ಹಿಮಾಚಲ ಪ್ರದೇಶದಲ್ಲಿ ಮಳೆ, ಪ್ರವಾಹ, ಭೂಕುಸಿತ: 21 ಮಂದಿ ಸಾವು!
ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಿಮಾಚಲ ಪ್ರದೇಶ ತತ್ತರಿಸಿ ಹೋಗಿದೆ. ನಿರಂತರ ಮಳೆಯಿಂದಾಗಿ ಕಳೆದ ಎರಡು ದಿನಗಳಲ್ಲಿ 21 ಜನರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಕಳೆದ 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ಮೂರನೇ ದೊಡ್ಡ ಮಳೆ ಸುರಿದಿದ್ದು ಹಠಾತ್ ಪ್ರವಾಹಕ್ಕೆ ಏಳು ಜನರು ಸಾವನ್ನಪ್ಪಿದ್ದಾರೆ.
ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಮಂಡಿ ಜಿಲ್ಲೆಯ ಸಂಬಾಲ್ ಗ್ರಾಮದಿಂದ ವೀಡಿಯೊ ಕ್ಲಿಪ್ ಅನ್ನು ಹಂಚಿಕೊಂಡಿದ್ದಾರೆ. ಈ ಭಯಾನಕ ಪರಿಸ್ಥಿತಿಯನ್ನು ಪರಿಹರಿಸಲು ಸಕ್ರಿಯ ರಕ್ಷಣಾ, ಹುಡುಕಾಟ ಮತ್ತು ಪರಿಹಾರ ಕಾರ್ಯಾಚರಣೆಗಳು ಪ್ರಸ್ತುತ ಪ್ರಗತಿಯಲ್ಲಿವೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಈ ಹಿಂದೆ ಭಾರೀ ಮಳೆಗೆ ಎರಡು ಪ್ರತ್ಯೇಕ ಘಟನೆಗಳಲ್ಲಿ 16 ಮಂದಿ ಸಾವನ್ನಪ್ಪಿದ್ದರು. ಕಳೆದ ರಾತ್ರಿ ಸೋಲನ್ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದ ನಂತರ ಏಳು ಜನರು ಸಾವನ್ನಪ್ಪಿದ್ದರೆ, ಶಿಮ್ಲಾ ನಗರದ ಸಮ್ಮರ್ ಹಿಲ್ ಪ್ರದೇಶದ ಶಿವ ದೇವಾಲಯದಲ್ಲಿ ಭೂಕುಸಿತದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ.
ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಜನರು ಮನೆಯೊಳಗೆ ಇರುವಂತೆ ಮತ್ತು ನದಿಗಳ ಬಳಿ ಹೋಗುವುದನ್ನು ತಪ್ಪಿಸುವಂತೆ ಮನವಿ ಮಾಡಿದ್ದಾರೆ. NDTV ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು ಭೂಕುಸಿತ ಪೀಡಿತ ಪ್ರದೇಶಗಳಿಂದ ದೂರ ಹೋಗುವಂತೆ ಜನರಿಗೆ ಮನವಿ ಮಾಡಿದ್ದಾರೆ ಮತ್ತು ಈ ಬಿಕ್ಕಟ್ಟಿನ ಸಂದರ್ಭದಲ್ಲಿ ರಾಜ್ಯಕ್ಕೆ ಭೇಟಿ ನೀಡದಂತೆ ಪ್ರವಾಸಿಗರನ್ನು ವಿನಂತಿಸಿದ್ದಾರೆ.
Disturbing visuals have emerged from Sambhal, Pandoh - District Mandi, where, as reported, seven individuals have been swept away by flash floods today.
— Sukhvinder Singh Sukhu (@SukhuSukhvinder) August 14, 2023
Active rescue, search, and relief operations are currently in progress to address this dreadful situation. pic.twitter.com/OLgZGgXNlF
ಶಿಮ್ಲಾ ನಗರದಲ್ಲಿ ಸಂಭವಿಸಿದ ಎರಡು ಭೂಕುಸಿತಗಳಲ್ಲಿ 15 ರಿಂದ 20 ಮಂದಿ ಸಮಾಧಿಯಾಗಿರುವ ಶಂಕೆ ಇದೆ ಎಂದು ಶಿಮ್ಲಾದ ಡೆಪ್ಯುಟಿ ಕಮಿಷನರ್ ಆದಿತ್ಯ ನೇಗಿ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಇನ್ನೊಂದು ಪ್ರದೇಶದಲ್ಲಿ ಹಲವಾರು ಮನೆಗಳು ಮಣ್ಣು ಮತ್ತು ಕೆಸರುಗಳ ಅಡಿಯಲ್ಲಿ ಹೂತುಹೋಗಿವೆ.
ಸೋಲನ್ನ ಕಂದಘಾಟ್ ಉಪವಿಭಾಗದ ಮಾಮ್ಲಿಗ್ ಗ್ರಾಮದಲ್ಲಿ ಮೇಘಸ್ಫೋಟದ ನಂತರ ಆರು ಜನರನ್ನು ರಕ್ಷಿಸಲಾಗಿದೆ. ಎರಡು ಮನೆಗಳು ಮತ್ತು ಒಂದು ದನದ ಕೊಟ್ಟಿಗೆ ಕೊಚ್ಚಿಹೋಗಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ಇನ್ನೂ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಪ್ರಕಾರ, ವಿಪತ್ತಿನ ಕಾರಣ ರಾಜ್ಯದಲ್ಲಿ 752 ರಸ್ತೆಗಳನ್ನು ಮುಚ್ಚಲಾಗಿದೆ. ಹಿಮಾಚಲ ಪ್ರದೇಶ ಮತ್ತು ನೆರೆಯ ಉತ್ತರಾಖಂಡದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ಎರಡು ಮೂರು ದಿನ ಮಳೆಯಾಗುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ಇಂದು ತಿಳಿಸಿದೆ. "ನೈಋತ್ಯ ಅರೇಬಿಯನ್ ಸಮುದ್ರದ ಮಾನ್ಸೂನ್ ಮಾರುತಗಳು ಹಿಮಾಲಯದ ತಪ್ಪಲನ್ನು ಹೊಡೆಯುತ್ತಿವೆ" ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಿಮಾಚಲ ಪ್ರದೇಶ ಪ್ರವಾಹ ಮತ್ತು ಭೂಕುಸಿತದಿಂದಾಗಿ ದೇಶದಲ್ಲೇ ಅತಿ ಹೆಚ್ಚು ಹಾನಿಗೊಳಗಾದ ರಾಜ್ಯವಾಗಿದ್ದು, ಮುಂಗಾರು ಮಳೆಯ ವಿನಾಶಕಾರಿ ಪರಿಣಾಮದಿಂದಾಗಿ ಈವರೆಗೆ 7020.28 ಕೋಟಿ ನಷ್ಟವನ್ನು ಅಧಿಕಾರಿಗಳು ಪ್ರಕಟಿಸಿದ್ದಾರೆ.












Click it and Unblock the Notifications