ಬೆಂಗಳೂರಿನ ಮರಾಠಿಗ ರಜನಿಗೆ ರಾಜಕೀಯದಲ್ಲಿ ಸೋಲು ಗ್ಯಾರಂಟಿ: ಸ್ವಾಮಿ
ರಜನಿಕಾಂತ್ ತಮಿಳು ಮೂಲದವನಲ್ಲ, ಬೆಂಗಳೂರು ಮೂಲದ ಮರಾಠಿಗ, ರಾಜಕೀಯವಾಗಿ ಯಾವುದೇ ಸಿದ್ಧಾಂತವನ್ನು ಪಾಲಿಸದ ಗೊಂದಲದ ಗೂಡಾಗಿರುವ ರಜನಿಗೆ ರಾಜಕೀಯದಲ್ಲಿ ಸೋಲು ಖಚಿತ ಎಂದು ಸುಬ್ರಮಣಿಯನ್ ಸ್ವಾಮಿ ಗೇಲಿ ಮಾಡಿದ್ದಾರೆ.
ಚೆನ್ನೈ, ಮೇ 15: ರಜನಿಕಾಂತ್ ತಮಿಳು ಮೂಲದವನಲ್ಲ, ಬೆಂಗಳೂರು ಮೂಲದ ಮರಾಠಿಗ, ರಾಜಕೀಯವಾಗಿ ಯಾವುದೇ ಸಿದ್ಧಾಂತವನ್ನು ಪಾಲಿಸದ ಗೊಂದಲದ ಗೂಡಾಗಿರುವ ರಜನಿಗೆ ರಾಜಕೀಯದಲ್ಲಿ ಸೋಲು ಖಚಿತ ಎಂದು ಸುಬ್ರಮಣಿಯನ್ ಸ್ವಾಮಿ ಗೇಲಿ ಮಾಡಿದ್ದಾರೆ.
ಹಲವಾರು ವರ್ಷಗಳ ನಂತರ ಅಭಿಮಾನಿಗಳನ್ನು ಭೇಟಿ ಮಾಡಿದ ರಜನಿಕಾಂತ್ ಅವರು ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿ ಮತ್ತೆ ಹರಡಿದೆ.[ಆರ್ ಕೆ ನಗರ ಕ್ಷೇತ್ರ ಚುನಾವಣೆ, ರಜನಿ ಬೆಂಬಲ ಯಾರಿಗೆ?]

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮುಖಂಡ, ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು, ರಜನಿಕಾಂತ್ ಗೆ ರಾಜಕೀಯದ ಗಂಧಗಾಳಿ ಗೊತ್ತಿಲ್ಲ. ಸರಿಯಾಗಿ ಯಾವುದೇ ಸಿದ್ಧಾಂತ ಪಾಲಿಸುತ್ತಿಲ್ಲ. ಮೇಲಾಗಿ ಆತ ಮೂಲ ತಮಿಳಿಗನಲ್ಲ, ಬೆಂಗಳೂರು ಮೂಲದ ಮರಾಠಿಗ ಎಂದು ಸ್ವಾಮಿ ಹೇಳಿದ್ದಾರೆ.
ದೇವರ ಇಚ್ಛೆ ಇದ್ದರೆ ರಾಜಕೀಯಕ್ಕೆ ಬರುವುದಾಗಿ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿರುವ ರಜನಿ ಮಾತುಗಳನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದು ಸ್ವಾಮಿ ಹೇಳಿದ್ದಾರೆ.
ನನ್ನ ಸಲಹೆ ಕೇಳಿದರೆ, ರಜನಿ ಅವರು ರಾಜಕೀಯದಿಂದ ದೂರ ಇರುವುದೇ ಉತ್ತಮ. ಸಿನಿಮಾ ಮಂದಿ ಹೇಳಿಕೆ ನೀಡುವುದಲ್ಲಿ ಎತ್ತ್ತಿದ ಕೈ, ಏಕೆಂದರೆ ಅವರ ಡೈಲಾಗ್ಸ್ ಬೇರೆಯವರು ಬರೆದಿರುತ್ತಾರೆ ಎಂದರು.
{promotion-urls}
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications