ಅಮಿತ್ ಠಾಕ್ರೆಗೆ ತಡೆ: ಸಿನ್ನಾರ್ ಟೋಲ್ ಪ್ಲಾಜಾ ಧ್ವಂಸಗೊಳಿಸಿದ ಎಂಎನ್ಎಸ್ ಕಾರ್ಯಕರ್ತರು
ಭೋಪಾಲ್, ಜುಲೈ. 23: ಮಹಾರಾಷ್ಟ್ರದ ನಾಸಿಕ್ನ ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿರುವ ಟೋಲ್ ಪ್ಲಾಜಾವನ್ನು ರಾಜ್ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಪಕ್ಷದ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ. ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರ ಪುತ್ರ ಎಂಎನ್ಎಸ್ ನಾಯಕ ಅಮಿತ್ ಠಾಕ್ರೆ ಅವರನ್ನು ಟೋಲ್ ಬಳಿ ತಡೆದ ನಂತರ ಪಕ್ಷದ ಕಾರ್ಯಕರ್ತರು ಘರ್ಷನೆ ನಡೆಸಿದ್ದಾರೆ.
ಶನಿವಾರ ತಡರಾತ್ರಿ ಬೂತ್ ಮೇಲೆ ದಾಳಿ ಮಾಡಿದ ಎಂಎನ್ಎಸ್ ಪಕ್ಷದ ಕಾರ್ಯಕರ್ತರು ದೊಣ್ಣೆ, ಕಟ್ಟಿಗೆಗಳು, ಬ್ಯಾಟ್ಗಳಿಂದ ಸಿನ್ನಾರ್ ಟೋಲ್ ಪ್ಲಾಜಾದಲ್ಲಿ ದಾಂಧಲೆ ನಡೆಸಿದ್ದಾರೆ. ತಮ್ಮ ನಾಯಕರನ್ನು ಅರ್ಧ ಗಂಟೆಗೂ ಹೆಚ್ಚು ಕಾಲ ಕಾಯಿಸಿದ ಕಾರಣ ಕಾರ್ಯಕರ್ತರು ಕೋಪಗೊಂಡಿದ್ದರು.

ಅಮಿತ್ ಠಾಕ್ರೆ ಅವರ ಬೆಂಗಾವಲು ಪಡೆ, ಇತರ ಎಂಎನ್ಎಸ್ ಪದಾಧಿಕಾರಿಗಳು, ಶನಿವಾರ ಸಂಜೆ ಅಹ್ಮದ್ನಗರದಿಂದ ಸಮೃದ್ಧಿ ಎಕ್ಸ್ಪ್ರೆಸ್ವೇ ಮೂಲಕ ಸಿನ್ನಾರ್ಗೆ ಹಿಂತಿರುಗುತ್ತಿದ್ದಾಗ, ಟೋಲ್ ಪ್ಲಾಜಾ ಸಿಬ್ಬಂದಿ ಅವರನ್ನು ತಡೆದಿದ್ದಾರೆ. ಗುರುತಿನ ಚೀಟಿಗಳನ್ನು ಹಾಜರುಪಡಿಸಲು ಸಹ ಅವರಿಗೆ ಸೂಚಿಸಲಾಗಿದೆ. ಹೀಗಾಗಿ ಅವರ ಪಕ್ಷದ ಕಾರ್ಯಕರ್ತರು ಅಧಿಕಾರಿಗಳ ಮೇಲೆ ಕಿಡಿಕಾರಿದ್ದಾರೆ.
ಭಾನುವಾರ ಮುಂಜಾನೆ 2:30 ರ ಸುಮಾರಿಗೆ, ಮಹಾರಾಷ್ಟ್ರ ನವನಿರ್ಮಾಣ ಸೇನೆ ಕಾರ್ಯಕರ್ತರು ಎಂದು ಹೇಳಲಾದ ಗುಂಪೊಂದು ಟೋಲ್ ಪ್ಲಾಜಾವನ್ನು ಧ್ವಂಸಗೊಳಿಸಿದ್ದಿ, ಅಲ್ಲಿದ್ದ ಸಿಬ್ಬಂದಿ ಕ್ಷಮೆಯಾಚಿಸಬೇಖು ಎಂದು ಆಗ್ರಹಿಸಿದೆ. ಟೋಲ್ ಬೂತ್ ನೌಕರರು ತಮ್ಮ ನಾಯಕನನ್ನು ಕಾಯುವಂತೆ ಮಾಡುವುದು ಅಸಭ್ಯವಾಗಿದೆ ಎಂದು ಆರೋಪಿಸಿದ್ದಾರೆ.
ಮೂರು ಕಾರುಗಳಲ್ಲಿ ಎಂಎನ್ಎಸ್ ಕಾರ್ಯಕರ್ತರು ಸ್ಥಳಕ್ಕೆ ತಲುಪಿದ್ದಾರೆ ಎನ್ನಲಾಗಿದೆ. ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆ ಬಗ್ಗೆ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ, ಆದರೆ ಪೊಲೀಸರು ವಿಡಿಯೋ ಆಧಾರದ ಮೇಲೆ ತನಿಖೆ ನಡೆಸಿದ್ದಾರೆ. ಇನ್ನೂ ಯಾವುದೇ ದೂರು ಬಂದಿಲ್ಲ ಮತ್ತು ಟೋಲ್ ಆಡಳಿತವು ದೂರು ನೀಡಲು ಅಥವಾ ಘಟನೆಯ ಬಗ್ಗೆ ಮಾತನಾಡಲು ನಿರಾಕರಿಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
"ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ ಮತ್ತು ಸಿಸಿಟಿವಿ ಇತ್ಯಾದಿಗಳನ್ನು ಪರಿಶೀಲಿಸಿದ ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ನಮಗೆ ಯಾವುದೇ ದೂರು (ಟೋಲ್ ಪ್ಲಾಜಾ ಸಿಬ್ಬಂದಿಯಿಂದ) ಬಂದಿಲ್ಲ. ಆದರೆ ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ" ಎಂದು ವಾವಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications