Rajasthan elections: ಕರ್ನಾಟಕದ ಯಶಸ್ಸಿನ ಬೆನ್ನಲ್ಲೇ ರಾಜಸ್ಥಾನದಲ್ಲೂ ಉಚಿತ ವಿದ್ಯುತ್ ಘೋಷಿಸಿದ ಕಾಂಗ್ರೆಸ್!
ಜೈಪುರ, ಜೂನ್. 01: ಕರ್ನಾಟಕದಲ್ಲಿ ಗ್ಯಾರಂಟಿಗಳನ್ನು ಘೋಷಿಸಿ ಭಾರೀ ಯಶಸ್ಸು ಕಂಡಿದ್ದ ಕಾಂಗ್ರೆಸ್ ಈ ವರ್ಷಾಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿಯೂ ಈ ಗ್ಯಾರಂಟಿಗಳನ್ನು ಮುಂದುವರೆಸಲು ಯೋಜಿಸಿದೆ. ಸದ್ಯ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಜನರಿಗೆ ಉಚಿತ ವಿದ್ಯುತ್ ಭರವಸೆಯನ್ನು ನೀಡಿದ್ದಾರೆ.
100 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ಮತ್ತು ಮುಂದಿನ 100 ಕ್ಕೆ ನಿಗದಿತ ದರವನ್ನು ಅಶೋಕ್ ಗೆಹ್ಲೋಟ್ ಸರ್ಕಾರ ಬುಧವಾರ ಸಂಜೆ ಪ್ರಕಟಿಸಿದೆ. ಈ ನಿರ್ಧಾರವು ಸಾರ್ವಜನಿಕ ಪ್ರತಿಕ್ರಿಯೆಯನ್ನು ಆಧರಿಸಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ''ಹಣದುಬ್ಬರ ಪರಿಹಾರಗಳ ಬಗ್ಗೆ ಸಾರ್ವಜನಿಕರೊಂದಿಗೆ ಮಾತನಾಡಿದ ನಂತರ ವಿದ್ಯುತ್ ಬಿಲ್ಗಳಲ್ಲಿ ವಿನಾಯಿತಿಯಲ್ಲಿ ಸ್ವಲ್ಪ ಬದಲಾವಣೆ ಮಾಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು" ಎಂದು ಹೇಳಿದ್ದಾರೆ.

"ಮೇ ತಿಂಗಳಲ್ಲಿ ವಿದ್ಯುತ್ ಬಿಲ್ಗಳಲ್ಲಿ ಇಂಧನ ಹೆಚ್ಚುವರಿ ಶುಲ್ಕದ ಬಗ್ಗೆ ಸಾರ್ವಜನಿಕರಿಂದ ಪ್ರತಿಕ್ರಿಯೆಯನ್ನು ಸ್ವೀಕರಿಸಲಾಗಿದೆ. ಅದರ ಆಧಾರದ ಮೇಲೆ ಈ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ" ಎಂದು ಅಶೋಕ್ ಗೆಹ್ಲೋಟ್ ತಿಳಿಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಚುನಾವಣೆಗೂ ಮುನ್ನ 200 ಯೂನಿಟ್ ವಿದ್ಯುತ್ ಉಚಿತದ ಗ್ಯಾರಂಟಿ ನೀಡಿದೆ. ಇದಕ್ಕೆ ಗೃಹಲಕ್ಷ್ಮೀ ಎಂದು ಕರೆಯಲಾಗಿದೆ. ಭರವಸೆಗೆಡ ಮೊದಲ ಸಂಪುಟ ಅನುಮೋದನೆ ನೀಡಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಬುಧವರಾ ಅಜ್ಮೀರ್ನಿಂದ ಪಕ್ಷದ ಪ್ರಚಾರವನ್ನು ಪ್ರಾಯೋಗಿಕವಾಗಿ ಪ್ರಾರಂಭಿಸಿ ರಾಜ್ಯ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದೇ ದಿನದಂದು ತಡರಾತ್ರಿಯಲ್ಲಿ ಕಾಂಗ್ರೆಸ್ ಉಚಿತ ವಿದ್ಯುತ್ ಘೋಷಣೆ ಮಾಡಿದ್ದಾರೆ. ಅಶೋಕ್ ಗೆಹ್ಲೋಟ್ ಅವರು ಅಡುಗೆ ಅನಿಲದ ಮೇಲೆ ಭಾರಿ ಸಬ್ಸಿಡಿಯನ್ನು ನೀಡುವುದಾಗಿ ಭರವಸೆ ನೀಡಿದ್ದ ನಂತರ ಇದು ಕಾಂಗ್ರೆಸ್ನ ದೊಡ್ಡ ಘೋಷಣೆಯಾಗಿದೆ.

ರಾಜಸ್ಥಾನವು ಪ್ರತಿ ವರ್ಷಕ್ಕೆ 12 ಸಿಲಿಂಡರ್ಗಳನ್ನು 500 ರೂಪಾಯಿಯಂತೆ ಒದಗಿಸುವ ಘೋಷಣೆ ಮಾಡಿದೆ.ಇದು ಸಿಲಿಂಡರ್ ಬೆಲೆಗಳನ್ನು ಅರ್ಧಕ್ಕಿಂತ ಕಡೊಮೆ ಮಾಡಲಿದೆ. ಕಳೆದ ವರ್ಷ ಸರ್ಕಾರವು ಸರ್ಕಾರಿ ಆಸ್ಪತ್ರೆಗಳಲ್ಲಿ 25 ಲಕ್ಷದವರೆಗೆ ಉಚಿತ ವೈದ್ಯಕೀಯ ಸೌಲಭ್ಯಗಳನ್ನು ನೀಡುವ ಮೆಗಾ ಆರೋಗ್ಯ ವಿಮಾ ಯೋಜನೆಯನ್ನು ಸಹ ಪ್ರಾರಂಭಿಸಿದೆ. ಸಾಮಾಜಿಕ ಭದ್ರತಾ ಯೋಜನೆಯಡಿ ಕನಿಷ್ಠ ಮಾಸಿಕ ಪಿಂಚಣಿಯನ್ನೂ 1,000 ರೂಪಾಯಿಗೆ ಹೆಚ್ಚಿಸಲಾಗಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷದ ಯೋಜನೆಗಳನ್ನು ತಾನು ಬಳಸಿಕೊಂಡಿದೆ. ದೆಹಲಿ ಮತ್ತು ಪಂಜಾಬ್ನಲ್ಲಿ ಎಎಪಿಗೆ ಭಾರಿ ಚುನಾವಣಾ ಲಾಭಾಂಶವನ್ನು ನೀಡಿದ ಉಚಿತ ನೀರು ಮತ್ತು ವಿದ್ಯುತ್ ಭರವಸೆ ಕರ್ನಾಟಕದಲ್ಲಿಯೂ ಕಾಂಗ್ರೆಸ್ಗೆ ಉತ್ತಮ ಫಲಿತಾಂಶ ನೀಡುವಲ್ಲಿ ಕೆಲಸ ಮಾಡಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ












Click it and Unblock the Notifications