ರಾಜಸ್ಥಾನ: ನ್ಯಾಯಾಧೀಶೆಗೆ ತಿರುಚಿದ ಆಕ್ಷೇಪಾರ್ಹ ಚಿತ್ರಗಳನ್ನು ಕಳುಹಿಸಿ 20 ಲಕ್ಷಕ್ಕೆ ಬೇಡಿಕೆಯಿಟ್ಟ ಆರೋಪಿ
ಈ ಸಂಬಂಧ ಫೆಬ್ರವರಿ 28ರಂದು ಪ್ರಕರಣ ದಾಖಲಾಗಿತ್ತು. ಈವರೆಗೆ ಯಾವ ಆರೋಪಿಯನ್ನು ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಜೈಪುರ, ಮಾರ್ಚ್ 09: ವ್ಯಕ್ತಿಯೊಬ್ಬ ಮಹಿಳಾ ನ್ಯಾಯಾಧೀಶರಿಗೆ ಅವರ ತಿರುಚಿದ ಛಾಯಾಚಿತ್ರಗಳನ್ನು ಕಳುಹಿಸಿ ಬ್ಲಾಕ್ಮೇಲ್ ಮಾಡಿದ್ದು, 20 ಲಕ್ಷ ರೂಪಾಯಿ ಕೊಡದಿದ್ದರೇ ಅವುಗಳನ್ನು ಸಾಮಾಜಿಕ ಜಾಲತಾಣಗಳಳಲ್ಲಿ ಹಾಕಿ ಸಾರ್ವಜನಿಕಗೊಳಿಸುವುದಾಗಿ ಬೆದರಿಕೆ ಹಾಕಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ನ್ಯಾಯಾಧೀಶೆಯನ್ನು ಬ್ಲಾಕ್ಮೇಲ್ ಮಾಡಿದ ವ್ಯಕ್ತಿಯನ್ನು ಗುರುತಿಸಲಾಗಿದ್ದು, ಆತನನ್ನು ಹಿಡಿಯಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನ್ಯಾಯಾಧೀಶರ ಛಾಯಾಚಿತ್ರಗಳನ್ನು ಆಕೆಯ ಸಾಮಾಜಿಕ ಮಾಧ್ಯಮ ಖಾತೆಯಿಂದ ಡೌನ್ಲೋಡ್ ಮಾಡಿ, ಎಡಿಟ್ ಮಾಡಿ ನ್ಯಾಯಾಲಯದಲ್ಲಿರುವ ಅವರ ಕಚೇರಿಗೆ ಮತ್ತು ಅವರ ಮನೆಗೆ ಕಳುಹಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಫೆಬ್ರವರಿ 28ರಂದು ಪ್ರಕರಣ ದಾಖಲಾಗಿತ್ತು. ಈವರೆಗೆ ಯಾವ ಆರೋಪಿಯನ್ನು ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಎಫ್ಐಆರ್ನಲ್ಲಿ, ಫೆಬ್ರವರಿ 7 ರಂದು, ನ್ಯಾಯಾಧೀಶರ ಕೊಠಡಿಗೆ ಬಂದಿದ್ದ ವ್ಯಕ್ತಿ ಸ್ಟೆನೋಗ್ರಾಫರ್ ಕೈಯಲ್ಲಿ ಪಾರ್ಸೆಲ್ ನೀಡಿದ್ದಾರೆ. ಸ್ಟೆನೋಗ್ರಾಫರ್ ಅವರ ಹೆಸರು ಕೇಳಿದಾಗ ಅವರು ಹೇಳದೇ ಹೊರಟುಹೋಗಿದ್ದಾರೆ.
ಪಾರ್ಸೆಲ್ನಲ್ಲಿ ಕೆಲವು ಸಿಹಿತಿಂಡಿಗಳು, ನ್ಯಾಯಾಧೀಶರ ತಿರುಚಿದ ಅಶ್ಲೀಲ ಛಾಯಾಚಿತ್ರಗಳು ಮತ್ತು ಪತ್ರವಿತ್ತು. ಆಕೆ 20 ಲಕ್ಷ ರೂಪಾಯಿ ನೀಡದಿದ್ದರೆ ಫೋಟೋಗಳನ್ನು ಸಾರ್ವಜನಿಕಗೊಳಿಸುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ ಎಂದು ಎಫ್ಐಆರ್ ತಿಳಿಸಿದೆ. "20 ಲಕ್ಷ ರೂ.ಗಳೊಂದಿಗೆ ಸಿದ್ಧರಾಗಿರಿ, ಇಲ್ಲದಿದ್ದರೆ ನಿಮ್ಮನ್ನು ಮತ್ತು ನಿಮ್ಮ ಕುಟುಂಬವನ್ನು ಹಾಳುಮಾಡಬೇಕಾಗುತ್ತದೆ. ಸಮಯ ಮತ್ತು ಸ್ಥಳವನ್ನು ಶೀಘ್ರದಲ್ಲೇ ತಿಳಿಸಲಾಗುವುದು" ಎಂದು ಪತ್ರದಲ್ಲಿ ಬರೆಯಲಾಗಿದೆ.
ಇದೇ ರೀತಿಯ ವಸ್ತುಗಳನ್ನು ಹೊಂದಿರುವ ಮತ್ತೊಂದು ಪಾರ್ಸೆಲ್ 20 ದಿನಗಳ ನಂತರ ನ್ಯಾಯಾಧೀಶರ ನಿವಾಸಕ್ಕೆ ಕಳುಹಿಸಲಾಗಿದೆ. ಹೀಗಾಗಿ ಅವರು ಎಫ್ಐಆರ್ ದಾಖಲಿಸಿದ್ದಾರೆ. ನ್ಯಾಯಾಲಯದಲ್ಲಿ ತೆಗೆದ ಸಿಸಿಟಿವಿ ಕ್ಯಾಮೆರಾ ದೃಶ್ಯಗಳಲ್ಲಿ 20 ರ ಹರೆಯದ ವ್ಯಕ್ತಿಯೊಬ್ಬರು ಪಾರ್ಸೆಲ್ ಅನ್ನು ನ್ಯಾಯಾಧೀಶರ ಕೋಣೆಗೆ ತಲುಪಿಸುತ್ತಿರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications