ರಾಜಸ್ಥಾನದಲ್ಲಿ ಅತ್ಯಾಚಾರ, ಮುಂದೇನಾಯ್ತೆಂದರೆ..
ರಾಜಸ್ಥಾನ ಅ, 14 : ಬಲಾತ್ಕಾರ ಮಾಡಲು ಹೋದವ ತನ್ನ 'ಬಲ'ವನ್ನೇ ಕಳೆದುಕೊಂಡಿದ್ದಾನೆ. ಸಾರ್ವಜನಿಕ ಸ್ಥಳದಲ್ಲಿ ಅತ್ಯಾಚಾರ ಮಾಡಲು ಯತ್ನಿಸಿದವನ ಶಿಶ್ನವನ್ನೇ ಕತ್ತರಿಸಿ ಬಿಸಾಡಲಾಗಿದೆ.
ರಾಜಸ್ಥಾನದ ಗಂಗಾನಗರದಲ್ಲಿ ಇಂಥ ಪ್ರಕರಣವೊಂದು ನಡೆದಿದ್ದು ಅತ್ಯಾಚಾರಿಗಳಿಗೆ ಇದೊಂದು ಪಾಠ ಎಂದೇ ಹೇಳಲಾಗಿದೆ. ಬಲಾತ್ಕಾರ ಮಾಡಲು ಯತ್ನಿಸಿದವ ಜನರಿಂದ ಸರಿಯಾಗಿ ಧರ್ಮದೇಟು ತಿಂದಿದ್ದಾನೆ.[ಗೋವರ್ಧನಮೂರ್ತಿ ಮೇಲೆ ಅತ್ಯಾಚಾರ ಪ್ರಕರಣ]

ಸುರೇಶ್ ಕುಮಾರ್(46) ಎಂಬಾತ ಯುವತಿಯೊಬ್ಬಳ ಮೇಲೆ ಸಾರ್ವಜನಿಕವಾಗಿ ಅತ್ಯಾಚಾರಕ್ಕೆ ಯತ್ತಿಸುತ್ತಿದ್ದ. ಇದನ್ನು ನೋಡಿದ ಜನರು ಆತನನ್ನು ಹತ್ತಿರದ ಮಾಂಸದಂಗಡಿಯೊಂದಕ್ಕೆ ಕರೆದುಮೊಂಡು ಹೋಗಿ ಹಿಗ್ಗಾ-ಮುಗ್ಗಾ ಥಳಿಸಿದ್ದಾರೆ. ಹತ್ತಿರದಲ್ಲಿದ್ದ ದೊಣ್ಣೆ ಮತ್ತಿತರ ವಸ್ತುಗಳನ್ನು ತೆಗೆದುಕೊಂಡ ಜನರು ಸುಮಾರು ಒಂದು ಗಂಟೆ ಕಾಲ ಥಳಿಸಿದ್ದಾರೆ. ನಂತರ ಹರಿತವಾದ ಆಯುಧವೊಂದನ್ನು ತೆಗೆದುಕೊಂಡು ಆತನ ಜನನಾಂಗಕ್ಕೆ ಕತ್ತರಿ ಹಾಕಿದ್ದಾರೆ.
ಡೈಲಿ ರೊಪೋರ್ಟ್ ವರದಿ ಹೇಳಿರುವಂತೆ ಕಾಮುಕ ರಕ್ತದ ಮಡುವಿನಲ್ಲಿ ಬಿದ್ದಿದ್ದರೂ ಯಾರಿಬ್ಬರೂ ಆತನ ನೆರವಿಗೆ ಧಾವಿಸಲಿಲ್ಲ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಅತ್ಯಾಚಾರಿಯನ್ನು ವಶಕ್ಕೆ ಪಡೆದಿದ್ದಾರೆ.[ಸಾಮಾಜಿಕ ಕಾರ್ಯಕರ್ತೆಗೆ ಲೈಂಗಿಕ ಕಿರುಕುಳ]
ಅತ್ಯಾಚಾರಿಗಳಿಗೆ ಉಗ್ರ ಶಿಕ್ಷೆಯಾಗಬೇಕಿರುವುದು ನಿಜ. ಆದರೆ ನಾಗರಿಕರೆ ಕಾನೂನು ಉಲ್ಲಂಘನೆ ಮಾಡುವುದು ಸರಿಯಲ್ಲ. ಅಪರಾಧಿಗಳಿಗೆ ಶಿಕ್ಷೆ ನೀಡಲು ಸಂವಿಧಾನಾತ್ಮಕ ವ್ಯವಸ್ಥೆಯಿದ್ದು ಅದರಂತೆ ಎಲ್ಲರೂ ನಡೆದುಕೊಳ್ಳಬೇಕು ಎಂದು ಪೊಲೀಸರು ಹೇಳಿದ್ದಾರೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications