Get Updates
Get notified of breaking news, exclusive insights, and must-see stories!

ಕೃಷ್ಣಮೃಗ ಬೇಟೆ ಪ್ರಕರಣ : ಸಲ್ಮಾನ್ ಗೆ ಮತ್ತೆ ಸಂಕಟ

ಜೈಪುರ, ಆಗಸ್ಟ್ 03: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ರಾಜಸ್ಥಾನ ಹೈಕೋರ್ಟ್ ನಿಂದ ಶುಭ ಸುದ್ದಿ ಸಿಕ್ಕ ಕೆಲ ದಿನಗಳಲ್ಲೇ ಮತ್ತೆ ಸಂಕಟ ಶುರುವಾಗಿದೆ. 1998ರ ಕೃಷ್ಣಮೃಗ ಬೇಟೆ ಪ್ರಕರಣದಿಂದ ಸಲ್ಮಾನ್ ಖಾನ್ ಖುಲಾಸೆಗೊಂಡಿದ್ದರು. ಆದರೆ, ಹೈಕೋರ್ಟ್ ತೀರ್ಪು ಪ್ರಶ್ನಿಸಿ ರಾಜಸ್ಥಾನ ಸರ್ಕಾರ ಈಗ ಸುಪ್ರೀಂಕೋರ್ಟ್ ಮೆಟ್ಟಿಲೇರಲು ಮುಂದಾಗಿದೆ.

ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ರಾಜಸ್ಥಾನದ ಕಾನೂನು ಸಚಿವ ರಾಜೇಂದ್ರ ರಾಥೋಡ್, ಪ್ರಕರಣದ ಬಗ್ಗೆ ಬಗ್ಗೆ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದರು. [ಕೃಷ್ಣಮೃಗ ಆತ್ಮಹತ್ಯೆ ಮಾಡ್ಕೊಂಡಿದ್ದು, ಅದ್ಕೆ ಸಲ್ಲೂ ಬಚಾವ್!]

Rajasthan govt to appeal against Salman Khan's acquittal in SC

ಹಮ್ ಸಾಥ್ ಸಾಥ್ ಹೇ ಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ರಾಜಸ್ಥಾನದ ಭವಾದ್ ನ ಲ್ಲಿ ಸೆಪ್ಟೆಂಬರ್ 26, 1998ರಲ್ಲಿ ನಡೆದ ಶೂಟಿಂಗ್ ಹಾಗೂ ಘೋಡಾ ಫಾರ್ಮ್ ನಲ್ಲಿ ಸೆಪ್ಟೆಂಬರ್ 28, 1998ರಲ್ಲಿ ನಡೆದ ಶೂಟಿಂಗ್ ನಲ್ಲಿ ಕೃಷ್ಣಮೃಗಗಳನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದರು.

ಈ ಪ್ರಕರಣದಲ್ಲಿ 1 ಹಾಗೂ 5 ವರ್ಷಗಳ ಶಿಕ್ಷೆ ವಿಧಿಸಲಾಗಿತ್ತು. ಕೆಳ ಹಂತದ ನ್ಯಾಯಾಲಯದಲ್ಲಿ ಸಲ್ಮಾನ್ ಖಾನ್ ಅವರನ್ನು ಅಪರಾಧಿ ಎಂದು ಪರಿಗಣಿಸಿ ನೀಡಿದ್ದ ಆದೇಶದ ವಿರುದ್ಧ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಹೈಕೋರ್ಟಿನಲ್ಲಿ ಸಲ್ಮಾನ್ ಪರ ಆದೇಶ ಜುಲೈ 25 ರಂದು ಬಂದಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+