Rajasthan Exit poll results: ಇಂಡಿಯಾ ಟುಡೇ ಚುನಾವಣೋತ್ತರ ಸಮೀಕ್ಷೆಗಳು ಹೇಳುವುದೇನು?
ಜೈಪುರ, ನವೆಂಬರ್ 30: ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ ಡಿಸೆಂಬರ್ 3ರಂದು ಪ್ರಕಟವಾಗಲಿದ್ದು, ಇಂದು ಬಂದಿರುವ ಎಕ್ಸಿಟ್ ಪೋಲ್ ಫಲಿತಾಂಶಗಳು ದೇಶದ ಜನರ ಗಮನ ಸೆಳೆದಿದೆ. ಈ ಎಕ್ಸಿಟ್ ಪೋಲ್ ಫಲಿತಾಂಶಗಳು ನಿಖರವಲ್ಲದಿದ್ದರೂ ಅಂದಾಜನ್ನು ನೀಡುತ್ತವೆ. ಈ ನಿಟ್ಟಿನಲ್ಲಿ ಇಂಡಿಯಾ ಟುಡೇ ಎಕ್ಸಿಟ್ ಪೋಲ್ ವಿವರಗಳು ಬಹಿರಂಗವಾಗಿದೆ.
ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆಗೆ ನವೆಂಬರ್ 25 ರಂದು ಒಂದೇ ಹಂತದಲ್ಲಿ ಮತದಾನವನ್ನು ನಡೆಸಲಾಗಿದೆ. ರಾಜಸ್ಥಾನದ 200 ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಪೈಕಿ 199 ಅಭ್ಯರ್ಥಿಗಳನ್ನು ಆಯ್ಕೆ ಮಾಡಲು 5 ಕೋಟಿಗೂ ಹೆಚ್ಚು ಅರ್ಹ ಮತದಾರರು ತಮ್ಮ ಮತಗಳನ್ನು ಹಾಕಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನಾರ್ ಅವರ ನಿಧನದಿಂದಾಗಿ ಒಂದು ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಅಧಿಕಾರ ಉಳಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದರೆ, ಪ್ರತಿಪಕ್ಷ ಬಿಜೆಪಿ ಗ್ರ್ಯಾಂಡ್ ಓಲ್ಡ್ ಪಕ್ಷವನ್ನು ಉರುಳಿಸುವ ನಿರೀಕ್ಷೆಯಲ್ಲಿದೆ.
ಈಗ ರಾಜಸ್ಥಾನ ವಿಧಾನಸಭಾ ಚುನಾವಣೆ ಇಂಡಿಯಾ ಟುಡೇ ಎಕ್ಸಿಟ್ ಪೋಲ್ ವಿವರಗಳು ಹೊರಬಿದ್ದವೆ. ಆಡಳಿತರೂಢ ಕಾಂಗ್ರೆಸ್ 86ರಿಂದ 106 ಸ್ಥಾನಗಳಲ್ಲಿ ಗೆಲುವು ಪಡೆಯಲಿದೆ ಎಂದು ತಿಳಿಸಿದೆ. ಬಿಜೆಪಿಯು 80ರಿಂದ 100 ಸ್ಥಾನಗಳಲ್ಲಿ ಗೆಲುವು ಪಡೆಯಲಿದ್ದು, ಇತರರು 1ರಿಂದ 2 ಸ್ಥಾನಗಳಲ್ಲಿ ಗೆಲುವು ಪಡೆಯಲಿದೆ ಎಂದು ಸಮೀಕ್ಷೆ ತಿಳಿಸಿದೆ. ದೈನಿಕ್ ಭಾಸ್ಕರ್ ಚುನಾವಣೋತ್ತರ ಸಮೀಕ್ಷೆ ವಿವರಗಳ ಪ್ರಕಾರ ಈ ಬಾರಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳಲಿದ್ದು, ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಹೇಳಿದೆ.
ರಾಜಸ್ಥಾನ ವಿಧಾನಸಭೆಯಲ್ಲಿ 200 ಸ್ಥಾನಗಳಿದ್ದು ಬಹುಮತದ ಅಂಕ 101. 2018 ರಲ್ಲಿ ಕಾಂಗ್ರೆಸ್ 'ರಿವಾಲ್ವಿಂಗ್ ಡೋರ್' ನೀತಿಯಿಂದ ಲಾಭ ಗಳಿಸಿತು ಮತ್ತು ಬಿಜೆಪಿಯ 73 ಗೆ 100 ಸ್ಥಾನಗಳನ್ನು ಗೆದ್ದಿತು. ಮತ ಹಂಚಿಕೆಗಳು ಬಹುತೇಕ ಸಮಾನವಾಗಿದ್ದರೂ ಸಹ ಇದು ಗಮನಾರ್ಹ ಅಂತರವಾಗಿತ್ತು. ಬಿಜೆಪಿಯ ಹಿಡಿತವು ಆಡಳಿತ ವಿರೋಧಿ ಅಂಶದ ಬಲವನ್ನು ಒತ್ತಿಹೇಳಿತು. 2013 ರಲ್ಲಿ ಅದು 163 ಸ್ಥಾನಗಳನ್ನು ಮತ್ತು 45 ಶೇಕಡಾ ಮತಗಳನ್ನು ಗೆದ್ದಿತು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications