ಗೋರಕ್ಷಕರು ಎನ್ನುವ 'ರಾಕ್ಷಸರು' ಲಾರಿಯಲಿದ್ದ ಗೋವುಗಳಿಗೇ ಬೆಂಕಿಯಿಟ್ಟರು
ರಾಜಸ್ಥಾನದಿಂದ ತಮಿಳುನಾಡಿಗೆ ಲಾರಿಗಳಲ್ಲಿ ಸಾಗಿಸಲಾಗುತ್ತಿದ್ದ ಗೋವುಗಳನ್ನು ಗೋರಕ್ಷಕರು ಸಜೀವವಾಗಿ ಸುಟ್ಟು ಹಾಕಿದ ಘಟನೆ, ಜೈಪುರ ಹೊರವಲದ ಬರ್ಮರ್ ಎನ್ನುವಲ್ಲಿ ಭಾನುವಾರ (ಜೂ 11) ತಡರಾತ್ರಿ ನಡೆದಿದೆ.
ಜೈಪುರ, ಜೂ 13: ಪರವಾನಿಗೆ ಪಡೆದು ರಾಜಸ್ಥಾನದಿಂದ ತಮಿಳುನಾಡಿಗೆ ಲಾರಿಗಳಲ್ಲಿ ಸಾಗಿಸಲಾಗುತ್ತಿದ್ದ ಗೋವುಗಳನ್ನು ಗೋರಕ್ಷಕರು ಸಜೀವವಾಗಿ ಸುಟ್ಟು ಹಾಕಿದ ಘಟನೆ, ನಗರದ ಹೊರವಲದ ಬರ್ಮರ್ ಎನ್ನುವಲ್ಲಿ ಭಾನುವಾರ (ಜೂ 11) ತಡರಾತ್ರಿ ನಡೆದಿದೆ.
ಕಂಠಪೂರ್ತಿ ಮದ್ಯಪಾನ ಮಾಡಿದ್ದ ಸುಮಾರು ಐವತ್ತು ಗೋರಕ್ಷಕರು ಎನ್ನುವ ದುರುಳರು ಈ ಕೃತ್ಯ ನಡೆಸಿದ್ದಾರೆ. ಗೋವುಗಳ ಜೊತೆಗಿದ್ದ ಅಧಿಕಾರಿಗಳು ವಿವರಣೆ ನೀಡಿದರೂ, ಗೋರಕ್ಷಕರು ಇಂತಹ ಪೈಶಾಚಿಕ ಕೃತ್ಯ ನಡೆಸಿದ್ದಾರೆ.

ಕೇಂದ್ರ ಕೃಷಿ ಸಚಿವಾಲಯ ಆಯೋಜಿಸಿದ್ದ ಕಾರ್ಯಕ್ರಮಕ್ಕಾಗಿ, ರಾಜಸ್ಥಾನದ ಜೈಸಲ್ಮೇರ್ ನಿಂದ ತಮಿಳುನಾಡಿನ ಪಶುಸಂಗೋಪನಾ ಇಲಾಖಾ ಅಧಿಕಾರಿಗಳು ಪರವಾನಿಗೆ ಪಡೆದು ಟ್ರಕ್ ನಲ್ಲಿ ಗೋವುಗಳನ್ನು ಸಾಗಿಸುತ್ತಿದ್ದರು.
'ದೇಶೀ ಗೋ ತಳಿ ರಕ್ಷಣೆ' ಕುರಿತ ಕಾರ್ಯಕ್ರಮಕ್ಕಾಗಿ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು 80 ಗೋವುಗಳನ್ನು ಖರೀದಿಸಿ, ಐದು ಟ್ರಕ್ ಗಳಲ್ಲಿ ಗೋವುಗಳನ್ನು ತಮಿಳುನಾಡಿಗೆ ಸಾಗಿಸುತ್ತಿದ್ದರು.
ಗೋಕಳ್ಳ ಸಾಗಾಣಿಕೆ ಮಾಡುತ್ತಿದ್ದೀರಾ ಎಂದು ಏಕಾಏಕಿ ದಾಳಿ ಮಾಡಿದ ದುರುಳರು, ಅಧಿಕಾರಿಗಳ ವಿವರಣೆ ನೀಡುತ್ತಿದ್ದರೂ, ಐದು ಟ್ರಕ್ ಗಳ ಪೈಕಿ ಒಂದಕ್ಕೆ ಗೆ ಬೆಂಕಿ ಹಚ್ಚಿದ್ದಾರೆ. ಪರಿಣಾಮ, ಹತ್ತು ಗೋವುಗಳು ಮತ್ತು ಮೂರು ಕರುಗಳು ಸಜೀವ ದಹನಗೊಂಡಿದೆ ಎಂದು ಎನ್ಡಿಟಿವಿ ವರದಿ ಮಾಡಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications