ರಾಜಸ್ಥಾನ ಚುನಾವಣೆ: ಮೋದಿ, ಶಾ, ಯೋಗಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು!
ನವದೆಹಲಿ, ನವೆಂಬರ್ 03: ರಾಜಸ್ಥಾನದಲ್ಲಿ ಇದೇ ಡಿಸೆಂಬರ್ ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಈಗಾಗಲೇ ಪ್ರಚಾರ ಕಾರ್ಯ ಆರಂಭವಾಗಿದೆ.
ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡು, ನಾಮಪತ್ರ ಸಲ್ಲಿಕೆಯಾದ ನಂತರ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮುಂತಾದ ಗಣ್ಯರು ಪ್ರಚಾರಕ್ಕೆ ಆಗಮಿಸಲಿದ್ದಾರೆ.
ಬಿಜೆಪಿಯ ತಾರಾಪ್ರಚಾರಕರ ಪಟ್ಟಿಯಲ್ಲಿ ಮೋದಿ, ಶಾ ಮತ್ತು ಯೋಗಿಯವರ ಹೆಸರು ಅಗ್ರ ಸಾಲಿನಲ್ಲಿದ್ದು, ರಾಜ್ಯದಲ್ಲಿ ಈ ನಾಯಕರು ಪ್ರಚಾರಕ್ಕೆ ಆಗಮಿಸಬೇಕೆಂಬ ಒತ್ತಾಯ ಸಾಕಷ್ಟು ಜನರಿಂದ ಬಂದಿದೆ. ಬಿಜೆಪಿ ಕಾರ್ಯಕರ್ತರು, ಮುಖಂಡರು ಸಹ ಈ ನಾಯಕರನ್ನು ಪ್ರಚಾರಕ್ಕೆ ಆಹ್ವಾನಿಸಲು ಉತ್ಸುಕರಾಗಿದ್ದಾರೆ.
ನವೆಂಬರ್ ಮತ್ತು ಡಿಸೆಂಬರ್ ಈ ಎರಡು ತಿಂಗಳಿನಲ್ಲಿ ಐದು ರಾಜ್ಯಗಳಲ್ಲಿ ಚುನಾವಣೆ ನಡೆಯಲಿರುವುದರಿಂದ ಈ ಎಲ್ಲಾ ನಾಯಕರೂ ಸಾಕಷ್ಟು ಒತ್ತಡ ಎದುರಿಸುತ್ತಿದ್ದು, ದಿನೇ ದಿನೇ ಬೇರೆ ಬೇರೆ ರಾಜ್ಯಗಳಲ್ಲಿ rally ಗಳು ನಡೆಯಲಿದೆ.

ಮೋದಿಯವರ ಹೆಕ್ಟಿಕ್ ಶೆಡ್ಯೂಲ್!
ಪ್ರಧಾನಿ ನರೇಂದ್ರ ಮೋದಿಯವರ ಶೆಡ್ಯೂಲ್ ಹೆಕ್ಟಿಕ್ ಆಗಿದ್ದು, ಎಲ್ಲಾ rally ಗಳಲ್ಲೂ ಭಾಗವಹಿಸುವುದು ಕಷ್ಟವಾಗಬಹುದು ಎನ್ನಲಾಗಿದೆ. ಇನ್ನೂ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿಲ್ಲ. ಪಟ್ಟಿ ಬಿಡುಗಡೆಯಾದ ಮೇಲೆ ಚುನಾವಣೆಗೆ 15 ದಿನ ಬಾಕಿ ಇರುವಾಗ ಮೋದಿಯವರು ನಿರಂತರವಾಗಿ ಈ ರಾಜ್ಯದ 22 ಜಿಲ್ಲೆಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ನವೆಂಬರ್ 23 ರಿಂದ ಡಿಸೆಂಬರ್ 5 ರವರೆಗೆ ಮೋದಿ rally ಗಳು ನಡೆಯಲಿವೆ.

ಯೋಗಿ rally ಗೆ ಡಿಮ್ಯಾಂಡು!
ಉತ್ತರ ಪ್ರದೇಶದ ಆತುಕೊಂಡಿರುವ ರಾಜಸ್ಥಾನದ ಕೆಲವು ಭಾಗಗಳಲ್ಲಿ ಯೋಗಿ ಆದಿತ್ಯನಾಥ್ ಅವರಿಗೆ ಸಾಕಷ್ಟು ಬೇಡಿಕೆ ಇದೆ. ಆದ್ದರಿಂದ ಈ ಭಾಗದಲ್ಲಿ ಯೋಗಿ ಅವರನ್ನು ಹೆಚ್ಚಾಗಿ ಪ್ರಚಾರಕ್ಕೆ ಬಳಸಿಕೊಳ್ಳಲು ಬಿಜೆಪಿ ನಿರ್ಧರಿಸಿದೆ. ರಾಜಸ್ಥಾನದಾದ್ಯಂತ ಯೋಗಿ ಪ್ರಚಾರಕ್ಕೆ ಬೇಡಿಕೆ ಇದೆ, ಯೋಗಿ ಅಭಿಮಾನಿಗಳಿದ್ದಾರೆ. ಆದರೆ ಎಲ್ಲೆಡೆಯೂ rally ಮಾಡುವುದು ಸಮಯದ ಭಾವದಿಂದ ಸಾಧ್ಯವಿಲ್ಲದ ಕಾರಣ ಮಹತ್ವದ ಕ್ಷೇತ್ರಗಳಲ್ಲಿ ಯೋಗಿ ಪ್ರಚಾರ ನಡೆಸಲಿದ್ದಾರೆ.

ಅಮಿತ್ ಶಾ ಪ್ರಚಾರ
ರಾಜಸ್ಥಾನದ ಹಾಲಿ ಮುಖ್ಯಮಂತ್ರಿ ವಸುಂಧರಾ ರಾಜೆ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ rally ಗೂ ಸಾಕಷ್ಟು ಬೇಡಿಕೆ ಇದ್ದು, ಹೆಚ್ಚಿನ ಜನ ಭಾಗವಹಿಸುವ ನಿರೀಕ್ಷೆ ಇದೆ. ಎಲ್ಲಾ ನಾಯಕರೂ ಒಂದೇ ಜಾಗಗಳ ಬದಲು ಬೇರೆ ಬೇರೆ ಕ್ಷೇತ್ರಗಳಲ್ಲಿ ಪ್ರಚಾರ ನಡೆಸುವ ಯೋಜನೆಯನ್ನು ರೂಪಿಸಿಕೊಳ್ಳಲಾಗಿದೆ. ಮೋದಿ, ಶಾ ಮತ್ತು ಯೋಗಿ ಪ್ರಚಾರದ ನಂತರ ರಾಜಸ್ಥಾನದಲ್ಲಿರುವ ಬಿಜೆಪಿ ವಿರುದ್ಧದ ಆಡಳಿತ ವಿರೋಧಿ ಅಲೆ ಕೊಂಚ ಬದಲಾದೀತು ಎಂಬ ನಿರೀಕ್ಷೆ ಇದೆ.

ರಾಜಸ್ಥಾನದಲ್ಲಿ ಚುನಾವಣೆ ಎಂದು?
ರಾಜಸ್ಥಾನದಲ್ಲಿ ಡಿಸೆಂಬರ್ 7 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 11 ರಂದು ಫಲಿತಾಂಶ ಹೊರಬೀಳಲಿದೆ. 200 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ರಾಜಸ್ಥಾನದಲ್ಲಿ ಪಕ್ಷವೊಂದು ಬಹುಮತ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್ 101.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications