Rajasthan Exit poll results: ದೈನಿಕ್ ಭಾಸ್ಕರ್ ಸಮೀಕ್ಷೆಗಳು ಹೇಳುವುದೇನು?
ಜೈಪುರ, ನವೆಂಬರ್ 30: ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ ಡಿಸೆಂಬರ್ 3ರಂದು ಪ್ರಕಟವಾಗಲಿದ್ದು, ಇಂದು ಬರುವ ಎಕ್ಸಿಟ್ ಪೋಲ್ ಫಲಿತಾಂಶಗಳತ್ತ ದೇಶದ ಜನರ ಗಮನವಿದೆ. ಈ ಎಕ್ಸಿಟ್ ಪೋಲ್ ಫಲಿತಾಂಶಗಳು ನಿಖರವಲ್ಲದಿದ್ದರೂ ಅಂದಾಜನ್ನು ನೀಡುತ್ತವೆ. ಈ ನಿಟ್ಟಿನಲ್ಲಿ ದೈನಿಕ್ ಭಾಸ್ಕರ್ ಎಕ್ಸಿಟ್ ಪೋಲ್ ವಿವರಗಳು ಬಹಿರಂಗವಾಗಿದೆ.
ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆಗೆ ನವೆಂಬರ್ 25 ರಂದು ಒಂದೇ ಹಂತದಲ್ಲಿ ಮತದಾನವನ್ನು ನಡೆಸಲಾಗಿದೆ. ರಾಜಸ್ಥಾನದ 200 ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಪೈಕಿ 199 ಅಭ್ಯರ್ಥಿಗಳನ್ನು ಆಯ್ಕೆ ಮಾಡಲು 5 ಕೋಟಿಗೂ ಹೆಚ್ಚು ಅರ್ಹ ಮತದಾರರು ತಮ್ಮ ಮತಗಳನ್ನು ಹಾಕಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನಾರ್ ಅವರ ನಿಧನದಿಂದಾಗಿ ಒಂದು ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಅಧಿಕಾರ ಉಳಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದರೆ, ಪ್ರತಿಪಕ್ಷ ಬಿಜೆಪಿ ಗ್ರ್ಯಾಂಡ್ ಓಲ್ಡ್ ಪಕ್ಷವನ್ನು ಉರುಳಿಸುವ ನಿರೀಕ್ಷೆಯಲ್ಲಿದೆ.
ಈಗ ರಾಜಸ್ಥಾನ ವಿಧಾನಸಭಾ ಚುನಾವಣೆ ದೈನಿಕ್ ಭಾಸ್ಕರ್ ಎಕ್ಸಿಟ್ ಪೋಲ್ ವಿವರಗಳು ಹೊರಬಿದ್ದವೆ. ಆಡಳಿತರೂಢ ಕಾಂಗ್ರೆಸ್ 85ರಿಂದ 95 ಸ್ಥಾನಗಳಲ್ಲಿ ಗೆಲುವು ಪಡೆಯಲಿದೆ ಎಂದು ತಿಳಿಸಿದೆ. ಬಿಜೆಪಿಯು 98ರಿಂದ 109 ಸ್ಥಾನಗಳಲ್ಲಿ ಗೆಲುವು ಪಡೆಯಲಿದ್ದು, ಇತರರು 0 ಸ್ಥಾನಗಳಲ್ಲಿ ಗೆಲುವು ಪಡೆಯಲಿದೆ ಎಂದು ಸಮೀಕ್ಷೆ ತಿಳಿಸಿದೆ. ದೈನಿಕ್ ಭಾಸ್ಕರ್ ಚುನಾವಣೋತ್ತರ ಸಮೀಕ್ಷೆ ವಿವರಗಳ ಪ್ರಕಾರ ಈ ಬಾರಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳಲಿದ್ದು, ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಹೇಳಿದೆ.
ರಾಜಸ್ಥಾನ ವಿಧಾನಸಭೆಯಲ್ಲಿ 200 ಸ್ಥಾನಗಳಿದ್ದು ಬಹುಮತದ ಅಂಕ 101. 2018 ರಲ್ಲಿ ಕಾಂಗ್ರೆಸ್ 'ರಿವಾಲ್ವಿಂಗ್ ಡೋರ್' ನೀತಿಯಿಂದ ಲಾಭ ಗಳಿಸಿತು ಮತ್ತು ಬಿಜೆಪಿಯ 73 ಗೆ 100 ಸ್ಥಾನಗಳನ್ನು ಗೆದ್ದಿತು. ಮತ ಹಂಚಿಕೆಗಳು ಬಹುತೇಕ ಸಮಾನವಾಗಿದ್ದರೂ ಸಹ ಇದು ಗಮನಾರ್ಹ ಅಂತರವಾಗಿತ್ತು. ಬಿಜೆಪಿಯ ಹಿಡಿತವು ಆಡಳಿತ ವಿರೋಧಿ ಅಂಶದ ಬಲವನ್ನು ಒತ್ತಿಹೇಳಿತು. 2013 ರಲ್ಲಿ ಅದು 163 ಸ್ಥಾನಗಳನ್ನು ಮತ್ತು 45 ಶೇಕಡಾ ಮತಗಳನ್ನು ಗೆದ್ದಿತು.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ












Click it and Unblock the Notifications