New Parliament Building: ಕೋಟ್ಯಾಂತರ ವೆಚ್ಚದ ದೆಹಲಿ ಹೊಸ ಸಂಸತ್ ಭವನದಲ್ಲಿ ಮಳೆ ನೀರು: ವಿಡಿಯೋ ವೈರಲ್!
ವಯನಾಡ್ನಲ್ಲಿ ಸಂಭವಿಸಿದ ಗುಡ್ಡ ಕುಸಿತದಿಂದಾದ ಪ್ರಾಣ ಹಾನಿಯನ್ನು ಕಣ್ಣಿಂದ ಮರೆ ಮಾಚಲು ಸಾಧ್ಯವಾಗುತ್ತಿಲ್ಲ. ಹೀಗಿರುವಾಗ ದೆಹಲಿಯಲ್ಲಿ ಹೊಸದಾಗಿ ನಿರ್ಮಿಸಲಾದ ಸಂಸತ್ ಭವನದಲ್ಲಿ ಮಳೆ ನೀರು ನಿಂತಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ಸಂಚಲ ಸೃಷ್ಟಿ ಮಾಡಿದೆ.
ಸಂಸತ್ ಭವನ ಹಳೆಯದಲ್ಲ, ನಿರ್ಮಾಣ ಮಾಡಿ ಸುಮಾರು ವರ್ಷಗಳು ಕಳೆದಿಲ್ಲ. ಹೀಗಿದ್ದರೂ ಇತ್ತೀಚೆಗಷ್ಟೇ ನಿರ್ಮಾಣಗೊಂಡ ಭವನದಲ್ಲಿ ಮಳೆ ನೀರು ತುಂಬಿರುವುದು ಕಂಡು ಬಂದಿದೆ. ಈ ದೃಶ್ಯವನ್ನು ತಮಿಳುನಾಡಿನ ವಿರುದುನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಮಾಣಿಕ್ಕಂ ಠಾಗೋರ್ ಬಿ ಅವರು ತಮ್ಮ 'ಎಕ್ಸ್' ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

1200 ಕೋಟಿ ಖರ್ಚು ಮಾಡಿ ನಿರ್ಮಿಸಿರುವ ನೂತನ ಸಂಸತ್ ಭವನದಲ್ಲಿ ನೀರು ಜಿನುಗುತ್ತಿದ್ದು, ಅದನ್ನು ಸಂಗ್ರಹಿಸಲು ಬಕೆಟ್ ಅನ್ನು ಇಡಲಾಗಿದೆ ಎಂದು ಅವರು ಕಿಡಿಕಾರಿದ್ದಾರೆ. ಮೋದಿ ಸರ್ಕಾರದಲ್ಲಿ ಹೊರಗೆ ಪೇಪರ್ ಸೋರುತ್ತಿದೆ, ಒಳಗೆ ಮಳೆ ನೀರು ಸೋರುತ್ತಿದೆ ಎಂದು ಅವರು ಬಿಜೆಪಿ ವಿರುದ್ಧ ಆಕ್ರೋಶಗೊಂಡು ಬರೆದಿದ್ದಾರೆ.
ಹೊಸ ಸಂಸತ್ತಿನ ಮೇಲ್ಛಾವಣಿಯಿಂದ ಜಿನುಗುವ ಮಳೆ ನೀರು ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಅಧಿಕಾರಿಗಳ ಹಣದಾಸೆಗೆ ಕಳಪೆ ಕಾಮಗಾರಿಯಿಂದ ನೂತನ ಸಂಸತ್ ಭವನ ಸೋರಿಕೆಯಾಗುತ್ತಿದೆ. ಇದು ನಿಜಕ್ಕೂ ವಿಪರ್ಯಾಸ. ಸಂಸತ್ ಭವನದ ಕತೆ ಹೀಗಾದರೆ ಜನಸಾಮಾನ್ಯರ ಗತಿ ಏನು ಎಂದು ಜನ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡುತ್ತಿದ್ದಾರೆ.
ಹೊಸ ಸಂಸತ್ತಿನ ಮೇಲ್ಛಾವಣಿಯಿಂದ ಜಿನುಗುವ ಮಳೆ ನೀರು ದೃಶ್ಯ ಇಲ್ಲಿದೆ-
Paper leakage outside,
— Manickam Tagore .B🇮🇳மாணிக்கம் தாகூர்.ப (@manickamtagore) August 1, 2024
water leakage inside. The recent water leakage in the Parliament lobby used by the President highlights urgent weather resilience issues in the new building, just a year after completion.
Moving Adjournment motion on this issue in Loksabha. #Parliament pic.twitter.com/kNFJ9Ld21d
ಈ ನೀರಿನ ಸೋರಿಕೆಯು ಹೊಸ ಕಟ್ಟಡದಲ್ಲಿನ ಮುಂದಿನ ಸಮಸ್ಯೆಗಳನ್ನು ಎತ್ತಿ ತೋರಿಸುತ್ತಿದೆ. ನಿರ್ಮಾಣ ಪೂರ್ಣಗೊಂಡ ಕೇವಲ ಒಂದು ವರ್ಷದ ನಂತರ ಸಂಸತ್ ಭವನ ಮಳೆ ನೀರಿನಿಂದ ತುಂಬಿ ಹೋಗಿದೆ. ಇದರಿಂದಾಗಿ ಲೋಕಸಭೆಯಲ್ಲಿ ಮುಂದೂಡಿಕೆ ನಿರ್ಣಯ ಮಂಡಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಮೋದಿ ಸರ್ಕಾರ 1200 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಹೊಸ ಸಂಸತ್ ಕಟ್ಟಡದಲ್ಲಿ ಭಾರಿ ನೀರು ತುಂಬಿಕೊಂಡಿದೆ. ಕಾರಿನಲ್ಲಿ ಬಂದ ಜನಪ್ರತಿನಿಧಿಗಳು ಛತ್ರಿ ಹಿಡಿದು ಒಳಗಡೆ ಪ್ರವೇಶ ಮಾಡುತ್ತಿರುವ ದೃಶ್ಯ ಸೆರೆಯಾಗಿದೆ. ಅಲ್ಲದೆ ಮಳೆ ನೀರಿನಲ್ಲಿ ನಡೆದುಕೊಂಡು ಹೋಗುವ ಸ್ಥಿತಿ ನೂತನ ಸಂಸತ್ ಭವನದ ಮುಂದೆ ಕಂಡು ಬಂದಿದೆ. ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ ಕಾರಿದೆ.
BIG BREAKING 🚨⚡
— Ankit Mayank (@mr_mayank) July 31, 2024
Massive waterlogging in the new Parliament building made by Modi Govt for over ₹1,250 CRORES
What an absolute fraud on taxpayers’ money 👏👏 pic.twitter.com/y6qX4kqBTd
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications