Rajasthan assembly election result 2023: ಬಿಜೆಪಿಗೆ ಭಾರಿ ಬಹುಮತ ಸಿಗುತ್ತದೆ: ಗಜೇಂದ್ರ ಸಿಂಗ್ ಶೇಖಾವತ್
ಜೈಪುರ, ಡಿಸೆಂಬರ್ 3: ಬಿಜೆಪಿಗೆ ಭಾರಿ ಬಹುಮತ ಸಿಗುತ್ತದೆ ಎಂದು ನಾನು ಮೊದಲ ದಿನದಿಂದ ಹೇಳುತ್ತಿದ್ದೇನೆ. ಛತ್ತೀಸ್ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಗೆಲ್ಲುತ್ತದೆ. ಇದಕ್ಕೆ ಪ್ರಧಾನಿ ಮೋದಿಯವರು ಬಡವರ ಜೀವನದಲ್ಲಿ ಬದಲಾವಣೆ ತರಲು ಮಾಡಿದ ಕೆಲಸವೇ ಕಾರಣ ಎಂದು ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ.
ಬಿಜೆಪಿ ಸಂಸದ ಹಾಗೂ ಪಕ್ಷದ ನಾಯಕ ಜೈವೀರ್ ಶೇರ್ಗಿಲ್ ಮಾತನಾಡಿ, ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 3-0 ಅಂತರದಲ್ಲಿ ಜಯಗಳಿಸಲಿದೆ. ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢದಲ್ಲಿ ಪಕ್ಷದ ವಿಜಯ ರಥ ಬರಲಿದೆ, ತೆಲಂಗಾಣದಲ್ಲಿ ಇಲ್ಲದಿದ್ದರೆ ಮುಂದಿನ ಬಾರಿ ರಾಜ್ಯದಲ್ಲಿ ಬಿಜೆಪಿ ಬಾವುಟ ಹಾರಿಸಲಿದೆ ಎಂದು ಹೇಳಿದ್ದಾರೆ.

ಚುನಾವಣಾ ಆಯೋಗದಿಂದ ದೊರೆತ ಮಾಹಿತಿಯ ಪ್ರಕಾರ. 10.51ಕ್ಕೆ ಬಿಜೆಪಿ 101, ಕಾಂಗ್ರೆಸ್ 77, ಪಕ್ಷೇತರರು 8 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಜೈಪುರದ ಪಕ್ಷದ ಕಚೇರಿಯ ಹೊರಗೆ ಬಿಜೆಪಿ ಕಾರ್ಯಕರ್ತರು ಡ್ರಮ್ ಬಾರಿಸುವುದು ಮತ್ತು ನೃತ್ಯ ಮಾಡುವುದು ಮುಂದುವರಿದಿದೆ.
#WATCH | Jaipur, Rajasthan: Union minister and BJP leader Gajendra Singh Shekhawat says, "I have been saying from day one that the BJP will get a huge majority. BJP will win in Chhattisgarh, Madhya Pradesh and Rajasthan. This is due to the work done by PM Modi to bring change in… pic.twitter.com/qbwzCdJQEQ
— ANI (@ANI) December 3, 2023
ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ಬಿಎಸ್ಪಿ 3, ಸಿಪಿಐ 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ರಾಜಸ್ಥಾನ ವಿಧಾನಸಭಾ ಚುನಾವಣೆಯ ಫಲಿತಾಂಶ ಭಾನುವಾರ ಸಂಜೆ ವೇಳೆಗೆ ಅಂತಿಮ ಫಲಿತಾಂಶ ಚಿತ್ರಣ ದೊರೆಯಲಿದ್ದು, ಬೆಳಗ್ಗೆ 8ರಿಂದ ಮತ ಎಣಿಕೆ ಆರಂಭವಾಗಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾವಿನಿಂದ ಕರಣ್ಪುರ ಕ್ಷೇತ್ರಕ್ಕೆ ಮತದಾನ ನಡೆದಿಲ್ಲ. ಹಾಗಾಗಿ 199 ಸ್ಥಾನಗಳಿಗೆ ಮಾತ್ರ ಎಣಿಕೆ ನಡೆಯುತ್ತಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications