Rajasthan Paper Leak Case: ರಾಜಸ್ಥಾನ ಕಾಂಗ್ರೆಸ್ ಮುಖ್ಯಸ್ಥರ ಪುತ್ರರಿಗೆ ಸಮನ್ಸ್!
Rajasthan Paper Leak Case: ಜೈಪುರ ನವೆಂಬರ್ 2: ಪೇಪರ್ ಲೀಕ್ ಮನಿ ಲಾಂಡರಿಂಗ್ ಪ್ರಕರಣದಲ್ಲಿ ರಾಜಸ್ಥಾನ ಕಾಂಗ್ರೆಸ್ ಮುಖ್ಯಸ್ಥರ ಪುತ್ರರಿಗೆ ಇಡಿ ಸಮನ್ಸ್ ನೀಡಿದೆ.
ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿಗಾಗಿ ಕಳೆದ ವರ್ಷ ನಡೆದ ಪರೀಕ್ಷಾ ಪತ್ರಿಕೆಗಳ ಸೋರಿಕೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿ ಬಂದಿದೆ. ಈ ಪ್ರಕರಣದಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಕಾಂಗ್ರೆಸ್ ಮುಖ್ಯಸ್ಥ ಗೋವಿಂದ್ ಸಿಂಗ್ ದೋತಸಾರಾ ಅವರ ಪುತ್ರರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದೆ.

ಮನಿ ಲಾಂಡರಿಂಗ್ ಪ್ರಕರಣ ರಾಜಸ್ಥಾನ ಪೊಲೀಸರು ಹಲವಾರು ಜನರ ವಿರುದ್ಧ ದಾಖಲಿಸಿದ ಪ್ರಥಮ ಮಾಹಿತಿ ವರದಿಗಳಿಂದ (ಎಫ್ಐಆರ್) ಹುಟ್ಟಿಕೊಂಡಿದೆ. ಆದರೆ ಕಾಂಗ್ರೆಸ್ ಮತ್ತು ಎಎಪಿ ಆಡಳಿತವಿರುವ ರಾಜ್ಯಗಳಲ್ಲಿ ವಿಷೇಶವಾಗಿ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಇಡಿ ತೆಗೆದುಕೊಳ್ಳಲಾಗುತ್ತಿರುವ ಈ ಕ್ರಮವು ವಿವಾದ ಹುಟ್ಟುಹಾಕುವ ಸಾಧ್ಯತೆಯಿದೆ.
ಇದೇ ಕೇಂದ್ರ ತನಿಖಾ ಸಂಸ್ಥೆ ಅಕ್ಟೋಬರ್ 30 ರಂದು ವಿದೇಶಿ ವಿನಿಮಯ ನಿಯಮಗಳ ಉಲ್ಲಂಘನೆ ಆರೋಪದ ಪ್ರತ್ಯೇಕ ಪ್ರಕರಣದಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಪುತ್ರ ವೈಭವ್ ಅವರನ್ನು ಒಂಬತ್ತು ಗಂಟೆಗಳ ಕಾಲ ಶೋಧಿಸಿತ್ತು.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೂ ಇಡಿ ನೋಟೀಸ್ ಜಾರಿ ಮಾಡಿದೆ.
ಇಡಿ ದಾಳಿ
ಪೇಪರ್ ಸೋರಿಕೆ ಪ್ರಕರಣದಲ್ಲಿ ರಾಜಸ್ಥಾನ ಕಾಂಗ್ರೆಸ್ ಮುಖ್ಯಸ್ಥ ಗೋವಿಂದ್ ಸಿಂಗ್ ದೋಟಸಾರಾ ಅವರ ನಿವಾಸದ ಮೇಲೆ ಹಾಗೂ ಅವರಿಗೆ ಸಂಬಂಧಿಸಿದ ಹಲವಾರು ಸ್ಥಳಗಳಲ್ಲಿ ಇಡಿ ಈ ಹಿಂದೆ ದಾಳಿ ನಡೆಸಿತ್ತು. ಜೈಪುರ, ದೌಸಾ ಮತ್ತು ಸಿಕರ್ನಲ್ಲಿ ಇಡಿ ದಾಳಿ ನಡೆದಿತ್ತು.
ಜೂನ್ 5, 2023 ರಂದು ಇಡಿ ಆರೋಪಿಗಳ 15 ಸ್ಥಳಗಳಲ್ಲಿ ಶೋಧ ನಡೆಸಿತ್ತು. ಈ ಅವಧಿಯಲ್ಲಿ ಆಕ್ಷೇಪಾರ್ಹ ದಾಖಲೆಗಳು ಮತ್ತು ಡಿಜಿಟಲ್ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದಲ್ಲದೆ ಇಡಿ 3,11,93,597.88 ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಯನ್ನು ಜಪ್ತಿ ಮಾಡಿದೆ. ಈ ಹಿಂದೆ ಇಬ್ಬರು ಆರೋಪಿಗಳಾದ ಬಾಬುಲಾಲ್ ಕಟಾರಾ ಮತ್ತು ಅನಿಲ್ ಕುಮಾರ್ ಮೀನಾ ಅಲಿಯಾಸ್ ಶೇರ್ ಸಿಂಗ್ ಮೀನಾ ಅವರನ್ನು ಇಡಿ ಬಂಧಿಸಿತ್ತು.
ಪೇಪರ್ ಸೋರಿಕೆ ಪ್ರಕರಣ, ಅಕ್ರಮ ಹಣ ವರ್ಗಾವಣೆ ಮತ್ತು ಹವಾಲಾ ಮೂಲಕ ಹಣ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಡಿ ಗೋವಿಂದ್ ಸಿಂಗ್ ದೋತಸಾರಾ ಅವರ ಪುತ್ರರ ವಿರುದ್ಧ ರಹಸ್ಯ ದೂರುಗಳನ್ನು ಸ್ವೀಕರಿಸಿತ್ತು. ಇತ್ತೀಚೆಗೆ ಆರ್ಪಿಎಸಿ ಸದಸ್ಯ ಬಾಬುಲಾಲ್ ಕತಾರ ಅವರ ವಿಚಾರಣೆ ಮತ್ತು ಕೆಲವು ಕೋಚಿಂಗ್ ಆಪರೇಟರ್ಗಳು ಇಡಿಗೆ ದೂರು ನೀಡಿದ ನಂತರ ಇಡಿ ಸಮನ್ಸ್ ನೀಡಿದೆ.
ಏನಿದು ಪ್ರಕರಣ?
2022 ರ ಹಿರಿಯ ಶಿಕ್ಷಕರ ಗ್ರೇಡ್ II ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಜ್ಞಾನ ಪತ್ರಿಕೆಯನ್ನು ಭೂಪೇಂದ್ರ ಸರನ್ ಮತ್ತು ಇತರ ಆರೋಪಿಗಳು ಸೋರಿಕೆ ಮಾಡಿದ್ದಾರೆ ಎಂದು ಇಡಿ ತನಿಖೆಯಿಂದ ತಿಳಿದುಬಂದಿದೆ. ಈ ಪರೀಕ್ಷೆಯನ್ನು RPSC ರಾಜಸ್ಥಾನದಲ್ಲಿ 2022 ನವೆಂಬರ್ 21, 22 ಮತ್ತು 24ರಂದು ನಡೆಸಿತು. ಈ ಕೆಲಸಕ್ಕಾಗಿ ಲಕ್ಷಾಂತರ ರೂಪಾಯಿ ನೀಡಿದ್ದಿ ಹಾಗೂ ಪಡೆದಿದ್ದು ತಿಳಿದು ಬಂದಿದೆ. ಇದರಲ್ಲಿ ಗೋವಿಂದ್ ಸಿಂಗ್ ದೋತಸಾರಾ ಅವರ ಪುತ್ರರು ಭಾಗಿಯಾಗಿದ್ದಾರೆಂದು ಮಾಹಿತಿ ಲಭ್ಯವಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications