ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಬ್ರಿಟಿಷರು ಇನ್ನೂ ನೂರು ವರ್ಷ ಭಾರತವನ್ನು ಆಳಿದ್ದರೆ ಚೆನ್ನಾಗಿರುತ್ತಿತ್ತು!'

|
Google Oneindia Kannada News

ಜೈಪುರ, ಅಕ್ಟೋಬರ್ 26: 'ಬ್ರಿಟಿಷರು ಇನ್ನೂ ನೂರು ವರ್ಷ ಭಾರತವನ್ನು ಆಳಬೇಕಿತ್ತು! ಆಗ ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳ ಜನರು ಉದ್ಧಾರವಾಗುತ್ತಿದ್ದರು' ಎಂದು ಬಿಎಸ್ಪಿ ನಾಯಕರೊಬ್ಬರು ಹೇಳಿರುವುದು ವಿವಾದ ಸೃಷ್ಟಿಸಿದೆ.

ರಾಜಸ್ಥಾನದ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥ ಧರಂವೀರ್ ಸಿಂಗ್ ಗುರುವಾರ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡುತ್ತಿದ್ದರು. ಡಿಸೆಂಬರ್ 7 ರಂದು ರಾಜ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರ ಸಭೆ ನಡೆಸುತ್ತಿದ್ದ ಅವರು. ಎಸ್ಸಿ ಎಸ್ಟಿ ಮತ್ತು ಹಿಂದುಳಿದ ವರ್ಗಗಳ ಓಲೈಕೆಗಾಗಿ ನೀಡಿದ ಹೇಳಿಕೆ ವಿವಾದ ಸೃಷ್ಟಿಸಿದೆ.

ರಾಜಸ್ಥಾನ : ಕಾಂಗ್ರೆಸ್ ಸೇರಿದ ಜಸ್ವಂತ್ ಪುತ್ರ, ಬಿಜೆಪಿಗೆ ಭಾರಿ ಹಿನ್ನಡೆರಾಜಸ್ಥಾನ : ಕಾಂಗ್ರೆಸ್ ಸೇರಿದ ಜಸ್ವಂತ್ ಪುತ್ರ, ಬಿಜೆಪಿಗೆ ಭಾರಿ ಹಿನ್ನಡೆ

ಈ ಹೇಳಿಕೆಯ ವಿರುದ್ಧ ಸಾಕಷ್ಟು ಜನ ಆಕ್ರೋಶ ವ್ಯಕ್ತಪಡಿಸಿದ್ದು, ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದ ಸಹಸ್ರಾರು ಹೋರಾಟಗಾರರ ಬಲಿದಾನಕ್ಕೆ ಧರಂವೀರ್ ಅಪಚಾರ ಮಾಡಿದ್ದಾರೆ ಎಂದು ದೂರಲಾಗಿದೆ.

ಬ್ರಿಟೀಷರಿಂದಲೇ ಅಂಬೇಡ್ಕರ್ ಓದುವುದಕ್ಕೆ ಸಾಧ್ಯವಾಗಿದ್ದು!

ಬ್ರಿಟೀಷರಿಂದಲೇ ಅಂಬೇಡ್ಕರ್ ಓದುವುದಕ್ಕೆ ಸಾಧ್ಯವಾಗಿದ್ದು!

'ಬ್ರಿಟಿಷರು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಓದಲು ಅವಕಾಶ ನೀಡದೆ ಇದ್ದಿದ್ದರೆ ಅವರು ವಾಪಸ್ ಬಂದು ಹಿಂದುಳಿದ ವರ್ಗಗಳ ಉದ್ಧಾರಕ್ಕೆ ತೊಡಗಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಬ್ರಿಟಿಷರ ಆಡಳಿತದಲ್ಲಿ ಅವರಿಗೆ ಓದಲು ಅವಕಾಶ ಸಿಕ್ಕಿತು. ಇಲ್ಲದಿದ್ದರೆ ಯಾವ ಶಾಲೆಯೂ ಅಂಬೇಡ್ಕರ್ ಅವರನ್ನು ಸೇರಿಸಿಕೊಳ್ಳುತ್ತಿರಲಿಲ್ಲ' ಎಂದು ಅವರು ಹೇಳಿದರು.

ಇನ್ನೂ ನೂರು ವರ್ಷ ಆಳಬೇಕಿತ್ತು!

ಇನ್ನೂ ನೂರು ವರ್ಷ ಆಳಬೇಕಿತ್ತು!

ಈ ದೇಶವನ್ನು ಇನ್ನೂ ನೂರು ವರ್ಷಗಳ ಕಾಳ ಬ್ರಿಟಿಷರು ಆಳಿದ್ದರೆ ಎಸ್ಸಿ ಎಸ್ಟಿ ಮತ್ತು ಒಬಿಸಿ ಸಮುದಾಯದ ಜನರ ಮೇಲೆ ದೌರ್ಜನ್ಯ ನಡೆಯುತ್ತಿರಲಿಲ್ಲ, ಅವರು ಎಂದೋ ಉದ್ಧಾರವಾಗುತ್ತಿದ್ದರು ಎಂದು ಅವರು ಹೇಳಿದರು. ರಾಜಸ್ಥಾನದಲ್ಲಿ ದಲಿತರ ಮತಗಳ ಮೇಲೆ ಕಣ್ಣಿಟ್ಟಿರುವ ಬಿಎಸ್ಪಿ ಮತಗಳಿಕೆಗೋಸ್ಕರ ಇಂಥ ಅಪ್ರಬುದ್ಧ ಹೇಳಿಕೆ ನೀಡುವುದು ಎಷ್ಟು ಸರಿ ಎಂಬುದು ಹಲವರ ವಾದ.

ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ ವಿನಃ, ಕಾಂಗ್ರೆಸ್‌ ಬಳಿ ಭಿಕ್ಷೆ ಬೇಡಲ್ಲ: ಮಾಯಾವತಿಏಕಾಂಗಿಯಾಗಿ ಸ್ಪರ್ಧಿಸುತ್ತೇವೆ ವಿನಃ, ಕಾಂಗ್ರೆಸ್‌ ಬಳಿ ಭಿಕ್ಷೆ ಬೇಡಲ್ಲ: ಮಾಯಾವತಿ

ಇಂಗ್ಲೆಂಡಿಗೆ ಹೋಗಿ ಋಣತೀರಿಸಿ!

ಇಂಗ್ಲೆಂಡಿಗೆ ಹೋಗಿ ಋಣತೀರಿಸಿ!

ಧರಂವೀರ್ ಅವರ ಹೇಳಿಕೆಯನ್ನು ಅವರ ರಾಜಕೀಯ ವಿರೋಧಿಗಳು ಕಟುವಾಗಿ ಟೀಕಿಸಿದ್ದು, ಭಾರತದ ಸ್ವಾತಂತ್ರ್ಯಕ್ಕಾಗಿ ಹಗಲಿರುಳೂ ಶ್ರಮಿಸಿದ, ಪ್ರಾಣವನ್ನು ಪಣಕ್ಕಿಟ್ಟ ಸಹಸ್ರಾರು ಜನರ ಬಲಿದಾನಕ್ಕೆ ಧರಂವೀರ್ ಅವಮಾನ ಮಾಡಿದ್ದಾರೆ ಎಂದು ದೂರಿದ್ದಾರೆ. ಅಕಸ್ಮಾತ್ ಧರಂವೀರ್ ಅವರಿಗೆ ಬ್ರಿಟಿಷರ ಬಗ್ಗೆ ಅಷ್ಟೊಂದು ಅಭಿಮಾನವಿದ್ದರೆ ಇಂಗ್ಲೆಂಡಿಗೆ ತೆರಳಿ, ಅಲ್ಲೇ ಆಶ್ರಯ ಪಡೆಯಲಿ, ಬ್ರಿಟಿಷರ ಋಣ ತೀರಿಸಲಿ' ಎಂದು ಲೇವಡಿ ಮಾಡಿದ್ದಾರೆ.

ಬಿಎಸ್‌ಪಿಯ ಮಾಯಾವತಿ ಕಾಂಗ್ರೆಸ್‌ಗೆ 'ಕೈ' ಕೊಟ್ಟಿದ್ದೇಕೆ? ಬಿಎಸ್‌ಪಿಯ ಮಾಯಾವತಿ ಕಾಂಗ್ರೆಸ್‌ಗೆ 'ಕೈ' ಕೊಟ್ಟಿದ್ದೇಕೆ?

ಡಿ.7 ರಂದು ಚುನಾವಣೆ

ಡಿ.7 ರಂದು ಚುನಾವಣೆ

ರಾಜಸ್ಥಾನದಲ್ಲಿ ಡಿಸೆಂಬರ್ 7 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 11 ರಂದು ಫಲಿತಾಂಶ ಹೊರಬೀಳಲಿದೆ. 200 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ರಾಜಸ್ಥಾನದಲ್ಲಿ ಪಕ್ಷವೊಂದು ಬಹುಮತ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್ 101. ಪ್ರಸ್ತುತ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದೆ. ಇಲ್ಲಿ ಬಿಎಸ್ಪಿಯು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳದೆ ಸ್ವತಂತ್ರವಾಗಿ ಸ್ಪರ್ಧಿಸುತ್ತಿದೆ.

ಸಚಿತ್ರ ವರದಿ : ಪಂಚ ರಾಜ್ಯಗಳ ಚುನಾವಣೆ ದಿನಾಂಕ, ಮತ ಎಣಿಕೆಸಚಿತ್ರ ವರದಿ : ಪಂಚ ರಾಜ್ಯಗಳ ಚುನಾವಣೆ ದಿನಾಂಕ, ಮತ ಎಣಿಕೆ

English summary
According to a BSP leader, Dharamveer Singh, "British should have continued to rule the country for another 100 years so that people belonging to the SC, ST and OBC sections could be uplifted"
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X