ನ. 15 ರವರೆಗೆ ತಮಿಳುನಾಡು, ಕರ್ನಾಟಕದಲ್ಲಿ ಮಳೆ ಮುಂದುವರಿಕೆ

ಚೆನ್ನೈ, ನವೆಂಬರ್‌ 10: ಈಶಾನ್ಯ ಮುಂಗಾರು ಚುರುಕಾಗಿರುವ ಹಿನ್ನೆಲೆಯಲ್ಲಿ ನವೆಂಬರ್‌ 15ರವರೆಗೂ ತಮಿಳುನಾಡು ಹಾಗೂ ಕರ್ನಾಟಕದ ಹಲವೆಡೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರೀಯ ಹವಾಮಾನ ಇಲಾಖೆ ತಿಳಿಸಿದೆ.

ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರ (ಆರ್‌ಎಂಸಿ), ಕನ್ಯಾಕುಮಾರಿ ಕರಾವಳಿ ಪ್ರದೇಶಗಳಲ್ಲಿ ವಾತಾವರಣವು ಮೋಡಕವಿಯುವ ಚಲನೆಯಿಂದಾಗಿ ಶುಕ್ರವಾರ ತಮಿಳುನಾಡಿನ 12 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

Rain will continue in Tamil Nadu, Karnataka till 15th november

ಹವಾಮಾನ ಇಲಾಖೆ ಪ್ರಕಾರ, ತಮಿಳುನಾಡಿನ ಮೈಲಾಡುತುರೈ, ನಾಗಪಟ್ಟಣಂ, ತಂಜಾವೂರು, ತಿರುವರೂರು, ಪುದುಕೊಟ್ಟೈ, ಶಿವಗಂಗೈ, ರಾಮನಾಥಪುರಂ, ವಿರುದುನಗರ, ತೂತುಕುಡಿ, ತೆಂಕಶಿ, ತಿರುನಲ್ವೇಲಿ ಮತ್ತು ಕನ್ಯಾಕುಮಾರಿ ಸೇರಿದಂತೆ 12 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

"ಕನ್ಯಾಕುಮಾರಿ ಸಮುದ್ರ ಪ್ರದೇಶಗಳಲ್ಲಿ ವಾಯುಭಾರ ಕುಸಿತಗೊಂಡಿದೆ. ಅಲ್ಲದೆ, ಪೂರ್ವ ದಿಕ್ಕಿನ ಮಾರುತಗಳ ವೇಗದಲ್ಲಿನ ವ್ಯತ್ಯಾಸದಿಂದಾಗಿ ನವೆಂಬರ್ 10 ಮತ್ತು 11 ರಂದು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನ ಅನೇಕ ಸ್ಥಳಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗಬಹುದು" ಎಂದು ಹವಾಮಾನ ಸಂಸ್ಥೆ ತಿಳಿಸಿದೆ.

ಚೆನ್ನೈ ನಗರದಲ್ಲಿ ಹವಾಮಾನ ಮುನ್ಸೂಚನೆ:

ಚೆನ್ನೈ ಮತ್ತು ಅದರ ಉಪನಗರಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಆಕಾಶವು ಭಾಗಶಃ ಮೋಡವಾಗಿರುತ್ತದೆ. ನಗರದ ಕೆಲವು ಭಾಗಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಲಘು, ಸಾಧಾರಣ ಮಳೆಯಾಗಬಹುದು. ಗರಿಷ್ಠ ತಾಪಮಾನ 31+32 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 25-26 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

ತಮಿಳುನಾಡಿನ ಹಲವು ಸ್ಥಳಗಳಲ್ಲಿ ನವೆಂಬರ್ 15 ರವರೆಗೆ ಮಳೆ ಮುಂದುವರಿಯುತ್ತದೆ, ನಂತರ ರಾಜ್ಯದಲ್ಲಿ ಮಳೆಯ ಚಟುವಟಿಕೆಯಲ್ಲಿ ಕ್ರಮೇಣ ಇಳಿಕೆ ಕಂಡುಬರುತ್ತದೆ. ಕೊಮೊರಿನ್ ಪ್ರದೇಶದ ಮೇಲೆ ಚಂಡಮಾರುತದ ಚಲನೆ ಮತ್ತು ಬಲವಾದ ಪೂರ್ವ/ಈಶಾನ್ಯ ಮಾರುತಗಳು ಇನ್ನೂ ಕೆಲವು ದಿನಗಳವರೆಗೆ ರಾಜ್ಯದ ಮೇಲೆ ಮಳೆಯನ್ನು ತರುತ್ತದೆ. ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಮೇಲಿನ ಕಡಿಮೆ ಒತ್ತಡದ ಪ್ರದೇಶವು ರಾಜ್ಯದ ದಕ್ಷಿಣ ಮತ್ತು ಪಶ್ಚಿಮ ಭಾಗಗಳಲ್ಲಿ ಮಳೆಯ ಮೇಲೆ ಪ್ರಭಾವ ಬೀರುತ್ತದೆ. ನವೆಂಬರ್ 15 ರ ನಂತರ, ಪ್ರಾದೇಶಿಕ ಹವಾಮಾನ ಕೇಂದ್ರದ ಪ್ರಕಾರ, ಮಳೆಯ ಬೀಳುವುದು ಕಡಿಮೆಯಾಗುತ್ತದೆ.

ಹವಾಮಾನ ಇಲಾಖೆಯು ಚೆನ್ನೈ ಸೇರಿದಂತೆ ರಾಜ್ಯದ ಉತ್ತರ ಜಿಲ್ಲೆಗಳ ಭಾಗಗಳಲ್ಲಿ ಒಣ ವಾತಾವರಣವನ್ನು ಮುನ್ಸೂಚನೆ ನೀಡಿದೆ. ಭಾರೀ ಮಳೆಯಿಂದಾಗಿ ಇಂದು (ನವೆಂಬರ್ 10) ತಿರುವರೂರು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಶುಕ್ರವಾರ ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ. ಕೊಯಮತ್ತೂರಿನಲ್ಲಿ ಭಾರೀ ಮಳೆಯಿಂದಾಗಿ ಹಲವಾರು ಪ್ರದೇಶಗಳು ಸೇರಿ ನಗರದ ವಸತಿ ಪ್ರದೇಶಗಳು ಜಲಾವೃತಗೊಂಡಿವೆ.

ನೀಲಗಿರಿ ಜಿಲ್ಲೆಯ ಕೊತ್ತಗಿರಿ ಎಸ್ಟೇಟ್ ಮತ್ತು ಕೊಯಮತ್ತೂರು ಜಿಲ್ಲೆಯ ಮೆಟ್ಟುಪಾಳ್ಯಂನಲ್ಲಿರುವ ಪಿಲ್ಲೂರ್ ಅಣೆಕಟ್ಟು ಕಳೆದ 24 ಗಂಟೆಗಳಲ್ಲಿ ಗರಿಷ್ಠ 22 ಮಿಮೀ ಮಳೆಯನ್ನು ದಾಖಲಿಸಿದೆ. ಅದೇ ರೀತಿ ಕೂಕರೈಪಟ್ಟಿಯಲ್ಲಿ (ತಿರುನೆಲ್ವೇಲಿ) 15 ಮಿ.ಮೀ., ನಂಬಿಯೂರಿನಲ್ಲಿ (ಈರೋಡ್) 14 ಮಿ.ಮೀ., ಮತ್ತು ಅವಿನಾಸಿ (ತಿರುಪುರ) 12 ಮಿ.ಮೀ. ಮಳೆ ಬಿದ್ದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+