ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಮಳೆಯ ರೌದ್ರನರ್ತನ

|
Google Oneindia Kannada News

ನವದೆಹಲಿ, ಆಗಸ್ಟ್.26: ಜಮ್ಮು-ಕಾಶ್ಮೀರ ಮತ್ತು ನವದೆಹಲಿ ಸೇರಿದಂತೆ ಉತ್ತರ ಭಾರತ ಮತ್ತು ಈಶಾನ್ಯ ರಾಜ್ಯಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ.

ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದ ಕೆಳಮಟ್ಟದಲ್ಲಿ ಗಾಳಿಯ ವೇಗ ಹೆಚ್ಚಾಗಿದ್ದು, ದಕ್ಷಿಣ ಮತ್ತು ಪಶ್ಚಿಮ ಪ್ರದೇಶಗಳಲ್ಲಿ ಮಳೆಯಾಗುವ ಮುನ್ಸೂಚನೆಯಿದೆ. ಬುಧವಾರ ಮತ್ತು ಗುರುವಾರ ಸಾಧಾರಣ ಮಳೆಯಾಗಲಿದ್ದು, ಶುಕ್ರವಾರ ವರುಣ ಅಬ್ಬರಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ರಾಜಸ್ಥಾನದಲ್ಲಿ ಅಬ್ಬರಿಸಿದ ವರುಣ, ಗುಜರಾತ್ ನಲ್ಲಿ ಮಳೆಗೆ 9 ಬಲಿ!ರಾಜಸ್ಥಾನದಲ್ಲಿ ಅಬ್ಬರಿಸಿದ ವರುಣ, ಗುಜರಾತ್ ನಲ್ಲಿ ಮಳೆಗೆ 9 ಬಲಿ!

ನವದೆಹಲಿ, ಹಿಮಾಚಲ ಪ್ರದೇಶ, ಉತ್ತರಾಖಂಡ್, ರಾಜಸ್ಥಾನದ ಪಶ್ಚಿಮ ಭಾಗ ಮತ್ತು ಉತ್ತರ ಪ್ರದೇಶದಲ್ಲಿ ಈಗಾಗಲೇ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆ ಹಿನ್ನೆಲೆ ಎಚ್ಚರಿಕೆ ವಹಿಸುವಂತೆ ಸ್ಥಳೀಯರಿಗೆ ಸೂಚನೆ ನೀಡಲಾಗಿದೆ.

 Rain Update: Heavy Rain Continue In Several States Of North India

ಬುಧವಾರ ಭಾರಿ ಮಳೆಯ ಎಚ್ಚರಿಕೆ:

ಉತ್ತರಾಖಂಡ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಬುಧವಾರ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಉತ್ತರಾಖಂಡ್ ನಲ್ಲಿ ಗುರುವಾರವೂ ವರುಣದೇವ ಅಬ್ಬರಿಸುವ ಮುನ್ಸೂಚನೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸ್ಥಳೀಯರಿಗೆ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗುವ ಆತಂಕವಿದ್ದು, ಸುರಕ್ಷಿತವಾಗಿರುವಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

ಜಮ್ಮು ಕಾಶ್ಮೀರ, ಪಂಜಾಬ್, ಹರಿಯಾಣ, ಚಂಡೀಗಢ್, ದೆಹಲಿ, ಉತ್ತರ ಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ಯೆಲ್ಲೋ ಅಲರ್ಟ್ ಮುಂದುವರಿಸಲಾಗಿದೆ. ಬುಧವಾರ ಮತ್ತು ಗುರುವಾರ ಈ ರಾಜ್ಯಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ. ಇನ್ನು, ಮಳೆಯ ದಾಖಲೆಯ ಪ್ರಕಾರ, 15 ಮಿ.ಮೀ ಮಳೆಯನ್ನು ಅಲ್ಪ, 15 ರಿಂದ 64.5 ಮಿ.ಮೀ ಮಳೆಯನ್ನು ಸಾಧಾರಣ ಮತ್ತು 64.5 ಮಿ.ಮೀಟರ್ ಗಿಂತ ಹೆಚ್ಚಿನ ಮಳೆಯನ್ನು ಭಾರಿ ಮಳೆ ಎಂದು ಗುರುತಿಸಲಾಗುತ್ತದೆ.

English summary
Rain Update: Heavy Rain Continue In Several States Of North India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X