ರಾಜಸ್ಥಾನ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯ, ಬಿಜೆಪಿಗೆ ನಡುಕ
ಜೈಪುರ, ಫೆಬ್ರವರಿ 02: ರಾಜಸ್ಥಾನದ ಅಲ್ವಾರ್ ಮತ್ತು ಅಜ್ಮೇರ್ ಲೋಕಸಭೆ ಮತ್ತು ಮಂದಲ್ಗ್ರಹ್ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಗಳಿಸಿದ್ದು, ರಾಜಸ್ಥಾನದ ಆಡಳಿತರೂಢ ಬಿಜೆಪಿಗೆ ಇದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹಿನ್ನಡೆಯ ಸೂಚನೆ ಎಂದೇ ಬಿಂಬಿತವಾಗುತ್ತಿದೆ.
ಮೂರು ಕ್ಷೇತ್ರದಲ್ಲಿ ಭರ್ಜರಿ ವಿಜಯವನ್ನೇ ಸಾಧಿಸಿರುವ ಕಾಂಗ್ರೆಸ್ ರಾಜಸ್ಥಾನದಲ್ಲಿ ಇದೇ ವರ್ಷಾಂತ್ಯಕ್ಕೆ ಘೋಷಣೆಯಾಗಲಿರುವ ವಿಧಾನಸಭಾ ಚುನಾವಣೆಗೆ ಸಜ್ಜಾಗಿರುವ ಎಚ್ಚರಿಕೆ ನೀಡಿದೆ. ವಿಧಾನಸಭಾ ಚುನಾವಣೆಗೆ ಸೆಮಿಫೈನಲ್ ಎಂದೇ ಕರೆಯಲಾಗಿದ್ದ ಈ ಉಪಚುನಾವಣೆಯನ್ನು ಕಾಂಗ್ರೆಸ್ ಅಧಿಕಾರಯುತವಾಗಿ ಗೆದ್ದಿದೆ.
ಉಪಚುನಾವಣೆ ನಡೆದ ಎರಡು ಲೋಕಸಭಾ ಕ್ಷೇತ್ರಗಳು (ಅಲ್ವಾರ್ ಮತ್ತು ಅಜ್ಮೇರ್) ಒಟ್ಟು 16 ವಿಧಾನಸಭೆಗಳನ್ನು ಒಳಗೊಂಡಿದೆ. ಜೊತೆಗೆ ಒಂದು ವಿಧಾನಸಭೆ ಅಂದರೆ ಒಟ್ಟು 17 ವಿಧಾನಸಭಾ ಕ್ಷೇತ್ರದ ಜನರು ಉಪಚುನಾವಣೆಯಲ್ಲಿ ಬಿಜೆಪಿಯ ವಿರುದ್ಧ ಮತ ಹಾಕಿದ್ದಾರೆ. ರಾಜಸ್ಥಾನದ ಒಟ್ಟು ಮತದ ಶೇ 8.5 ಮತಗಳು ಈ 18 ಕ್ಷೇತ್ರದಲ್ಲಿವೆ. ಇದು ಬಿಜೆಪಿಗೆ ತಲೆ ನೋವಾಗಿದೆ.

ಅಲ್ವಾರ್ ಹರಿಯಾಣ ರಾಜ್ಯದ ಗಡಿಯಲ್ಲಿದೆ, ಅಜ್ಮೇರ್ ರಾಜಸ್ಥಾನದ ಮಧ್ಯಭಾಗದಲ್ಲಿದೆ, ಮತ್ತು ಮಂದಲ್ಗ್ರಹ್ ವಿಧಾನಸಭಾ ಕ್ಷೇತ್ರ ಇರುವುದು ಮಧ್ಯಪ್ರದೇಶದ ಹತ್ತಿರ ಹಾಗಾಗಿ ಈ ಜನಾಭಿಪ್ರಾಯ ಕೇವಲ ರಾಜಸ್ಥಾನದ ಒಂದು ಭಾಗದ್ದಲ್ಲ ಎಂದು ಸ್ಪಷ್ಟವಾಗಿ ಹೇಳಬಹುದಾಗಿದೆ.
ಬಿಜೆಪಿ ಮುಜುಗರ ತಪ್ಪಿಸಿಕೊಳ್ಳಲು 'ಉಪಚುನಾವಣೆ ವಿಧಾನಸಭಾ ಚುನಾವಣೆಯ ದಿಕ್ಸೂಚಿ ಅಲ್ಲ' ಎನ್ನುತ್ತಿದೆಯಾದರೂ ಅಂತರಂಗದಲ್ಲಿ ಅದಕ್ಕೂ ಉಪ ಚುನಾವಣೆಯ ಮಹತ್ವದ ಅರಿವಿದೆ. ಹಾಗಾಗಿ ಬಿಜೆಪಿ ತನ್ನ ಸೋಲಿಗೆ ಕಾರಣಗಳನ್ನು ಹುಡುಕುವಲ್ಲಿ ನಿರತವಾಗಿದೆ. ಅಮಿತ್ ಶಾ ಸಹ ಈ ಉಪಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.
ಗುಜ್ಜರ್ ಸಮುದಾಯದ ಮೀಸಲಾತಿಗೆ ತಂದ ಎರಡು ವಿಧೇಯಕಗಳಿಗೂ ಹೈಕೋರ್ಟ್ ತಡೆ ನೀಡಿದ್ದು ರಾಜಸ್ಥಾನದಲ್ಲಿ ಬಿಜೆಪಿಯ ಜನಪ್ರಿಯತೆ ಕುಸಿಯಲು ಪ್ರಮುಖ ಕಾರಣ ಎನ್ನಲಾಗಿದೆ. ಅದನ್ನು ಹೊರತು ಪಡಿಸಿದರೆ ಪದ್ಮಾವತ್ ವಿವಾದ, ಜಿಎಸ್ಟಿ ಮತ್ತು ನೋಟ್ಬ್ಯಾನ್ನಿಂದ ರಾಜಸ್ಥಾನಿ ವ್ಯಾಪಾರಿಗಳು ತಿಂದ ಪೆಟ್ಟು ಬಿಜೆಪಿ ಸೋಲಲು ಪ್ರಮುಖ ಕಾರಣ.
ಈ ಉಪಚುನಾವಣೆಯ ವಿಜಯ ಬಿಜೆಪಿಯ ಆಡಳಿತಕ್ಕೆ ಜನರಿಂದ ಸಿಕ್ಕ ಪ್ರಶಂಸೆ ಎಂದು ಭಾವಿಸಲಾಗುತ್ತದೆ ಎಂದು ಚುನಾವಣೆಗೆ ಮೊದಲು ಬಿಜೆಪಿ ಮುಖಂಡರು ಹೇಳಿದ್ದರು ಆದರೆ ಈಗ ಚುನಾವಣೆ ಸೋತಿರುವುದು ನೋಡಿದಲ್ಲಿ ವಸುಂದರಾ ರಾಜೆ ಅವರ ಆಡಳಿತ ರಾಜಸ್ಥಾನಿಗಳಿಗೆ ತೃಪ್ತಿ ನೀಡಿಲ್ಲ ಎಂದೇ ಭಾವಿಸಬೇಕಾಗುತ್ತದೆ.
ಮುಂದಿನ ವರ್ಷ ಜನವರಿ 20ಕ್ಕೆ ರಾಜಸ್ಥಾನದ ಸರ್ಕಾರದ ಅವಧಿ ಮುಗಿಯಲಿದ್ದು ಈ ವರ್ಷಾಂತ್ಯಕ್ಕೆ ಚುನಾವಣಾ ಕಾರ್ಯಗಳು ಭಿರುಸುಗೊಳ್ಳುತ್ತವೆ. ಇಂತಹಾ ಸಮಯದಲ್ಲಿ ಉಪಚುನಾವಣೆ ಸೋತಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಬಿಜೆಪಿಯ 'ಕಾಂಗ್ರೆಸ್ ಮುಕ್ತ ಭಾರತ' ಹೇಳಿಕೆ ಕೇವಲ ಕನಸು ಎಂದೆನಿಸುತ್ತಿದೆ.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ












Click it and Unblock the Notifications