ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ತಗ್ಗಿದ ಮಳೆಯ ಅಬ್ಬರ

By Nayana
|
Google Oneindia Kannada News

Recommended Video

Monsoon 2018 Updates: ಕರ್ನಾಟಕ ಕರಾವಳಿಯಲ್ಲಿ ವರುಣನ ಅಬ್ಬರದಿಂದ ಕೊಂಚ ಬಿಡುವು | Oneindia Kannada

ಬೆಂಗಳೂರು, ಜು.20: ಕಳೆದ ಒಂದು ತಿಂಗಳಿನಿಂದ ಕರಾವಳಿ, ದಕ್ಷಿಣ ಒಳನಾಡು, ಮಲೆನಾಡಿನಲ್ಲಿ ಸುರಿಯುತ್ತಿದ್ದ ಮುಂಗಾರು ಮಳೆಯ ಅಬ್ಬರ ಇದೀಗ ಸ್ವಲ್ಪ ಶಾಂತವಾಗಿದೆ. ಕಳೆದ ಎರಡು ದಿನಗಳಿಂದ ಮಳೆ ಕಡಿಮೆಯಾಗಿದ್ದ ದಿನದಲ್ಲಿ ಆಗಾಗ ಮೂರ್ನಾಲ್ಕು ಉತ್ತಮ ಮಳೆಯಾಗುತ್ತಿದೆ.

ಗುರುವಾರ ಮಂಗಳೂರಿನಲ್ಲಿ 12 ಸೆ.ಮೀ ಮಳೆಯಾಗಿದೆ. ಪಣಂಬೂರು, ಮೂಡಬಿದಿರೆ, ಕೊಲ್ಲೂರು, ಭಾಗಮಂಡಲ, ಆಗುಂಬೆಯಲ್ಲಿ ತಲಾ 9 ಸೆಂ.ಮೀ ಮಳೆಯಾಗಿದೆ. ಇನ್ನು 48 ಗಂಟೆಗಳಲ್ಲಿ ಕರಾವಳಿ ಭಾಗದಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕ ಕರಾವಳಿಯಲ್ಲಿ ವರುಣನ ಅಬ್ಬರಕ್ಕೆ ಕೊಂಚ ಬಿಡುವು?ಕರ್ನಾಟಕ ಕರಾವಳಿಯಲ್ಲಿ ವರುಣನ ಅಬ್ಬರಕ್ಕೆ ಕೊಂಚ ಬಿಡುವು?

ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆ ಈಗಲೂ ಸುರಿಯುತ್ತಿದೆ ಆದರೆ ಕೊಂಚ ಬಿಡುವು ನೀಡಿದೆ. ಚಿತ್ರದುರ್ಗ, ಹಾಸನ, ಕೋಲಾರ, ತುಮಕೂರು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ, ಬೆಂಗಳೂರಿನಲ್ಲಿ ಎಂದಿನಂತೆ ಮೋಡಕವಿದ ವಾತಾವರಣವಿರಲಿದ್ದು ಜಿನುಗು ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

Rain fall will continue in coastal Karnataka

ಮುಂಗಾರು ಮಾರುತಗಳು ಮತ್ತೆ ಚುರುಕಾಗುವ ಮುನ್ಸೂಚನೆ ಇದೆ. ಆದ್ದರಿಂದ ಬೀದರ್, ಬೆಳಗಾವಿ, ಕಲಬುರ್ಗಿ ಜಿಲ್ಲೆಗಳೂ ಸಹ ಇಂದೂ ಮಳೆ ಕಾಣಿಸಿಸಕೊಳ್ಳಬಹುದು ಎಂದು ಅಂದಾಜಿಸಲಾಗಿದೆ.

ಮಹಾರಾಷ್ಟ್ರ, ಗೋವಾ ಕಡೆಗಳಲ್ಲಿ ವರುಣನ ಆರ್ಭಟ ಜೋರಾಗಿದೆ. ತಮಿಳುನಾಡು, ರಾಜಸ್ತಾನ, ಅಸ್ಸಾಂ, ಪಶ್ಚಿಮ ಬಂಗಾಳ, ಉತ್ತರಾಖಂಡ, ಗುಜರಾತ್‌, ತೆಲಂಗಾಣದಲ್ಲಿ ಭಾರಿ ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

English summary
According to India Meteorological Department(IMD), On July 20,21 Coastal Karnataka and Telangana, Kerala will get normal rain fall.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X