂದಿನ 48 ಗಂಟೆಗಳಲ್ಲಿ ಈ ಭಾಗದಲ್ಲಿ ವರುಣ ಅರ್ಭಟ
ಚಳಿ ಚಳಿ ಅಂತಿದ್ದ ಜನ ಈಗ ಬಿಸಿ ಬಿಸಿ ಬಿಸಿಲು ಅಂತಿದ್ದಾರೆ. ಈ ನಡುವೆ ಮಳೆರಾಯನ ಕಣ್ಣಾಮುಚ್ಚಾಲೆ ಆಟ ಕೂಡ ಮುಂದುವರೆದಿದೆ. ದೇಶದ ಹಲವೆಡೆ ಮಂಜು ಮುಸುಕಿದ ವಾತಾವರಣವಿದ್ದರೆ, ಕೆಲವೆಡೆ ಮೈ ಸುಡುವ ಬಿಸಿಲು ಇದೆ. ಇನ್ನೂ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಈ ಚಳಿ ಬಿಸಿಲು ಹಾಗೂ ಮಳೆ ಆಟದಲ್ಲಿ ಮನುಷ್ಯನ ಆರೋಗ್ಯ ಹದಗೆಡುತ್ತಿದೆ. ಹೌದು.... ದೇಶದ ಹಲವೆಡೆ ಈ ವಾತಾವರಣ ಮನುಷ್ಯನಿಗೆ ಒಗ್ಗಿಕ್ಕೊಳಲು ಸಾಧ್ಯವಾಗುತ್ತಿಲ್ಲ. ಬೆಳಿಗ್ಗೆ ಚುಮು ಚುಮು ಚಳಿ, ಸೂರ್ಯ ಹುಟ್ಟುತ್ತಿದ್ದಂತೆ ಮೈ ಸುಡುವ ಬಿಸಿಲು, ಇದರ ನಡುವೆ ಮಳೆ ಕೆಲವೊಮ್ಮೆ ಇವೆಲ್ಲವೂ ಒಂದೇ ದಿನ ನಡೆದು ಹೋಗುತ್ತವೆ.

ಚಳಿಗಾಲ ಮುಗಿಯುತ್ತಿದ್ದಂತೆ ಬೇಸಿಗೆ ಕಾಲ ಬರುವುದು ವಾಡಿಕೆ. ಆದರೆ ಈ ಚಳಿ ಬಿಸಿಲು ನಡುವೆ ಮಳೆಯಾರ ಆಗಾಗ ಎಂಟ್ರಿ ಕೊಡುತ್ತಿದೆ. ಹೌದು... ಮುಂದಿನ 48 ಗಂಟೆಗಳಲ್ಲಿ ಈ ಭಾಗದಲ್ಲಿ ವರುಣ ಅರ್ಭಟ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಹೀಗಾಗಿ ಕೆಲ ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಮೈಕೊರೆಯೋ ಚಳಿಯ ಅಬ್ಬರ ಇರಲಿದೆ. ಹಾಗಾದರೆ ಎಲ್ಲೆಲ್ಲಿ ಇಂದಿನ ವಾತಾವರಣ ಹೇಗಿರಲಿದೆ ಎಂದು ತಿಳಿಯೋಣ. ಹವಾಮಾನಶಾಸ್ತ್ರಜ್ಞರ ಪ್ರಕಾರ ಹಲವೆಡೆ ಮಳೆ ಮತ್ತು ಹಿಮಪಾತದೊಂದಿಗೆ, ಅಧಿಕ ಚಳಿಯೂ ಇರಲಿದೆ. ಜನವರಿ 31 ರಿಂದ ಪಶ್ಚಿಮ ಹಿಮಾಲಯ ಪ್ರದೇಶ ಮತ್ತು ವಾಯುವ್ಯ ಭಾರತದ ಪಕ್ಕದ ಬಯಲು ಪ್ರದೇಶಗಳ ಮೇಲೆ ಹವಾಮಾನ ವೈಪರೀತ್ಯದ ಪರಿಣಾಮ ಬೀರಬಹುದು.
ಇದರಿಂದಾಗಿ ಗಿಲ್ಗಿಟ್, ಬಾಲ್ಟಿಸ್ತಾನ್ ಮತ್ತು ಮುಜಫರಾಬಾದ್, ಜಮ್ಮು ಮತ್ತು ಕಾಶ್ಮೀರ, ಲಡಾಖ್ ಹಾಗೂ ಹಿಮಾಚಲ ಪ್ರದೇಶದ ಕೆಲವು ಪ್ರದೇಶಗಳಲ್ಲಿ ಹಿಮಪಾತವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆಯಲ್ಲಿ ನೀಡಿದೆ.
ಇದರಿಂದಾಗಿ ವಾಯುವ್ಯ ಭಾರತದ ಹಲವು ಭಾಗಗಳಲ್ಲಿ ಮುಂದಿನ 3-5 ದಿನಗಳಲ್ಲಿ ಕನಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಪೂರ್ವ ಉತ್ತರ ಪ್ರದೇಶದ ವಿವಿಧ ಭಾಗಗಳು ಸೇರಿದಂತೆ ಪಂಜಾಬ್, ಹರಿಯಾಣದಲ್ಲಿ ಚಳಿಗಾಳಿ ಬೀಸಲಿದೆ ಎನ್ನಲಾಗಿದೆ.
ಪಶ್ಚಿಮ ಉತ್ತರ ಪ್ರದೇಶ, ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ಬಿಹಾರದ ಪ್ರತ್ಯೇಕ ಭಾಗಗಳಲ್ಲಿ ದಟ್ಟವಾದ ಮಂಜು ಕಂಡು ಬರಲಿದೆ. ಬಿಹಾರದ ಕೆಲವು ಭಾಗಗಳಲ್ಲಿ ತೀವ್ರ ಚಳಿಯ ಪರಿಸ್ಥಿತಿ ಮುಂದಿನ 2 ದಿನಗಳವರೆಗೆ ಮುಂದುವರಿಯುವ ಸಾಧ್ಯತೆಯಿದೆ. ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಶೀತ ವಾತಾವರಣ ಇರುತ್ತದೆ ಎಂದು ಐಎಂಡಿ ತಿಳಿಸಿದೆ.
ಕೆಲ ರಾಜ್ಯಗಳಲ್ಲಿ ಮಳೆ:-
ಇಂದಿನ ಹವಾಮಾನದ ಕುರಿತು ಮಾತನಾಡುವುದಾದರೆ, ಮುಂದಿನ 2 ದಿನಗಳಲ್ಲಿ ದೇಶದ ಕೆಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಸ್ಕೈಮೆಟ್ ಹವಾಮಾನ ವರದಿಯ ಪ್ರಕಾರ, ಹವಾಮಾನ ವೈಪರೀತ್ಯದಿಂದಾಗಿ ಗಿಲ್ಗಿಟ್ ಬಾಲ್ಟಿಸ್ತಾನ್, ಮುಜಫರಾಬಾದ್, ಲಡಾಖ್ ಮತ್ತು ಜಮ್ಮು ಕಾಶ್ಮೀರದಲ್ಲಿ ಸಾಧಾರಣ ಮಳೆಯೊಂದಿಗೆ ಹಿಮಪಾತವಾಗುವ ಸಾಧ್ಯತೆ ಇದೆ.
ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಮತ್ತು ಉತ್ತರಾಖಂಡದ ಮೇಲಿನ ಪ್ರದೇಶಗಳಲ್ಲಿ ಲಘು ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ. ಇಂದು ಮತ್ತು ನಾಳೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮತ್ತೊಂದೆಡೆ ಅರುಣಾಚಲ ಪ್ರದೇಶ, ತಮಿಳುನಾಡು, ಸಿಕ್ಕಿಂ, ಅಸ್ಸಾಂ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications