ರಾಜಸ್ಥಾನ : ಚುನಾವಣೆ ಕಾರ್ಯದಲ್ಲಿ ಒಂಟೆಗಳು ಬ್ಯುಸಿ

ಮರುಳುಗಾಡಿನ ಹಡಗು ಎಂದೇ ಖ್ಯಾತವಾಗಿರುವ ಒಂಟೆಗಳಿಗೆ ರಾಜಸ್ಥಾನದಲ್ಲಿ ಸದ್ಯ ಹೆಚ್ಚು ಬೇಡಿಕೆ. ರಾಜಸ್ಥಾನದ ಮರಳುಗಾಡಿನಿಂದ ಕೂಡಿರುವ ರಾಜ್ಯವಾಗಿರುವುದರಿಂದ ಇಲ್ಲಿ ಕಾರು, ಹೆಲಿಕಾಪ್ಟರ್ ಗಳಿಗೆ ಇಲದಷ್ಟು ಬೇಡಿಕೆ ಒಂಟೆಗಳಿಗೆ. ವಿವಿಧ ಪಕ್ಷಗಳು ತಮ್ಮ ಪ್ರಚಾರಕ್ಕಾಗಿ ಈಗಾಗಲೇ ಒಂಟೆಗಳನ್ನು ಬುಕ್ ಮಾಡಿಕೊಂಡಿದ್ದಾರೆ.
ಡಿ.1ರಂದು ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಸದ್ಯ ವಿವಿಧ ಪಕ್ಷಗಳು ಪ್ರಚಾರ ಕಾರ್ಯ ಆರಂಭಿಸಿವೆ. ಥಾರ್ ಮರುಭೂಮಿ ವ್ಯಾಪ್ತಿಯಲ್ಲಿ ಬರುವ ಜೈಸಲ್ಮೇರ್, ಪೋಖ್ರಾನ್, ಬರ್ಮರ್, ಛೋಟಾನ್ ಮರುಭೂಮಿಗಳ ವ್ಯಾಪ್ತಿಯಲ್ಲಿ ಬರುವ ವಿಧಾನಸಭಾ ಕ್ಷೇತ್ರಗಳಲ್ಲಿ ಒಂಟೆಗಳೇ ರಾಜಕೀಯ ನಾಯಕರಿಗೆ ಆಸರೆಯಾಗಿವೆ. ಇಲ್ಲಿನ ಹಲವು ಗ್ರಾಮಗಳಿಗೆ ತೆರಳಲು ಒಂಟೆ ಬಳಸುವುದು ಅನಿವಾರ್ಯವಾಗಿದೆ.
ಕೇವಲ ರಾಜಕೀಯ ನಾಯಕರು ಮಾತ್ರವಲ್ಲ ಚುನಾವಣೆಗೆ ತೆರಳುವ ಸಿಬ್ಬಂದಿ ಮತಯಂತ್ರದ ಜೊತೆಗೆ ಒಂಟೆಯ ಮೇಲೆಯೇ ಪ್ರಯಾಣ ಬೆಳಸಬೇಕು. ಆದ್ದರಿಂದ ಈ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಂಟೆಗಳಿಗೆ ಸದ್ಯ ಸಖತ್ ಡಿಮ್ಯಾಂಡ್, ಚುನಾವಣೆ ಕಾರ್ಯ ಮುಗಿಯುವ ತನಕ ಒಂಟೆಗಳನ್ನು ಮಾಡಿಕೊಳ್ಳಲಾಗಿದೆ.
2008ರ ಚುನಾವಣೆಯಲ್ಲಿ ಚುನಾವಣಾ ಆಯೋಗ ಕೆಲವು ಕ್ಷೇತ್ರಗಳಲ್ಲಿ ಮೊಬೈಲ್ ಮತ ಕೇಂದ್ರಗಳನ್ನು ಪರಿಚಯಿಸಿತ್ತು. ಕೆಲವು ಪ್ರದೇಶಗಳಲ್ಲಿ ಮತದಾರನ ಮನೆ ಬಾಗಿಲಿಗೆ ಹೋಗಿ ಮತ ಹಾಕಿಸಿಕೊಂಡು ಬರಲಾಗಿತ್ತು. ಈ ವರ್ಷವೂ ಕೆಲವು ಹಳ್ಳಿಗಳಿಗೆ ಇದೇ ಯೋಜನೆ ವಿಸ್ತರಣೆ ಆಗಲಿದೆ. ಇನ್ನೂ ಕೆಲವು ಹಳ್ಳಿಗಳಿಗೆ ಸರ್ಕಾರ ರಸ್ತೆ ಸಂಪರ್ಕ ಕಲ್ಪಿಸಿದೆ.
ನಾವು 2ಜಿ, 3ಜಿ ಯುಗದಲ್ಲಿ ಬದುಕುತ್ತಿದ್ದೇವೆ ಎಂದು ಹೆಮ್ಮೆಯಿಂದ ಹೇಳಿಕೊಂಡರು, ದೇಶದ ಹಲವು ಗ್ರಾಮಗಳಿಗೆ ಇನ್ನೂ ರಸ್ತೆ ಸಂಪರ್ಕವಿಲ್ಲ. ರಾಜಸ್ಥಾನದ ಸ್ಥಿತಿಯೂ ಇದೆ. ಆದ್ದರಿಂದ ಸದ್ಯ ಅಲ್ಲಿ ಒಂಟೆಗಳು ಚುನಾವಣಾ ಕಾರ್ಯದಲ್ಲಿ ಬ್ಯುಸಿಯಾಗಿವೆ. (ರಾಜಸ್ಥಾನ ಚುನಾವಣಾ ವೇಳಾಪಟ್ಟಿ)
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications