ರಾಜಸ್ಥಾನ ಚುನಾವಣೆ: ಮೋದಿ, ಶಾ, ಯೋಗಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು!
ನವದೆಹಲಿ, ನವೆಂಬರ್ 03: ರಾಜಸ್ಥಾನದಲ್ಲಿ ಇದೇ ಡಿಸೆಂಬರ್ ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಈಗಾಗಲೇ ಪ್ರಚಾರ ಕಾರ್ಯ ಆರಂಭವಾಗಿದೆ.
ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡು, ನಾಮಪತ್ರ ಸಲ್ಲಿಕೆಯಾದ ನಂತರ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮುಂತಾದ ಗಣ್ಯರು ಪ್ರಚಾರಕ್ಕೆ ಆಗಮಿಸಲಿದ್ದಾರೆ.
ಬಿಜೆಪಿಯ ತಾರಾಪ್ರಚಾರಕರ ಪಟ್ಟಿಯಲ್ಲಿ ಮೋದಿ, ಶಾ ಮತ್ತು ಯೋಗಿಯವರ ಹೆಸರು ಅಗ್ರ ಸಾಲಿನಲ್ಲಿದ್ದು, ರಾಜ್ಯದಲ್ಲಿ ಈ ನಾಯಕರು ಪ್ರಚಾರಕ್ಕೆ ಆಗಮಿಸಬೇಕೆಂಬ ಒತ್ತಾಯ ಸಾಕಷ್ಟು ಜನರಿಂದ ಬಂದಿದೆ. ಬಿಜೆಪಿ ಕಾರ್ಯಕರ್ತರು, ಮುಖಂಡರು ಸಹ ಈ ನಾಯಕರನ್ನು ಪ್ರಚಾರಕ್ಕೆ ಆಹ್ವಾನಿಸಲು ಉತ್ಸುಕರಾಗಿದ್ದಾರೆ.
ನವೆಂಬರ್ ಮತ್ತು ಡಿಸೆಂಬರ್ ಈ ಎರಡು ತಿಂಗಳಿನಲ್ಲಿ ಐದು ರಾಜ್ಯಗಳಲ್ಲಿ ಚುನಾವಣೆ ನಡೆಯಲಿರುವುದರಿಂದ ಈ ಎಲ್ಲಾ ನಾಯಕರೂ ಸಾಕಷ್ಟು ಒತ್ತಡ ಎದುರಿಸುತ್ತಿದ್ದು, ದಿನೇ ದಿನೇ ಬೇರೆ ಬೇರೆ ರಾಜ್ಯಗಳಲ್ಲಿ rally ಗಳು ನಡೆಯಲಿದೆ.

ಮೋದಿಯವರ ಹೆಕ್ಟಿಕ್ ಶೆಡ್ಯೂಲ್!
ಪ್ರಧಾನಿ ನರೇಂದ್ರ ಮೋದಿಯವರ ಶೆಡ್ಯೂಲ್ ಹೆಕ್ಟಿಕ್ ಆಗಿದ್ದು, ಎಲ್ಲಾ rally ಗಳಲ್ಲೂ ಭಾಗವಹಿಸುವುದು ಕಷ್ಟವಾಗಬಹುದು ಎನ್ನಲಾಗಿದೆ. ಇನ್ನೂ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿಲ್ಲ. ಪಟ್ಟಿ ಬಿಡುಗಡೆಯಾದ ಮೇಲೆ ಚುನಾವಣೆಗೆ 15 ದಿನ ಬಾಕಿ ಇರುವಾಗ ಮೋದಿಯವರು ನಿರಂತರವಾಗಿ ಈ ರಾಜ್ಯದ 22 ಜಿಲ್ಲೆಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ನವೆಂಬರ್ 23 ರಿಂದ ಡಿಸೆಂಬರ್ 5 ರವರೆಗೆ ಮೋದಿ rally ಗಳು ನಡೆಯಲಿವೆ.

ಯೋಗಿ rally ಗೆ ಡಿಮ್ಯಾಂಡು!
ಉತ್ತರ ಪ್ರದೇಶದ ಆತುಕೊಂಡಿರುವ ರಾಜಸ್ಥಾನದ ಕೆಲವು ಭಾಗಗಳಲ್ಲಿ ಯೋಗಿ ಆದಿತ್ಯನಾಥ್ ಅವರಿಗೆ ಸಾಕಷ್ಟು ಬೇಡಿಕೆ ಇದೆ. ಆದ್ದರಿಂದ ಈ ಭಾಗದಲ್ಲಿ ಯೋಗಿ ಅವರನ್ನು ಹೆಚ್ಚಾಗಿ ಪ್ರಚಾರಕ್ಕೆ ಬಳಸಿಕೊಳ್ಳಲು ಬಿಜೆಪಿ ನಿರ್ಧರಿಸಿದೆ. ರಾಜಸ್ಥಾನದಾದ್ಯಂತ ಯೋಗಿ ಪ್ರಚಾರಕ್ಕೆ ಬೇಡಿಕೆ ಇದೆ, ಯೋಗಿ ಅಭಿಮಾನಿಗಳಿದ್ದಾರೆ. ಆದರೆ ಎಲ್ಲೆಡೆಯೂ rally ಮಾಡುವುದು ಸಮಯದ ಭಾವದಿಂದ ಸಾಧ್ಯವಿಲ್ಲದ ಕಾರಣ ಮಹತ್ವದ ಕ್ಷೇತ್ರಗಳಲ್ಲಿ ಯೋಗಿ ಪ್ರಚಾರ ನಡೆಸಲಿದ್ದಾರೆ.

ಅಮಿತ್ ಶಾ ಪ್ರಚಾರ
ರಾಜಸ್ಥಾನದ ಹಾಲಿ ಮುಖ್ಯಮಂತ್ರಿ ವಸುಂಧರಾ ರಾಜೆ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ rally ಗೂ ಸಾಕಷ್ಟು ಬೇಡಿಕೆ ಇದ್ದು, ಹೆಚ್ಚಿನ ಜನ ಭಾಗವಹಿಸುವ ನಿರೀಕ್ಷೆ ಇದೆ. ಎಲ್ಲಾ ನಾಯಕರೂ ಒಂದೇ ಜಾಗಗಳ ಬದಲು ಬೇರೆ ಬೇರೆ ಕ್ಷೇತ್ರಗಳಲ್ಲಿ ಪ್ರಚಾರ ನಡೆಸುವ ಯೋಜನೆಯನ್ನು ರೂಪಿಸಿಕೊಳ್ಳಲಾಗಿದೆ. ಮೋದಿ, ಶಾ ಮತ್ತು ಯೋಗಿ ಪ್ರಚಾರದ ನಂತರ ರಾಜಸ್ಥಾನದಲ್ಲಿರುವ ಬಿಜೆಪಿ ವಿರುದ್ಧದ ಆಡಳಿತ ವಿರೋಧಿ ಅಲೆ ಕೊಂಚ ಬದಲಾದೀತು ಎಂಬ ನಿರೀಕ್ಷೆ ಇದೆ.

ರಾಜಸ್ಥಾನದಲ್ಲಿ ಚುನಾವಣೆ ಎಂದು?
ರಾಜಸ್ಥಾನದಲ್ಲಿ ಡಿಸೆಂಬರ್ 7 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 11 ರಂದು ಫಲಿತಾಂಶ ಹೊರಬೀಳಲಿದೆ. 200 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ರಾಜಸ್ಥಾನದಲ್ಲಿ ಪಕ್ಷವೊಂದು ಬಹುಮತ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್ 101.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications