Get Updates
Get notified of breaking news, exclusive insights, and must-see stories!

ಬೆಂಗಳೂರಿನ ಮರಾಠಿಗ ರಜನಿಗೆ ರಾಜಕೀಯದಲ್ಲಿ ಸೋಲು ಗ್ಯಾರಂಟಿ: ಸ್ವಾಮಿ

ರಜನಿಕಾಂತ್ ತಮಿಳು ಮೂಲದವನಲ್ಲ, ಬೆಂಗಳೂರು ಮೂಲದ ಮರಾಠಿಗ, ರಾಜಕೀಯವಾಗಿ ಯಾವುದೇ ಸಿದ್ಧಾಂತವನ್ನು ಪಾಲಿಸದ ಗೊಂದಲದ ಗೂಡಾಗಿರುವ ರಜನಿಗೆ ರಾಜಕೀಯದಲ್ಲಿ ಸೋಲು ಖಚಿತ ಎಂದು ಸುಬ್ರಮಣಿಯನ್ ಸ್ವಾಮಿ ಗೇಲಿ ಮಾಡಿದ್ದಾರೆ.

ಚೆನ್ನೈ, ಮೇ 15: ರಜನಿಕಾಂತ್ ತಮಿಳು ಮೂಲದವನಲ್ಲ, ಬೆಂಗಳೂರು ಮೂಲದ ಮರಾಠಿಗ, ರಾಜಕೀಯವಾಗಿ ಯಾವುದೇ ಸಿದ್ಧಾಂತವನ್ನು ಪಾಲಿಸದ ಗೊಂದಲದ ಗೂಡಾಗಿರುವ ರಜನಿಗೆ ರಾಜಕೀಯದಲ್ಲಿ ಸೋಲು ಖಚಿತ ಎಂದು ಸುಬ್ರಮಣಿಯನ್ ಸ್ವಾಮಿ ಗೇಲಿ ಮಾಡಿದ್ದಾರೆ.

ಹಲವಾರು ವರ್ಷಗಳ ನಂತರ ಅಭಿಮಾನಿಗಳನ್ನು ಭೇಟಿ ಮಾಡಿದ ರಜನಿಕಾಂತ್ ಅವರು ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿ ಮತ್ತೆ ಹರಡಿದೆ.[ಆರ್ ಕೆ ನಗರ ಕ್ಷೇತ್ರ ಚುನಾವಣೆ, ರಜನಿ ಬೆಂಬಲ ಯಾರಿಗೆ?]

Rajini will fail, he is a Marathi from Bengaluru: Swamy

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮುಖಂಡ, ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು, ರಜನಿಕಾಂತ್ ಗೆ ರಾಜಕೀಯದ ಗಂಧಗಾಳಿ ಗೊತ್ತಿಲ್ಲ. ಸರಿಯಾಗಿ ಯಾವುದೇ ಸಿದ್ಧಾಂತ ಪಾಲಿಸುತ್ತಿಲ್ಲ. ಮೇಲಾಗಿ ಆತ ಮೂಲ ತಮಿಳಿಗನಲ್ಲ, ಬೆಂಗಳೂರು ಮೂಲದ ಮರಾಠಿಗ ಎಂದು ಸ್ವಾಮಿ ಹೇಳಿದ್ದಾರೆ.

ದೇವರ ಇಚ್ಛೆ ಇದ್ದರೆ ರಾಜಕೀಯಕ್ಕೆ ಬರುವುದಾಗಿ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿರುವ ರಜನಿ ಮಾತುಗಳನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದು ಸ್ವಾಮಿ ಹೇಳಿದ್ದಾರೆ.

ನನ್ನ ಸಲಹೆ ಕೇಳಿದರೆ, ರಜನಿ ಅವರು ರಾಜಕೀಯದಿಂದ ದೂರ ಇರುವುದೇ ಉತ್ತಮ. ಸಿನಿಮಾ ಮಂದಿ ಹೇಳಿಕೆ ನೀಡುವುದಲ್ಲಿ ಎತ್ತ್ತಿದ ಕೈ, ಏಕೆಂದರೆ ಅವರ ಡೈಲಾಗ್ಸ್ ಬೇರೆಯವರು ಬರೆದಿರುತ್ತಾರೆ ಎಂದರು.

{promotion-urls}

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+