Get Updates
Get notified of breaking news, exclusive insights, and must-see stories!

ಉತ್ತರಾಖಂಡದಲ್ಲಿ ಮಳೆ, ಭೂಕುಸಿತ: ಆ.14-15 ರಂದು ಚಾರ್ ಧಾಮ್ ಯಾತ್ರೆ ತಾತ್ಕಾಲಿಕ ರದ್ದು!

ಡೆಹ್ರಾಡೂನ್ ಆಗಸ್ಟ್ 14: ಭಾರೀ ಮಳೆ ಹಾಗೂ ಭೂಕುಸಿತದಿಂದಾಗಿ ಉತ್ತರಖಂಡದ ಚಾರ್ ಧಾಮ್ ಯಾತ್ರೆಯನ್ನು ಆಗಸ್ಟ್ 14 ಮತ್ತು 15 ರಂದು ತಾತ್ಕಾಲಿಕವಾಗಿ ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ನಿರಂತರ ಧಾರಾಕಾರ ಮಳೆಯಿಂದಾಗಿ ಉತ್ತರಾಖಂಡದಲ್ಲಿ ಪ್ರಮುಖ ನದಿಗಳು ಮತ್ತು ಅವುಗಳ ಉಪನದಿಗಳು ಪ್ರವಾಹವನ್ನು ಸೃಷ್ಟಿ ಮಾಡಿವೆ. ಇದರಿಂದಾಗಿ ಬದರಿನಾಥ್, ಕೇದಾರನಾಥ ಮತ್ತು ಗಂಗೋತ್ರಿ ದೇಗುಲಗಳಿಗೆ ಹೋಗುವ ರಾಷ್ಟ್ರೀಯ ಹೆದ್ದಾರಿಗಳ ಉದ್ದಕ್ಕೂ ಭೂಕುಸಿತ ಉಂಟಾಗಿದೆ. ಹೀಗಾಗಿ ಚಾರ್ ಧಾಮ್ ಯಾತ್ರೆಯನ್ನು ಆಗಸ್ಟ್ 14 ಮತ್ತು 15 ರಂದು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

Rain, landslides in Uttarakhand: Char Dham Yatra on August 14-15 is temporarily cancelled!

ಕಳೆದ 24 ಗಂಟೆಯಿಂದ ಸುರಿಯುತ್ತಿರುವ ಮಳೆಗೆ ಉತ್ತರಖಂಡ ನಲುಗಿ ಹೋಗಿದೆ. ಅಪಾಯದ ಮಟ್ಟ ಮೀರಿ ನದಿಗಳು ಉಕ್ಕಿ ಹರಿಯುತ್ತಿದ್ದು ದೇವಸ್ಥಾನ ಹಾಗೂ ಕಟ್ಟಡಗಳು ಕುಸಿಯುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಮಾಲ್‌ದೇವ್ತಾದಲ್ಲಿ ರಕ್ಷಣಾ ಕಾಲೇಜು ಕಟ್ಟಡವೊಂದು ಕುಸಿದು ಬೀಳುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಪತ್ತು ನಿಯಂತ್ರಣ ಕೊಠಡಿ ಪ್ರಕಾರ, ರುದ್ರಪ್ರಯಾಗ, ಶ್ರೀನಗರ ಮತ್ತು ದೇವಪ್ರಯಾಗದಲ್ಲಿ ಅಲಕನಂದಾ, ಮಂದಾಕಿನಿ ಮತ್ತು ಗಂಗಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ವರದಿಗಳ ಪ್ರಕಾರ, ಭೂಕುಸಿತದ ಅವಶೇಷಗಳಿಂದಾಗಿ ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯ ಹಲವಾರು ಸ್ಥಳಗಳನ್ನು ನಿರ್ಬಂಧಿಸಲಾಗಿದೆ.

ಚಮೋಲಿ ಜಿಲ್ಲೆಯ ಅಲಕನಂದಾ ಮತ್ತು ಅದರ ಉಪನದಿಗಳಾದ ಪಿಂಡಾರ್, ನಂದಾಕಿನಿ ಮತ್ತು ಬಿರ್ಹಿ ಸೇರಿದಂತೆ ಹತ್ತಾರು ನದಿಗಳ ದಡದಲ್ಲೂ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

Rain, landslides in Uttarakhand: Char Dham Yatra on August 14-15 is temporarily cancelled!

ವರದಿಗಳ ಪ್ರಕಾರ, ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಿಪಾಲ್ಕೋಟಿ ಪಟ್ಟಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕುಸಿತಗಳು ಹಾನಿಯನ್ನುಂಟುಮಾಡಿವೆ. ರಿಷಿಕೇಶದಲ್ಲಿ ಗಂಗಾ ನದಿ ಅಪಾಯದ ಅಂಚಿನಲ್ಲಿ ಹರಿಯುತ್ತಿದೆ ಎಂದು ಕೇಂದ್ರ ಜಲ ಆಯೋಗದ ಜೂನಿಯರ್ ಎಂಜಿನಿಯರ್ ಸನ್ನಿ ವಿಷ್ಣೋಯ್ ಮಾಹಿತಿ ನೀಡಿದ್ದಾರೆ. ಭಾನುವಾರ ರಾತ್ರಿ ಋಷಿಕೇಶದಲ್ಲಿ 35 ಮಿ.ಮೀ ಮಳೆ ದಾಖಲಾಗಿದೆ. ಹೀಗಾಗಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಭಾರೀ ಮಳೆಯಿಂದಾಗಿ ಚಂದ್ರೇಶ್ವರ ನಗರ ಮತ್ತು ಶೀಶಮ್ ಜಾರಿ ಸೇರಿದಂತೆ ಋಷಿಕೇಶದ ವಿವಿಧ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವುದರೊಂದಿಗೆ ರಿಷಿಕೇಶ ಸಮೀಪದ ಗ್ರಾಮೀಣ ಪ್ರದೇಶಗಳು ಜಲಾವೃತಗೊಂಡಿವೆ. ಋಷಿಕೇಶ ಗ್ರಾಮಾಂತರ ಪ್ರದೇಶದಲ್ಲಿ ಬಂಗಾಲಾ ನಾಲಾ, ಸೌಂಗ್ ಮತ್ತು ಸುಸ್ವಾ ನದಿಗಳೂ ಉಕ್ಕಿ ಹರಿಯುತ್ತಿವೆ.

ಡೆಹ್ರಾಡೂನ್ ರೆಡ್ ಅಲರ್ಟ್

ಡೆಹ್ರಾಡೂನ್ ಮತ್ತು ನೈನಿತಾಲ್ ಸೇರಿದಂತೆ ರಾಜ್ಯದ ಆರು ಜಿಲ್ಲೆಗಳಲ್ಲಿ ಸೋಮವಾರ ಭಾರೀ ಮಳೆಯಾಗುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಗುಡ್ಡಗಾಡು ರಾಜ್ಯ ನಿರಂತರ ಮಾನ್ಸೂನ್ ಮಳೆಯಿಂದ ತತ್ತರಿಸಿ ಹೋಗಿದೆ. ಇದರಿಂದಾಗಿ 60 ಜನರು ಸಾವನ್ನಪ್ಪಿದ್ದಾರೆ ಮತ್ತು 17 ಮಂದಿ ಕಾಣೆಯಾಗಿದ್ದಾರೆ ಮತ್ತು ಸಾಮಾನ್ಯ ಜೀವನದ ಮೇಲೆ ಸಾಕಷ್ಟು ಪರಿಣಾಮ ಬೀರಿದೆ.

ತೆಹ್ರಿ, ಡೆಹ್ರಾಡೂನ್, ಪೌರಿ, ಚಂಪಾವತ್, ನೈನಿತಾಲ್ ಮತ್ತು ಉಧಮ್ ಸಿಂಗ್ ನಗರ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಹರಿದ್ವಾರ ಜಿಲ್ಲೆಯಲ್ಲೂ ಎಚ್ಚರಿಕೆ ನೀಡಲಾಗಿದೆ.

ಯಾವುದೇ ತುರ್ತು ಸಂದರ್ಭದಲ್ಲಿ ಜನರಿಗೆ ಸಹಾಯ ಮಾಡಲು ಜಾಗರೂಕರಾಗಿರಲು ಸರ್ಕಾರವು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಗೆ ನಿರ್ದೇಶನ ನೀಡಿದೆ. ಹೀಗಾಗಿ ಡೆಹ್ರಾಡೂನ್ ಮತ್ತು ಚಂಪಾವತ್‌ನ ಅಧಿಕಾರಿಗಳು ಸೋಮವಾರ ಎರಡು ಜಿಲ್ಲೆಗಳಲ್ಲಿ ಶಾಲೆಗಳನ್ನು ಮುಚ್ಚಲು ಆದೇಶಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+