ರಾಜಸ್ಥಾನ ಶಾಸಕರಿಗೆ ಪ್ರೇತ ಕಾಟ, ವಿಧಾನಸಭೆಯಲ್ಲಿ ಹವನಕ್ಕೆ ಬೇಡಿಕೆ
ಜೈಪುರ, ಫೆಬ್ರವರಿ 23: ರಾಜಸ್ಥಾನದ ಶಾಸಕರು ಇಲ್ಲಿನ ಸಚಿವಾಲಯದಲ್ಲಿ ಭೂತದ ಕಾಟವಿದೆ ಎಂದು ಹೆದರಿಕೊಂಡಿದ್ದಾರೆ. ಇದಕ್ಕೆ ಪರಿಹಾರವಾಗಿ ಹವನ ನಡೆಸಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಬಿಜೆಪಿಯ ಇಬ್ಬರು ಶಾಸಕರು ಇತ್ತೀಚೆಗೆ ಸಾವನ್ನಪ್ಪಿದ್ದು ಇದರಿಂದ ಹೆದರಿಕೊಂಡಿರುವ ಶಾಸಕರು ಈ ಬೇಡಿಕೆ ಇಟ್ಟಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ನಾಗ್ಪುರ್ ಕ್ಷೇತ್ರದ ಬಿಜೆಪಿ ಶಾಸಕ ಹಬಿಬುರ್ ರೆಹ್ಮಾನ್ ತಾವು ಮುಖ್ಯಮಂತ್ರಿ ವಸುಂಧರಾ ರಾಜೆಯವರಿಗೆ ಹೋಮ ನಡೆಸಲು ಸಲಹೆ ನೀಡಿದ್ದೇನೆ. ಈ ಮೂಲಕ ಕಟ್ಟಡದ ಸುತ್ತ ಮುತ್ತ ಶುದ್ಧವಾಗಿಡಲು ಸಲಹೆ ನೀಡಿರುವುದಾಗಿ ಹೇಳಿದ್ದಾರೆ.
ಇವತ್ತು ಸಚಿವಾಲಯ ಕಟ್ಟಿರುವ ಜಾಗ ಹಿಂದೆ ಸ್ವಶಾನವಾಗಿತ್ತು. 2001ರಲ್ಲಿ ಇದನ್ನು ನಿರ್ಮಾಣ ಮಾಡಲಾಯಿತು. ಇಲ್ಲಿ ಹೂತಿರುವ ಹೆಣಗಳೇ ಇಲ್ಲಿನ ಕಟ್ಟಡದಲ್ಲಿ ಪ್ರೇತಗಳಾಗಿ ಓಡಾಡುತ್ತಿವೆ ಎಂದು ಅವರು ಹೇಳಿದ್ದಾರೆ. ಇನ್ನು ವಿಧಾನಸಭೆ ಮುಖ್ಯ ಸಚೇತಕರಾದ ಕುಲುಲಾಲ್ ಗುರ್ಜಾರ್ ಕೂಡ ಶಾಸಕರು ಭಯದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಬುಧವಾರ ನಥಡ್ವಾರಾ ಶಾಸಕ ಕಲ್ಯಾಣ್ ಸಿಂಗ್ ಸಾವನ್ನಪ್ಪಿದ್ದರು. ಕಳೆದ ವರ್ಷ ಕಿರ್ಕಿ ಕುಮಾರಿ ಎಂಬ ಶಾಸಕರು ಹಂದಿ ಜ್ವರದಿಂದ ಸಾವನ್ನಪ್ಪಿದ್ದರು. ಹೀಗಾಗಿ ತಾವೂ ಕಟ್ಟಡದಲ್ಲಿ ಯಜ್ಞ ಯಾಗಾದಿ ಮತ್ತು ಧಾರ್ಮಿಕ ಕಾರ್ಯಗಳನ್ನು ಮಾಡಲು ಸಲಹೆ ನೀಡಿರುವುದಾಗಿ ಗುರ್ಜಾರ್ ಹೇಳಿದ್ದಾರೆ.
ಕಟ್ಟಡದಲಿ ಯಜ್ಞ ಮತ್ತು ಹವನ ಮಾಡುವ ನಿರ್ಧಾರವನ್ನು ಮುಖ್ಯಮಂತ್ರಿ ವಸುಂದರಾ ರಾಜೇ ಮ್ತತು ಸ್ಪೀಕರ್ ವಿವೇಚನೆಗೆ ಬಿಡಲಾಗಿದೆ.
ಇದೇ ಅಭಿಪ್ರಾಯವನ್ನು ಕರ್ನಾಟಕದ ಶಾಸಕರು ಹೇಳಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರತಿಕ್ರಿಯೆ ಹೇಗಿರುತ್ತಿತ್ತು? ಒಮ್ಮೆ ಊಹಿಸಿಕೊಳ್ಳಿ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications