ರಾಜಸ್ಥಾನ: ಕಿಡ್ನಾಪ್ ಮಾಡಿದ ಮಹಿಳೆಯ ಶವದ ಮೇಲೆ ಬುಲೆಟ್ ಗುರುತು- ಬಿಜೆಪಿ ಪ್ರತಿಭಟನೆ!
ಜೈಪುರ ಜುಲೈ 15: ರಾಜಸ್ಥಾನ ಮಹಿಳೆಯನ್ನು ಮನೆಯಿಂದ ಕಿಡ್ನಾಪ್ ಮಾಡಿ, ಬುಲೆಟ್ ಗುರುತುಗಳೊಂದಿಗೆ ಶವ ಪತ್ತೆಯಾದ ಪ್ರಕರಣ ಸದ್ಯ ರಾಜಕೀಯ ತಿರುವು ಪಡೆದುಕೊಂಡಿದೆ.
ಜುಲೈ 12 ರಂದು 19 ವರ್ಷದ ಪರಿಶಿಷ್ಟ ಜಾತಿಯ ಮಹಿಳೆಯನ್ನು ನಾಲ್ಕು ಜನರು ಆಕೆಯ ಮನೆಯಿಂದ ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಬಳಿಕ ಆಕೆಯ ದೇಹವನ್ನು ನಿನ್ನೆ ಬಾವಿಯಿಂದ ಹೊರತೆಗೆಯಲಾಯಿತು. ಕುಟುಂಬಸ್ಥರು ಅತ್ಯಾಚಾರದ ಆರೋಪ ಮಾಡಿದ್ದರು. ಆದರೆ ಆಕೆಯ ದೇಹದ ಮೇಲೆ ಬುಲೆಟ್ ಗುರುತುಗಳು ಪತ್ತೆಯಾಗಿದೆ.

ಇದು ಚುನಾವಣಾ ಕಣದಲ್ಲಿರುವ ರಾಜಸ್ಥಾನದ ಕರೌಲಿಯಲ್ಲಿ ರಾಜಕೀಯ ಉದ್ವಿಗ್ನತೆಗೆ ಕಾರಣವಾಗಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಳಾಗಿದೆ, ಅಶೋಕ್ ಗೆಹ್ಲೋಟ್ ಸರ್ಕಾರವು ಹದಗೆಟ್ಟಿದೆ ಎಂದು ಭಾರತೀಯ ಜನತಾ ಪಕ್ಷ ಮತ್ತು ಮಾಯಾವತಿಯ ಬಹುಜನ ಸಮಾಜ ಪಕ್ಷ ಆರೋಪಿಸಿದೆ.
ಇದರಿಂದ ಶವ ಇರಿಸಿರುವ ಆಸ್ಪತ್ರೆಯ ಹೊರಗೆ ಬಿಜೆಪಿಯವರು ಧರಣಿ ನಡೆಸುತ್ತಿದ್ದಾರೆ. ಈ ವಿಷಯವನ್ನು ಶುಕ್ರವಾರ ರಾಜಸ್ಥಾನ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಆಪ್ ಶಾಸಕರು ಘಟನೆಯ ಬಗ್ಗೆ ಸರ್ಕಾರದಿಂದ ಪ್ರತಿಕ್ರಿಯೆಯನ್ನು ಕೋರಿದರು.
ಈ ವಿಚಾರದಲ್ಲಿ ಸಂತ್ರಸ್ತೆಯ ತಾಯಿ ಪೊಲೀಸರ ನಿರ್ಲಕ್ಷ್ಯದ ಆರೋಪ ಮಾಡಿದ್ದಾರೆ, "ನಾವು ಮಲಗಿದ್ದಾಗ ಮೂರ್ನಾಲ್ಕು ಜನರು ಬೆಳಿಗ್ಗೆ 3 ಗಂಟೆ ಸುಮಾರಿಗೆ ಬಂದರು. ಅವರು ಅವಳ ಬಾಯಿಗೆ ಚಿಂದಿ ಬಟ್ಟೆಗಳನ್ನು ಹಾಕಿದರು ಮತ್ತು ಅವಳನ್ನು ಕರೆದೊಯ್ದರು. ನಾನು ಸಹಜವಾಗಿ ಕಿರುಚಿಕೊಂಡಿ ಅಳುತ್ತಿದ್ದೆ, ಆದರೆ ನಾವು ಆಗಲೇ ಪೊಲೀಸರಿಗೆ ಕರೆ ಮಾಡಿದೆವು. ಅವರು ಬರಲಿಲ್ಲ. ಅಷ್ಟರೊಳಗೆ ಆಕೆಯನ್ನು ಕರೆದೊಯ್ದಿದ್ದರು. ನಾವು ಪೊಲೀಸ್ ಠಾಣೆಗೆ ಹೋದೆವು. ಆದರೆ ಅವರು ಪ್ರಕರಣ ದಾಖಲಿಸಲು ನಿರಾಕರಿಸಿದರು. ಅವರು ನನಗೆ ಕೇಸು ದಾಖಲಿಸುವುದರಿಂದ ಏನೂ ಆಗುವುದಿಲ್ಲ ಎಂದು ಹೇಳಿದರು" ಎಂದು ಸಂತ್ರಸ್ತೆಯ ತಾಯಿ ಅಳಲು ತೋಡಿಕೊಂಡಿದ್ದಾರೆ.
ಶೋಧ ತಂಡಗಳು ಪ್ರಕರಣದ ಇತರ ಆರೋಪಿಗಳಿಗಾಗಿ ಹುಡುಕುತ್ತಿರುವಾಗ ಪೊಲೀಸರು ಇದುವರೆಗೆ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. "ಪ್ರಕರಣದಲ್ಲಿ ನಮಗೆ ಸುಳಿವು ಸಿಕ್ಕಿದೆ. ನಾವು ಸಂತ್ರಸ್ತೆಯ ತಾಯಿಯೊಂದಿಗೆ ಮಾತನಾಡಿದ್ದೇವೆ ಮತ್ತು ಅವರು ಯಾರನ್ನಾದರೂ ಅನುಮಾನಿಸುತ್ತಿದ್ದಾರೆಯೇ ಎಂದು ಕೇಳಿದ್ದೇವೆ. ಅವರು ಇನ್ನೂ ಯಾವುದೇ ಹೆಸರನ್ನು ನೀಡಿಲ್ಲ. ಎಫ್ಐಆರ್ ದಾಖಲಾಗಿದೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಧರಣಿಯ ನೇತೃತ್ವ ವಹಿಸಿರುವ ಬಿಜೆಪಿಯ ರಾಜ್ಯಸಭಾ ಸಂಸದ ಕಿರೋಡಿ ಲಾಲ್ ಮೀನಾ, ಸಂತ್ರಸ್ತೆಯ ಕುಟುಂಬ ಸದಸ್ಯರೊಂದಿಗೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಮತ್ತು ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ನಾಯಕ ಸಚಿನ್ ಪೈಲಟ್, ಆಡಳಿತ "ಈ ಅತ್ಯಂತ ಸೂಕ್ಷ್ಮ ವಿಷಯವನ್ನು ಆಳವಾಗಿ ತನಿಖೆ ಮಾಡಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡು ಅವರನ್ನು ನ್ಯಾಯಾಂಗಕ್ಕೆ ತರಬೇಕು" ಎಂದು ಒತ್ತಾಯಿಸಿದ್ದಾರೆ.
ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆಯೇ ಎಂಬುದನ್ನು ಪೊಲೀಸರು ಖಚಿತಪಡಿಸಿಲ್ಲ. "ಸಂತ್ರಸ್ತಯ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಸಾವಿಗೆ ಗುಂಡೇಟು ಕಾರಣ ಎಂದು ತೋರುತ್ತದೆ" ಎಂದು ಕರೌಲಿ ಎಸ್ಪಿ ಮಮತಾ ಗುಪ್ತಾ ಹೇಳಿದ್ದಾರೆ. ಪರೀಕ್ಷೆಯ ನಂತರ ಅತ್ಯಾಚಾರದ ಬಗ್ಗೆ ಫೋರೆನ್ಸಿಕ್ ತಜ್ಞರು ದೃಢೀಕರಣವನ್ನು ನೀಡಲಿದ್ದಾರೆ ಎಂದು ಅವರು ಹೇಳಿದರು.
ಪರಿಹಾರ ಮತ್ತು ಇತರ ಬೇಡಿಕೆಗಳಿಗಾಗಿ ಅಧಿಕಾರಿಗಳು ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications