ರಾಜಸ್ಥಾನದಲ್ಲಿ ಪಾನ್ ಮಸಾಲ ನಿಷೇಧ; ಕರ್ನಾಟಕದ ರೈತರಿಗೆ ಆತಂಕ
ಬೆಂಗಳೂರು, ಅಕ್ಟೋಬರ್ 04 : ರಾಜಸ್ಥಾನ ಸರ್ಕಾರ ಪಾನ್ ಮಸಾಲಾ, ಸುವಾಸಿತ ಸಿಹಿ ಅಡಿಕೆ ಪುಡಿ ಉತ್ಪಾದನೆಯನ್ನು ನಿಷೇಧಿಸಿದೆ. ಕರ್ನಾಟಕದ ಅಡಿಕೆ ಬೆಳೆಗಾರರ ಮೇಲೆ ಇದು ಪ್ರಭಾವ ಬೀರುವ ಸಾಧ್ಯತೆ ಇದೆ.
ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಶೇ 40 ರಿಂದ 50 ರಷ್ಟು ಅಡಿಕೆ ಉತ್ಪಾದನೆಯಾಗುತ್ತದೆ. ರಾಜಸ್ಥಾನದಲ್ಲಿನ ನಿಷೇಧದಿಂದಾಗಿ ರಾಜ್ಯದ ಅಡಿಕೆಗೆ ಬೇಡಿಕೆ ತಗ್ಗಲಿದ್ದು, ದರ ಕುಸಿಯುವ ಆತಂಕ ಎದುರಾಗಿದೆ.
ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಉತ್ಪಾದನೆಯಾಗುವ ಅಡಿಕೆಗೆ ಉತ್ತರ ಭಾರತದ ಕಡೆಗೆ ಹೆಚ್ಚು ಬೇಡಿಕೆ ಇದೆ. ಅದರಲ್ಲೂ ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಿದ್ದು, ರೈತರಿಗೂ ಉತ್ತಮ ದರ ಸಿಗುತ್ತಿದೆ. ಈಗ ಪಾನ್ ಮಸಾಲಾ ನಿಷೇಧದಿಂದಾಗಿ ದರ ಕಡಿಮೆಯಾಗುವ ಆತಂಕ ಎದುರಾಗಿದೆ.

ಮಲೆನಾಡು ಅಡಕೆ ಮಾರಾಟ ಸಹಕಾರ ಸಂಘ (ಮ್ಯಾಮ್ ಕೋಸ್) ಈ ಕುರಿತು ಪ್ರತಿಕ್ರಿಯೆ ನೀಡಿದ್ದು, 'ಸುವಾಸಿತ ಸಿಹಿ ಅಡಿಕೆ ಪುಡಿ ಉತ್ಪಾದನೆ ನಿಷೇಧದಿಂದ ಮಲೆನಾಡು ಭಾಗದ ರೈತರ ಮೇಲೆ ಹೆಚ್ಚು ಪ್ರಭಾವ ಬೀರುವುದಿಲ್ಲ' ಎಂದು ಹೇಳಿದೆ.
'ರಾಜಸ್ಥಾನಕ್ಕೆ ಕೆಂಪು ಬಣ್ಣದ ಅಡಿಕೆ ಮಾತ್ರ ಹೆಚ್ಚಾಗಿ ರವಾನೆಯಾಗುತ್ತದೆ. ಸುಪಾರಿ ನಿಷೇಧದಿಂದಾಗಿ ಕರಾವಳಿ ಭಾಗದ ರೈತರ ಮೇಲೆ ಹೆಚ್ಚು ಪ್ರಭಾವ ಉಂಟಾಗುವುದಿಲ್ಲ' ಎಂದು ಕ್ಯಾಂಪ್ಕೋ ತಿಳಿಸಿದೆ. ಅಡಿಕೆ ಕೊಳ್ಳುವ ಮಧ್ಯವರ್ತಿಗಳು ಇದನ್ನು ಮುಂದಿಟ್ಟುಕೊಂಡು ಬೆಲೆ ಕಡಿಮೆ ಮಾಡಲು ಪ್ರಯತ್ನ ನಡೆಸುವ ಸಾಧ್ಯತೆ ಇದೆ.
ರಾಜಸ್ಥಾನಕ್ಕಿಂತ ಮೊದಲು ಬಿಹಾರ ಮತ್ತು ಮಹಾರಾಷ್ಟ್ರ ಸರ್ಕಾರಗಳು ಪಾನ್ ಮಸಾಲಾ ಮತ್ತು ಸುವಾಸಿತ ಅಡಿಕೆ ಪುಡಿಯನ್ನು ನಿಷೇಧಿಸಿದ್ದವು.
ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಈ ವರ್ಷ ಹೆಚ್ಚಿನ ಮಳೆಯಿಂದಾಗಿ ಅಡಿಕೆ ಬೆಳೆಗೆ ಕೊಳೆ ರೋಗ ಬಂದಿದೆ. ಕೈಗೆ ಸಿಗುವ ಫಸಲಿಗೂ ಕಡಿಮೆ ಬೆಲೆ ಸಿಕ್ಕರೆ ಎಂದು ಬೆಳೆಗಾರರು ಆತಂಕಗೊಂಡಿದ್ದಾರೆ.
-
Copra Price: ಇದೇ ಮೊಟ್ಟ ಮೊದಲ ಬಾರಿ ತಿಪಟೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ -
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು












Click it and Unblock the Notifications