Get Updates
Get notified of breaking news, exclusive insights, and must-see stories!

Rain News Updates: ಕೇರಳದಲ್ಲಿ ಭಾರೀ ಮಳೆ, ಮೂರು ಸಾವು- ಕರ್ನಾಟಕದ ಕರಾವಳಿಯಲ್ಲೂ ಹೆಚ್ಚಿದ ವರುಣನ ಆರ್ಭಟ

ತಿರುವನಂತಪುರಂ, ಜುಲೈ 24: ಅಲ್ಪಕಾಲದ ವಿರಾಮದ ನಂತರ ಕೇರಳದ ವಿವಿಧೆಡೆ ಭಾರೀ ಮಳೆಯಾಗಿದೆ. ಮಧ್ಯ ಮತ್ತು ಉತ್ತರ ಕೇರಳದ ಜಿಲ್ಲೆಗಳಲ್ಲಿ ಪ್ರವಾಹ ಭೀತಿ ತಲೆದೋರಿದೆ. ನದಿಗಳು ಉಕ್ಕಿ ಹಿರಿಯುತ್ತಿದ್ದು, ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಸೋಮವಾರದಂದು ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಕೋಝಿಕ್ಕೋಡ್, ವಯನಾಡ್ ಮತ್ತು ಕಣ್ಣೂರಿನ ಜಿಲ್ಲಾ ಅಧಿಕಾರಿಗಳು ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ.

Rain News Updates: Heavy rains in Kerala, coast of Karnataka, holiday announced

ಹವಾಮಾನ ಇಲಾಖೆಯು ರಾಜ್ಯದ ಒಂಬತ್ತು ಜಿಲ್ಲೆಗಳಾದ ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕಾಸರಗೋಡು, ಕೋಯಿಕ್ಕೋಡ್, ವಯನಾಡ್ ಮತ್ತು ಕಣ್ಣೂರು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಿದೆ.

ಸರ್ಕಾರಿ ಮೂಲಗಳ ಪ್ರಕಾರ, ಮಳೆಗೆ ಸಂಬಂಧಿಸಿದ ವಿವಿಧ ಘಟನೆಗಳಲ್ಲಿ ಭಾನುವಾರ ಒಟ್ಟು ಮೂರು ಜನರು ಪ್ರಾಣ ಕಳೆದುಕೊಂಡಿದ್ದಾರೆ.

ವಯನಾಡ್ ಜಿಲ್ಲೆಯ ಇಬ್ಬರು ಅಪ್ರಾಪ್ತ ಬಾಲಕರಾದ ಹದಿ ಮತ್ತು ಹಶೀರ್ ಭಾನುವಾರ ಟ್ಯೂಷನ್ ತರಗತಿಗೆ ತೆರಳುತ್ತಿದ್ದಾಗ ನೀರಿನ ಸೆಳೆತಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ.

ತ್ರಿಶೂರ್ ಜಿಲ್ಲೆಯಲ್ಲಿ ಭಾನುವಾರ ಯುವಕನೊಬ್ಬ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾನೆ.

ಏತನ್ಮಧ್ಯೆ, ಇಡುಕ್ಕಿ, ವಯನಾಡು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಕೆಲವು ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ. ಈ ವರೆಗೆ 38 ಜನರನ್ನು ಅಲ್ಲಿ ಇರಿಸಲಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

Rain News Updates: Heavy rains in Kerala, coast of Karnataka, holiday announced

ಗಾಳಿ ಹೊಡೆತಕ್ಕೆ ರಾಜ್ಯಾದ್ಯಂತ ಮರಗಳನ್ನು ಬಿದ್ದಿವೆ. ಇವುಗಳಿಂದ ಮನೆ ಹಾಗೂ ಕಟ್ಟಡಗಳಿಗೆ ಹಾನಿಯಾಗಿವೆ ಎಂದು ವರದಿಯಾಗಿದೆ.

ಜುಲೈ 23 ರಿಂದ ಜುಲೈ 26 ರವರೆಗೆ ಕೇರಳದ ಬಹುತೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಕರಾವಳಿಯಲ್ಲಿ ಮುಂದುವರಿದ ಮಳೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಶಾಲೆ ಹಾಗೂ ಕಾಲೇಜುಗಳಿಗ ರಜೆ ಘೋಷಣೆ ಮಾಡಲಾಗಿದೆ. ಅಲ್ಲಿನ ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ಹಲವು ಸೇತುವೆಗಳು ಕೊಚ್ಚಿ ಹೋಗಿವೆ. ಕೆಲವೆಡೆ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಗುಜರಾತ್‌ನ ಕೆಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ತೀವ್ರ ಜಲಾವೃತಗೊಂಡಿದ್ದು, ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನಾಳೆ ರಾಜ್ಯದಲ್ಲಿ ಭಾರೀ ಮಳೆಯಿಂದ ಭಾರೀ ಮಳೆಯಾಗುವ ರೆಡ್ ಅಲರ್ಟ್ ಎಚ್ಚರಿಕೆ ನೀಡಿದೆ.

ಗುಜರಾತ್‌ನಲ್ಲಿ ಪ್ರವಾಹ

ಭಾನುವಾರ ಬೆಳಗ್ಗೆ 6 ಗಂಟೆ ಕೊನೆಗೊಂಡಂತೆ 24 ಗಂಟೆಗಳ ಅವಧಿಯಲ್ಲಿ ಜುನಾಗಢ್ ನಗರದಲ್ಲಿ 241 ಮಿಮೀ ಮಳೆ ದಾಖಲಾಗಿದೆ. ಇದು ಅತಿ ಹೆಚ್ಚು ಹಾನಿಗೊಳಗಾದ ಪ್ರದೇಶವಾಗಿದೆ. ನಗರವು ಜಲಾವೃತವಾಗಿದೆ. ಹಠಾತ್ ಪ್ರವಾಹದಿಂದಾಗಿ ಕಾರುಗಳು ತೇಲಿಹೋಗಿವೆ. ವಾಹನಗಳು ಮತ್ತು ಜಾನುವಾರುಗಳು ನೀರಿನಲ್ಲಿ ಕೊಚ್ಚಿಹೋಗುತ್ತಿರುವ ಸಾಮಾನ್ಯವಾಗಿದೆ.

ಪ್ರವಾಹದಿಂದಾಗಿ ಗುಜರಾತ್‌ನಲ್ಲಿ ಶನಿವಾರ ಎರಡು ರಾಷ್ಟ್ರೀಯ ಹೆದ್ದಾರಿಗಳು, 10 ರಾಜ್ಯ ಹೆದ್ದಾರಿಗಳು ಮತ್ತು 300 ಗ್ರಾಮೀಣ ರಸ್ತೆಗಳನ್ನು ಮುಚ್ಚಲಾಗಿದೆ. ನೀರು ಕಡಿಮೆಯಾದ ಸ್ಥಳಗಳಲ್ಲಿ ಸಂಚಾರವನ್ನು ಪುನರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+