ರಾಜನ್ ನೇಮಕ ಮಾಧ್ಯಮಗಳಿಗೆ ಸಂಬಂಧಿಸಿಲ್ಲ: ಮೋದಿ
ವಾಷಿಂಗ್ಟನ್, ಮೇ 27: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ ರಘುರಾಂ ರಾಜನ್ ಅವರನ್ನು ಮರುನೇಮಕ ಮಾಡುವ ವಿಚಾರ ಮಾಧ್ಯಮಗಳಿಗೆ ಸಂಬಂಧಿಸಿದ್ದಲ್ಲ. ಇದೊಂದು ಆಡಳಿತಾತ್ಮಕ ವಿಷಯವಾಗಿದ್ದು ಮಾಧ್ಯಮಗಳಿಗೆ ಆಸಕ್ತಿಯ ಸಂಗತಿ ಅಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಈ ಮೂಲಕ ಕಳೆದ ಕೆಲ ದಿನಗಳಿಂದ ಮಾಧ್ಯಮಗಳು ಕೆಣಕುತ್ತಿದ್ದ ವಿವಾದಕ್ಕೆ ಮೋದಿ ಶುಕ್ರವಾರ ತಿರುಗೇಟು ನೀಡಿದ್ದಾರೆ.[ಇರಾನ್ ಜತೆ ಕರಾರು, ಈಗ ಪಾಕ್ ಮಾಡಲಿ ತಕರಾರು?]
ಸದ್ಯಕ್ಕೆ ಈ ವಿಷಯ ಚರ್ಚೆ ಮಾಡುವ ಅಗತ್ಯವೇ ಇಲ್ಲ. ಸೆಪ್ಟೆಂಬರ್ ತಿಂಗಳವರೆಗೆ ಕಾಲಾವಕಾಶ ಇದೆ ಎಂದು ಹೇಳಿದ್ದಾರೆ. ವಾಲ್ ಸ್ಟ್ರೀಟ್ ಜರ್ನಲ್ ಗೆ ನೀಡಿದ ಸಂದರ್ಶನದಲ್ಲಿ ಮೋದಿ ಈ ಹೇಳಿಕೆ ನೀಡಿದ್ದಾರೆ.[ಇರಾನ್ ಜತೆ 12 ಒಪ್ಪಂದ: ಇದಪ್ಪಾ ಪಾಕ್, ಚೀನಾಕ್ಕೆ ಸೆಡ್ಡು]
ಅಸಹಿಷ್ಣುತೆ ಬಗ್ಗೆ ರಘುರಾಂ ರಾಜ್ ಮಾತನಾಡಿದ್ದು, ರಾಜ್ಯಸಭಾ ಸದಸ್ಯ, ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ರಾಜನ್ ಮೇಲೆ ವಾಗ್ದಾಳಿ ಮಾಡಿದ್ದು ಎಲ್ಲದಕ್ಕೂ ಮೋದಿ ಉತ್ತರ ನೀಡಿದಂತೆ ಆಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ವೈಯಕ್ತಿಕ ಟೀಕೆ ಮಾಡುವುದರಲ್ಲಿ ಅರ್ಥವಿಲ್ಲ. ಅದು ಯಾರ ಮೇಲೆ ಇರಬಹುದು ಕೇಂದ್ರ ಸರ್ಕಾರ ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.