ರಾಜಸ್ಥಾನ : ಚುನಾವಣೆ ಕಾರ್ಯದಲ್ಲಿ ಒಂಟೆಗಳು ಬ್ಯುಸಿ

ಮರುಳುಗಾಡಿನ ಹಡಗು ಎಂದೇ ಖ್ಯಾತವಾಗಿರುವ ಒಂಟೆಗಳಿಗೆ ರಾಜಸ್ಥಾನದಲ್ಲಿ ಸದ್ಯ ಹೆಚ್ಚು ಬೇಡಿಕೆ. ರಾಜಸ್ಥಾನದ ಮರಳುಗಾಡಿನಿಂದ ಕೂಡಿರುವ ರಾಜ್ಯವಾಗಿರುವುದರಿಂದ ಇಲ್ಲಿ ಕಾರು, ಹೆಲಿಕಾಪ್ಟರ್ ಗಳಿಗೆ ಇಲದಷ್ಟು ಬೇಡಿಕೆ ಒಂಟೆಗಳಿಗೆ. ವಿವಿಧ ಪಕ್ಷಗಳು ತಮ್ಮ ಪ್ರಚಾರಕ್ಕಾಗಿ ಈಗಾಗಲೇ ಒಂಟೆಗಳನ್ನು ಬುಕ್ ಮಾಡಿಕೊಂಡಿದ್ದಾರೆ.
ಡಿ.1ರಂದು ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಸದ್ಯ ವಿವಿಧ ಪಕ್ಷಗಳು ಪ್ರಚಾರ ಕಾರ್ಯ ಆರಂಭಿಸಿವೆ. ಥಾರ್ ಮರುಭೂಮಿ ವ್ಯಾಪ್ತಿಯಲ್ಲಿ ಬರುವ ಜೈಸಲ್ಮೇರ್, ಪೋಖ್ರಾನ್, ಬರ್ಮರ್, ಛೋಟಾನ್ ಮರುಭೂಮಿಗಳ ವ್ಯಾಪ್ತಿಯಲ್ಲಿ ಬರುವ ವಿಧಾನಸಭಾ ಕ್ಷೇತ್ರಗಳಲ್ಲಿ ಒಂಟೆಗಳೇ ರಾಜಕೀಯ ನಾಯಕರಿಗೆ ಆಸರೆಯಾಗಿವೆ. ಇಲ್ಲಿನ ಹಲವು ಗ್ರಾಮಗಳಿಗೆ ತೆರಳಲು ಒಂಟೆ ಬಳಸುವುದು ಅನಿವಾರ್ಯವಾಗಿದೆ.
ಕೇವಲ ರಾಜಕೀಯ ನಾಯಕರು ಮಾತ್ರವಲ್ಲ ಚುನಾವಣೆಗೆ ತೆರಳುವ ಸಿಬ್ಬಂದಿ ಮತಯಂತ್ರದ ಜೊತೆಗೆ ಒಂಟೆಯ ಮೇಲೆಯೇ ಪ್ರಯಾಣ ಬೆಳಸಬೇಕು. ಆದ್ದರಿಂದ ಈ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಂಟೆಗಳಿಗೆ ಸದ್ಯ ಸಖತ್ ಡಿಮ್ಯಾಂಡ್, ಚುನಾವಣೆ ಕಾರ್ಯ ಮುಗಿಯುವ ತನಕ ಒಂಟೆಗಳನ್ನು ಮಾಡಿಕೊಳ್ಳಲಾಗಿದೆ.
2008ರ ಚುನಾವಣೆಯಲ್ಲಿ ಚುನಾವಣಾ ಆಯೋಗ ಕೆಲವು ಕ್ಷೇತ್ರಗಳಲ್ಲಿ ಮೊಬೈಲ್ ಮತ ಕೇಂದ್ರಗಳನ್ನು ಪರಿಚಯಿಸಿತ್ತು. ಕೆಲವು ಪ್ರದೇಶಗಳಲ್ಲಿ ಮತದಾರನ ಮನೆ ಬಾಗಿಲಿಗೆ ಹೋಗಿ ಮತ ಹಾಕಿಸಿಕೊಂಡು ಬರಲಾಗಿತ್ತು. ಈ ವರ್ಷವೂ ಕೆಲವು ಹಳ್ಳಿಗಳಿಗೆ ಇದೇ ಯೋಜನೆ ವಿಸ್ತರಣೆ ಆಗಲಿದೆ. ಇನ್ನೂ ಕೆಲವು ಹಳ್ಳಿಗಳಿಗೆ ಸರ್ಕಾರ ರಸ್ತೆ ಸಂಪರ್ಕ ಕಲ್ಪಿಸಿದೆ.
ನಾವು 2ಜಿ, 3ಜಿ ಯುಗದಲ್ಲಿ ಬದುಕುತ್ತಿದ್ದೇವೆ ಎಂದು ಹೆಮ್ಮೆಯಿಂದ ಹೇಳಿಕೊಂಡರು, ದೇಶದ ಹಲವು ಗ್ರಾಮಗಳಿಗೆ ಇನ್ನೂ ರಸ್ತೆ ಸಂಪರ್ಕವಿಲ್ಲ. ರಾಜಸ್ಥಾನದ ಸ್ಥಿತಿಯೂ ಇದೆ. ಆದ್ದರಿಂದ ಸದ್ಯ ಅಲ್ಲಿ ಒಂಟೆಗಳು ಚುನಾವಣಾ ಕಾರ್ಯದಲ್ಲಿ ಬ್ಯುಸಿಯಾಗಿವೆ. (ರಾಜಸ್ಥಾನ ಚುನಾವಣಾ ವೇಳಾಪಟ್ಟಿ)
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications