ರಾಜಸ್ಥಾನದಲ್ಲಿ ಮುದುಡಲಿದೆ ಕಮಲ, ಕೈಗೆ ಬಹುಮತದ ಬಲ!
ನವದೆಹಲಿ, ನವೆಂಬರ್ 02: ರಾಜಸ್ಥಾನದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ(ಬಿಜೆಪಿ) ಈ ಬಾರಿ ಮುಖಭಂಗ ಅನುಭವಿಸಲಿದೆ ಎಂದು ಟೈಮ್ಸ್ ನೌ -ಸಿಎನ್ಎಕ್ಸ್ ಚುನಾವಣಾ ಪೂರ್ವ ಸಮೀಕ್ಷೆ ಫಲಿತಾಂಶ ಹೇಳುತ್ತಿದೆ.
ರಾಜಸ್ಥಾನದ ವಸುಂಧರಾರಾಜೇ ನೇತೃತ್ವದ ಸರ್ಕಾರದ ವಿರುದ್ಧ ಜನಮತಾಭಿಪ್ರಾಯ ವ್ಯಕ್ತವಾಗಿದೆ.ಸಮೀಕ್ಷೆ ಪ್ರಕಾರ,ಬರೋಬ್ಬರಿ ನೂರು ಸೀಟುಗಳ ನಷ್ಟ ಅನುಭವಿಸಲಿದೆ. 2013ರ ಚುನಾವಣೆಯಲ್ಲಿ 163 ಸೀಟುಗಳನ್ನು ಗೆದ್ದಿದ್ದ ಬಿಜೆಪಿ, ಈ ಬಾರಿ ಕೇವಲ 63 ಸೀಟುಗಳನ್ನು ಗೆಲ್ಲುವ ನಿರೀಕ್ಷೆ ಇದೆ.
200 ಸೀಟುಗಳ ಪೈಕಿ ಕೇವಲ 21ರಲ್ಲಿ ಗೆದ್ದಿದ್ದ ಕಾಂಗ್ರೆಸ್, ಈ ಚುನಾವಣೆಯಲ್ಲಿ 129 ಸ್ಥಾನಗಳನ್ನು ಪಡೆದು ಅಧಿಕಾರ ಹಿಡಿಯಲಿದೆ. ಇಲ್ಲಿ ಸರ್ಕಾರ ರಚನೆಗೆ 101 ಸ್ಥಾನಗಳ ಅವಶ್ಯಕತೆಯಿದೆ ಎಂದು ಟೈಮ್ಸ್ ನೌ -ಸೀ ವೋಟರ್ ಸಮೀಕ್ಷೆಗಳ ಸಮೀಕ್ಷೆಯಲ್ಲಿ ಹೇಳಲಾಗಿತ್ತು.
ಇನ್ನು ಎಬಿಪಿ ನ್ಯೂಸ್ ಪ್ರಕಾರ, ಕಳೆದ ಬಾರಿ 2013ರಲ್ಲಿ ನಡೆದಿದ್ದ ಚುನಾವಣೆಯಲ್ಲಿ 163 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ್ದ ಬಿಜೆಪಿ, ಈಬಾರಿ ಕೇವಲ 56 ಕ್ಷೇತ್ರಗಳಲ್ಲಿ ಮಾತ್ರ ಜಯ ಸಾಧಿಸಲಿದೆ.
ಕಳೆದ ಬಾರಿ ಕೇವಲ 21 ಸೀಟು ಗೆದ್ದಿದ್ದ ಕಾಂಗ್ರೆಸ್ ಈಬಾರಿ ತನಗೇ ಅಚ್ಚರಿ ಆಗುವಂತೆ 142 ಸೀಟುಗಳಲ್ಲಿ ಗೆಲ್ಲಲಿದೆ. ಇನ್ನೆರಡು ಸ್ಥಾನಗಳು ಇತರ ಪಕ್ಷಗಳ ಪಾಲಾಗಲಿವೆ ಎಂದು ಸಮೀಕ್ಷೆ ಬಂದಿದೆ.ಈಗ ಟೈಮ್ಸ್ ನೌ ಸಿಎನ್ಎಕ್ಸ್ ವರದಿ ಕೂಡಾ ಇದಕ್ಕಿಂತ ವಿಭಿನ್ನವಾಗೇನು ಇಲ್ಲ, ಕಾಂಗ್ರೆಸ್ಸಿಗೆ ಹಿತವಾಗಿ ಫಲಿತಾಂಶ ಬಂದಿದೆ.

ಟೈಮ್ಸ್ ನೌ ಸಿಎನ್ಎಕ್ಸ್ ವರದಿ
ಈ ಸಮೀಕ್ಷೆ ಪ್ರಕಾರ, ಕಾಂಗ್ರೆಸ್ ಈ ಬಾರಿ 110 ರಿಂದ 130 ಸ್ಥಾನಗಳನ್ನು ಪಡೆಯುವ ಮೂಲಕ 200 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಯಲ್ಲಿ ಸರಳ ಬಹುಮತ ಪಡೆಯಲಿದೆ. ಬಿಜೆಪಿಯು 70 ರಿಂದ 80 ಸ್ಥಾನ ಗಳಿಸಬಹುದು. ಬಿಎಸ್ಪಿ 1 ರಿಂದ 3, ಜಾಟ್ ನಾಯಕ ಹನುಮಾನ್ ಬೆನಿವಾಲ್ ಅವರ ರಾಷ್ಟ್ರೀಯ ಲೋಕತಾಂತ್ರಿಕ ಪಾರ್ಟಿ, ಘನಶ್ಯಾಮ್ ತಿವಾರಿಯವರ ಭಾರತ್ ವಾಹಿನಿ ಪಾರ್ಟಿ ಸೇರಿ ಉಳಿದ ಪಕ್ಷಗಳು 7 ಸ್ಥಾನ ಗಳಿಸಬಹುದು

ವಸುಂಧರಾ ರಾಜೇ ಅವರ ಆಡಳಿತದ ಬಗ್ಗೆ
ಮುಖ್ಯಮಂತ್ರಿ ವಸುಂಧರಾ ರಾಜೇ ಅವರ ಆಡಳಿತದ ಬಗ್ಗೆ ಪ್ರಶ್ನೆ ಕೇಳಲಾಗಿದ್ದು, ರಾಜೇ ಅವರ ಬಿಜೆಪಿ ಸರ್ಕಾರಕ್ಕೆ ಸಾರ್ವಜನಿಕರು ನೀಡಿರುವ ಪ್ರತಿಕ್ರಿಯೆ ಹೀಗಿದೆ:
ಉತ್ತಮ : ಶೇ35
ಸರಾಸರಿ : 12%
ಕಳಪೆ : 48%
ಗೊತ್ತಿಲ್ಲ:5%
****
ಯಾರ ಸರ್ಕಾರ ಹೆಚ್ಚು ಉತ್ತಮವಾಗಿತ್ತು?
ಅಶೋಕ್ ಗೆಹ್ಲೋಟ್ : ಶೇ 30.82
ವಸುಂಧರಾ ರಾಜೇ : 25.25%
ಇಬ್ಬರ ಆಡಳಿತವೂ ಉತ್ತಮ : 10.8%
ಇಬ್ಬರ ಆಡಳಿತವೂ ಕಳಪೆ : 13.23 %
ಸರಿಯಾಗಿ ಹೇಳಲಾಗದು : 20.62%

ಯಾರನ್ನು ಸಿಎಂ ಆಗಿ ನೋಡಬಯಸುತ್ತೀರಿ?
ಸಚಿನ್ ಪೈಲಟ್ : ಶೇ 31.75
ವಸುಂಧರಾ ರಾಜೇ : ಶೇ 20.5
ಅಶೋಕ್ ಗೆಹ್ಲೋಟ್ :ಶೇ 15.01

ವಸುಂಧರಾ ವಿರುದ್ಧ ಆಡಳಿತಾ ವಿರೋಧಿ ಅಲೆ
ಪದ್ಮಾವತಿ ಚಿತ್ರ ವಿವಾದ ಸಂದರ್ಭದಲ್ಲಿ ಸರ್ಕಾರದ ಕ್ರಮ
ಪರ್ವಾಗಿಲ್ಲ: 20.5%
ಸರಿಯಾಗಿರಲಿಲ್ಲ: 65.95%
ಅಭಿಪ್ರಾಯ ಹೇಳಲ್ಲ : 13.55%
ಗ್ಯಾಂಗ್ ಸ್ಟರ್ ಆನಂದ್ ಪಾಲ್ ಸಿಂಗ್ ಎನ್ ಕೌಂಟರ್
ತೃಪ್ತಿ ತಂದಿದೆ: 40.51%
ಸರಿಯಾದ ಕ್ರಮವಲ್ಲ : 55.78%
ಅಭಿಪ್ರಾಯ ಹೇಳಲ್ಲ : 3.71 %
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications