ಕಾಂಗ್ರೆಸ್ಗೆ ಹತ್ತಿರವಾಗುತ್ತಿರುವ ಬಿಜೆಪಿ ನಾಯಕಿ ವಸುಂದರಾ ರಾಜೇ- ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಜೊತೆಗಿನ ಫೋಟೋ ವೈರಲ್
ಜೈಪುರ, ಸೆಪ್ಟೆಂಬರ್ 23: ಕಳೆದ ರಾತ್ರಿ ಜೈಪುರದಲ್ಲಿ ಬಿಜೆಪಿ ನಾಯಕಿ, ಮಾಜಿ ಸಿಎಂ ವಸುಂಧರಾ ರಾಜೇ ಅವರು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ್ದಾರೆ. ರಾಜಸ್ಥಾನದ ಕಾನ್ಸ್ಟಿಟ್ಯೂಷನ್ ಕ್ಲಬ್ ಉದ್ಘಾಟನೆ ಬಳಿಕ ವಸುಂದರಾ ರಾಜೇ ಅವರು ಅಶೋಕ್ ಗೆಹ್ಲೋಟ್ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇದು ರಾಜಸ್ಥಾನ ರಾಜಕಾರಣದಲ್ಲಿ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟುಹಾಕಿದೆ.
ಇಬ್ಬರು ನಾಯಕರು ಒಟ್ಟಿಗೆ ಇರುವ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದರ ರಾಜಕೀಯ ಪರಿಣಾಮಗಳು ಏನಾಗಬಹುದು ಎಂಬ ಚರ್ಚೆಗಳು ಹುಟ್ಟಿಕೊಂಡಿವೆ.

ವಸುಂದರಾ ರಾಜೇ ಹಾಗೂ ಅಶೋಕ್ ಗೆಹ್ಲೋಟ್ ಅವರ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಜೇಂದ್ರ ರಾಥೋಡ್ ಅವರು ಸಹ ಹಾಜರಿದ್ದರು.
200 ಸ್ಥಾನಗಳ ರಾಜಸ್ಥಾನ ವಿಧಾನಸಭೆಗೆ ಈ ವರ್ಷದ ಕೊನೆಯಲ್ಲಿ ಚುನಾವಣೆ ನಡೆಯಲಿದ್ದು, ಬಿಜೆಪಿಯು ಕಾಂಗ್ರೆಸ್ನಿಂದ ಮತ್ತೆ ಅಧಿಕಾರವನ್ನು ಕಸಿದುಕೊಳ್ಳುವ ನಿರೀಕ್ಷೆಯಲ್ಲಿದೆ.
ರಾಜಸ್ಥಾನದ ಕಾಂಗ್ರೆಸ್ನಂತಯೇ ಬಿಜೆಪಿಯು ಆಂತರಿಕ ಸಂಘರ್ಷಗಳನ್ನು ಎದುರಿಸುತ್ತಿದೆ.
ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಎದುರಿಸಲು ಬಿಜೆಪಿ ಇನ್ನೂ ಸಜ್ಜಾಗಿಲ್ಲವೆಂಬ ಮಾತುಗಳು ಕೇಳಿಬಂದಿವೆ. ಬಿಜೆಪಿ ನಾಯಕರಾದ ವಸುಂದರಾ ರಾಜೇ ಹಾಗೂ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ನಡುವೆ ಭಿನ್ನಾಭಿಪ್ರಾಯಗಳು ತಲೆದೋರಿವೆ. ಈ ಇಬ್ಬರು ನಾಯಕರು ರಾಜಸ್ಥಾನ ಸಿಎಂ ರೇಸ್ನಲ್ಲಿ ಇರುವುದು ಬಿಜೆಪಿ ಹೈಕಮಾಂಡ್ಗೆ ತಲೆನೋವಾಗಿ ಪರಿಣಮಿಸಿದೆ.
ಇದೆಲ್ಲದರ ನಡುವೆ, ರಾಜಸ್ಥಾನದ ಹಡೋತಿ ಪ್ರದೇಶದಲ್ಲಿ ಪರಿವರ್ತನ್ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ವಸುಂದರಾ ರಾಜೇ ಗೈರಾಗಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ತಮ್ಮದೇ ಕ್ಷೇತ್ರದಲ್ಲಿ ಈ ಯಾತ್ರೆ ಹಾದುಹೋದರೂ ವಸುಂದರಾ ರಾಜೇ ಹಾಜರಾಗದೇ ಹೋಗಿದ್ದು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ. ವಸುಂದರಾ ರಾಜೇ ಅವರ ಅನುಪಸ್ಥಿತಿಯ ಬಗ್ಗೆ ಹಲವು ಚರ್ಚೆಗಳು ಹುಟ್ಟಿಕೊಂಡಿವೆ.
ಕೋಟಾವನ್ನು ಬಿಜೆಪಿಯ ಭದ್ರಕೋಟೆ ಎಂದು ಪರಿಗಣಿಸಲಾಗಿದೆ. ಇದೇ ಪ್ರದೇಶದಲ್ಲಿ ನಡೆದ ಬಿಜೆಪಿಯ ಪರಿವರ್ತನ ಯಾತ್ರೆಗೆ ನೀರಸವಾದ ಪ್ರತಿಕ್ರಿಯೆ ದೊರೆತಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಇತ್ತ ಕಾಂಗ್ರೆಸ್ನಲ್ಲಿ ಸಿಎಂ ಅಶೋಕ್ ಗೆಹ್ಲೋಟ್ ಹಾಗೂ ಸಚಿನ್ ಪೈಲಟ್ ನಡುವೆ ಭಿನ್ನಾಭಿಪ್ರಾಯಗಳಿವೆ. ಆದರೆ, ಕಾಂಗ್ರೆಸ್ ಹೈಕಮಾಂಡ್ ಈ ಇಬ್ಬರು ನಾಯಕರು ಕರೆಸಿ ಮಾತನಾಡಿದೆ. ಇಬ್ಬರ ನಡುವಿನ ಭಿನ್ನಾಭಿಪ್ರಾಯಗಳನ್ನು ಶಮನ ಮಾಡಲು ಪ್ರಯತ್ನಿಸಿದೆ.
ರಾಜಸ್ಥಾನದಲ್ಲಿ ಮತ್ತೆ ಕಾಂಗ್ರೆಸ್ ಬರಬಹುದು ಎಂದು ಕೆಲ ಸಮೀಕ್ಷೆಗಳು ಬಹಿರಂಗಪಡಿಸಿವೆ.
-
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral












Click it and Unblock the Notifications