Rajasthan Assembly Election: ಕಾಂಗ್ರೆಸ್ ಮಹಿಳಾ ವಿರೋಧಿ ಮನಸ್ಥಿತಿ ಹೊಂದಿದೆ ಎಂದ ಪ್ರಧಾನಿ ಮೋದಿ
ಕಾಂಗ್ರೆಸ್ಗೆ ಭ್ರಷ್ಟಾಚಾರ ಮತ್ತು ವಂಶಾಡಳಿತಕ್ಕಿಂತ ಮುಖ್ಯವಾದುದು ಏನೂ ಇಲ್ಲ, ರಾಜಸ್ಥಾನಕ್ಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವ ಸರ್ಕಾರದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದರು.
ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸಮಾಧಾನಪಡಿಸುವುದನ್ನು ಬಿಟ್ಟು ಬೇರೆ ಯಾವುದನ್ನೂ ಯೋಚಿಸುವುದಿಲ್ಲ. ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಮಹಿಳಾ ವಿರೋಧಿ ಮನಸ್ಥಿತಿಯನ್ನು ಹೊಂದಿವೆ ಎಂದು ಆರೋಪಿಸಿದರು.

ಮಹಿಳೆಯರಿಗೆ ಮೀಸಲಾತಿ ನೀಡುವ 'ನಾರಿಶಕ್ತಿ ವಂದನ್ ಕಾಯ್ದೆ' ಜಾರಿಯಾದಾಗಿನಿಂದ ಅವರು ಮಹಿಳೆಯರ ವಿರುದ್ಧ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ದುರಹಂಕಾರಿ ಮೈತ್ರಿಕೂಟದ ನಾಯಕರು ನಮ್ಮ ತಾಯಿ ಮತ್ತು ಸಹೋದರಿಯರ ಬಗ್ಗೆ ತುಂಬಾ ಆಕ್ಷೇಪಾರ್ಹ ಕಾಮೆಂಟ್ಗಳನ್ನು ಮಾಡಿದ್ದಾರೆ, ಎಂದು ಮೋದಿ ಆರೋಪಿಸಿದರು.
ಕಾಂಗ್ರೆಸ್ ವಿರುದ್ಧ ವಾಗ್ದಾಳಿ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿಧಾನಸಭೆಯಲ್ಲಿ ಮಹಿಳೆಯರ ವಿರುದ್ಧ ಅತ್ಯಂತ ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ ಆದರೆ ಈ ಬಗ್ಗೆ ಯಾವುದೇ ಕಾಂಗ್ರೆಸ್ ನಾಯಕರು ಏನನ್ನೂ ಹೇಳಲಿಲ್ಲ. ಇದು ಕಾಂಗ್ರೆಸ್ನ ನಿಜವಾದ ಮುಖವಾಗಿದ್ದು, ಇದನ್ನು ರಾಜಸ್ಥಾನದ ಜನರು ಗುರುತಿಸಿದ್ದಾರೆ ಎಂದು ಅವರು ಹೇಳಿದರು.
ದಲಿತರ ಮೇಲಿನ ದೌರ್ಜನ್ಯದ ಘಟನೆಗಳ ಬಗ್ಗೆ ಕಾಂಗ್ರೆಸ್ ಕಣ್ಣು ಮುಚ್ಚಿ ಕುಳಿತಿದೆ, ದಲಿತರ ಮೇಲೆ ದೌರ್ಜನ್ಯ ನಡೆಸುತ್ತಿರುವವರನ್ನು ಕಂಡರೆ ಕಾಂಗ್ರೆಸ್ ಕಣ್ಣು ಮುಚ್ಚಿಕೊಂಡಿದೆ ಎಂದು ನರೇಂದ್ರ ಮೋದಿ ಆರೋಪಿಸಿದರು.
ಇಲ್ಲಿನ ಕಾಂಗ್ರೆಸ್ ಸರ್ಕಾರ ಸಮಾಧಾನ ಮಾಡುವುದನ್ನು ಬಿಟ್ಟು ಬೇರೇನನ್ನೂ ಯೋಚಿಸುವುದಿಲ್ಲ ಎಂದು ಅವರು ಹೇಳಿದರು. ಕಾಂಗ್ರೆಸ್ ನೀಡಿರುವ ಗ್ಯಾರಂಟಿಗಳ ಬಗ್ಗೆ ನರೇಂದ್ರ ಮೋದಿ ಪರೋಕ್ಷವಾಗಿ ಟೀಕೆ ಮಾಡಿದ್ದಾರೆ.
ಇಂದು ಇಡೀ ದೇಶವು ಅಭಿವೃದ್ಧಿಯ ಗುರಿಗಾಗಿ ಹಗಲಿರುಳು ಶ್ರಮಿಸುತ್ತಿದೆ ಮತ್ತು 21 ನೇ ಶತಮಾನದಲ್ಲಿ ಭಾರತ ತಲುಪುವ ಎತ್ತರದಲ್ಲಿ ರಾಜಸ್ಥಾನವು ದೊಡ್ಡ ಪಾತ್ರವನ್ನು ವಹಿಸುತ್ತದೆ ಎಂದು ಪ್ರಧಾನಿ ಹೇಳಿದರು. ರಾಜಸ್ಥಾನದಲ್ಲಿ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವ ಸರ್ಕಾರದ ಅವಶ್ಯಕತೆ ಇದೆ ಎಂದರು.
ನವೆಂಬರ್ 25ರಂದು ಚುನಾವಣೆ
ನವೆಂಬರ್ 25ರಂದು ರಾಜಸ್ಥಾನ ವಿಧಾನಸಭೆ ಚುನಾವಣೆ ಮತದಾನ ನಡೆಯಲಿದ್ದು, ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ. ಸದ್ಯ ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದು, ಬಿಜೆಪಿ ಇಲ್ಲಿ ಗೆಲ್ಲುವ ವಿಶ್ವಾಸದಲ್ಲಿದೆ.
ಕಾಂಗ್ರೆಸ್ ಕೂಡ ಅಧಿಕಾರ ಉಳಿಸಿಕೊಳ್ಳಲು ಪ್ರಯತ್ನ ಮಾಡುತ್ತಿದ್ದು, ಜನರಿಗೆ ಹಲವು ಗ್ಯಾರಂಟಿಗಳನ್ನು ನೀಡಿದೆ. ಪ್ರಿಯಾಂಕ ಗಾಂಧಿ ಮತ್ತು ರಾಹುಲ್ ಗಾಂಧಿ ಕೂಡ ಸೋಮವಾರ ರಾಜ್ಯದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದರು.












Click it and Unblock the Notifications