ಜಾತಿ ಸಮೀಕ್ಷೆಗೆ ಆದೇಶಿದ ರಾಜಸ್ಥಾನದ ಕಾಂಗ್ರೆಸ್‌ ಸರ್ಕಾರ

ಜೈಪುರ, ಅಕ್ಟೋಬರ್ 08; ಬಿಹಾರ ಸರ್ಕಾರ ಜಾತಿ ಗಣತಿ ವರದಿ ಬಿಡುಗಡೆ ಮಾಡಿದ ಬಳಿಕ ದೇಶದಲ್ಲಿ ಜಾತಿ ಗಣತಿಯ ಬಗ್ಗೆ ಚರ್ಚೆಗಳು ಜೋರಾಗಿವೆ. ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಇರುವಾಗ ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಜಾತಿ ಸಮೀಕ್ಷೆ ನಡೆಸಲು ಆದೇಶಿಸಿದೆ.

ಶನಿವಾರ ರಾತ್ರಿ ಕಾಂಗ್ರೆಸ್ ಸರ್ಕಾರ ಜಾತಿ ಸಮೀಕ್ಷೆ ನಡೆಸಲು ಆದೇಶ ಹೊರಡಿಸಿದೆ. ಎಲ್ಲಾ ಸಮುದಾಯಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ತಿಳಿಯಲು ಜಾತಿ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಆದೇಶ ಹೇಳಿದೆ.

ashok-gehlot-caste-survey-rajasthan

ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಯಾವುದೇ ಕ್ಷಣದಲ್ಲಿ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ. ಇಂತಹ ಸಮಯದಲ್ಲಿಯೇ ಸರ್ಕಾರ ಜಾತಿ ಸಮೀಕ್ಷೆ ನಡೆಸುವುದಾಗಿ ಆದೇಶ ಹೊರಡಿಸಿದೆ. ಬಿಹಾರ ಬಳಿಕ ಜಾತಿ ಸಮೀಕ್ಷೆ ನಡೆಸುತ್ತಿರುವ ಎರಡನೇ ರಾಜ್ಯ ರಾಜಸ್ಥಾನವಾಗಿದೆ.

ಸರ್ಕಾರದಿಂದ ಆದೇಶ; ಜಾತಿ ಸಮೀಕ್ಷೆ ನಡೆಸುವ ಕುರಿತು ರಾಜಸ್ಥಾನದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಶನಿವಾರ ಆದೇಶ ಹೊರಡಿಸಿದೆ. ತನ್ನ ಮೂಲಗಳ ಮೂಲಕ ಸಮೀಕ್ಷೆಯನ್ನು ನಡೆಸಲಾಗುತ್ತದೆ. ಎಲ್ಲಾ ಸಮುದಾಯಗಳ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿ ತಿಳಿಯಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ.

ಯೋಜನಾ ನಿರ್ದೇಶನಾಲಯ (ಆರ್ಥಿಕ ಮತ್ತು ಸಾಂಖ್ಯಿಕ)ವನ್ನು ಈ ಜಾತಿ ಸಮೀಕ್ಷೆಗೆ ನೋಡೆಲ್ ಏಜೆನ್ಸಿಯಾಗಿ ನೇಮಿಸಲಾಗಿದೆ. ಆದರೆ ಸರ್ಕಾರ ತನ್ನ ಆದೇಶದಲ್ಲಿ ಜಾತಿ ಸಮೀಕ್ಷೆ ವರದಿಯನ್ನು ಯಾವಾಗ ನೀಡಬೇಕು? ಎಂದು ಗಡುವು ನೀಡಿಲ್ಲ.

ಜಾತಿ ಸಮೀಕ್ಷೆ ನಡೆಸುವ ಆದೇಶವನ್ನು ಟ್ವೀಟ್ ಮಾಡಿರುವ ರಾಜಸ್ಥಾನದ ಆಡಳಿತ ಪಕ್ಷ ಕಾಂಗ್ರೆಸ್, "ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಜಾತಿ ಸಮೀಕ್ಷೆಯನ್ನು ನಡೆಸಲಿದೆ. ಪಕ್ಷ ತನ್ನ ಬದ್ಧತೆಗಳಿಗೆ ತಕ್ಕಂತೆ ಹೆಜ್ಜೆ ಇಟ್ಟಿದೆ" ಎಂದು ಹೇಳಿದೆ.

ಶನಿವಾರ ಬೆಳಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ್ದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, "ಜಾತಿ ಸಮೀಕ್ಷೆ ನಡೆಸಲು ಶೀಘ್ರದಲ್ಲೇ ಆದೇಶ ಪ್ರಕಟವಾಗಲಿದೆ. ನಾವು ಸಮೀಕ್ಷೆ ಮಾಡುತ್ತೇವೆ. ಇದು ಸಮೀಕ್ಷೆಯಾಗಿದೆ. ಗಣತಿ ನಡೆಸುವುದು ಕೇಂದ್ರ ಸರ್ಕಾರ" ಎಂದು ಹೇಳಿದ್ದರು.

"ಕುಟುಂಬಗಳ ಸ್ಥಿತಿಗತಿಯನ್ನು ತಿಳಿಯಲು ಸಮೀಕ್ಷೆ ನಡೆಸಲಾಗುತ್ತದೆ. ಇದು ನಮ್ಮ ಪಕ್ಷದ ಬದ್ಧತೆಯಾಗಿದೆ. ಈ ಸಮೀಕ್ಷೆ ನಡೆಸಲು ಸಮಯಾವಕಾಶ ಬೇಕಾಗುತ್ತದೆ. ಸಮೀಕ್ಷೆ ನಡೆಸಲು ತೀರ್ಮಾನ ಕೈಗೊಂಡಿರುವುದು ನಮ್ಮ ಸರ್ಕಾರದ ಮಹತ್ವದ ತೀರ್ಮಾನವಾಗಿದೆ" ಎಂದು ತಿಳಿಸಿದ್ದರು.

"ರಾಜಸ್ಥಾನದಲ್ಲಿ ನಡೆದ ಎಐಸಿಸಿಯ ಮಹಾಧಿವೇಶನದಲ್ಲಿ ಜಾತಿ ಸಮೀಕ್ಷೆಯನ್ನು ನಡೆಸಲು ತೀರ್ಮಾನ ಕೈಗೊಳ್ಳಲಾಗಿತ್ತು. ನಾವು ಇದನ್ನು ಮುನ್ನಡೆಸುತ್ತಿದ್ದೇವೆ. ಎಲ್ಲಾ ಕುಟುಂಬಗಳ ಆರ್ಥಿಕ ಸ್ಥಿತಿಗಳ ಮಾಹಿತಿ ಸಿಕ್ಕರೆ ಸರ್ಕಾರದ ಭವಿಷ್ಯದ ಯೋಜನೆಗಳನ್ನು ರೂಪಿಸಲು ಸಹಾಯಕವಾಗಲಿದೆ" ಎಂದು ಅಶೋಕ್ ಗೆಹ್ಲೋಟ್ ವಿವರಿಸಿದ್ದರು.

"ಬಿಹಾರದ ಜಾತಿ ಗಣತಿಯ ಮಾದರಿಯಲ್ಲಿಯೇ ರಾಜಸ್ಥಾನದಲ್ಲಿಯೂ ಜಾತಿ ಸಮೀಕ್ಷೆ ನಡೆಸಲಾಗುತ್ತದೆ. ಸುಪ್ರೀಂಕೋರ್ಟ್‌ನಲ್ಲಿಯೂ ಜಾತಿ ಗಣತಿ ಬಗ್ಗೆ ವಾದಗಳು ನಡೆದಿವೆ. ಆದೇಶ ಬಿಹಾರ ಸರ್ಕಾರದ ಪರವಾಗಿ ಬಂದಿದೆ" ಎಂದರು.

"ಹಿಂದುಳಿದ ವರ್ಗಗಳಿಗೆ ಹೊಸ ಹೊಸ ಯೋಜನೆಗಳನ್ನು ಜಾರಿಗೊಳಿಸಲು ಜಾತಿ ಸಮೀಕ್ಷೆ ಸಹಾಯಕವಾಗಲಿದೆ. ಇದು ಅವರ ಜೀವನ ಮಟ್ಟ ಸುಧಾರಣೆ ಮಾಡಲು ಸಹಾಯಕವಾಗಲಿದೆ" ಎಂದು ಅಶೋಕ್ ಗೆಹ್ಲೋಟ್ ತಿಳಿಸಿದರು.

ರಾಜಸ್ಥಾನ ವಿಧಾನಸಭೆಗೆ 2018ರಲ್ಲಿ ಚುನಾವಣೆ ನಡೆದಿತ್ತು. ಈಗ ಪುನಃ ಚುನಾವಣೆಗೆ ರಾಜ್ಯ ಸಿದ್ಧವಾಗಿದೆ. ಚುನಾವಣಾ ಆಯೋಗ ಯಾವುದೇ ಕ್ಷಣದಲ್ಲಿ ರಾಜಸ್ಥಾ, ಛತ್ತೀಸ್‌ಗಢ, ತೆಲಂಗಾಣ ಸೇರಿದಂತೆ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡುವ ನಿರೀಕ್ಷೆ ಇದೆ.

ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾದ ತಕ್ಷಣ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ನೀತಿ ಸಂಹಿತೆ ಜಾರಿಯಾದರೆ ಸರ್ಕಾರದ ಜಾತಿ ಸಮೀಕ್ಷೆ ನಡೆಸುವ ಆದೇಶ ಏನಾಗಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+