ತಮಿಳುನಾಡಿನಲ್ಲಿ ಜೈಲರ್ ಹವಾ: ಸೂಪರ್ ಸ್ಟಾರ್ ರಜನಿಕಾಂತ್ ಸಿನಿಮಾ ಬಿಡುಗಡೆ ದಿನ ರಜೆ ಘೋಷಿಸಿದ ಕಂಪನಿಗಳು- ಯಾವುವು ತಿಳಿಯಿರಿ
ಚೆನ್ನೈ, ಆಗಸ್ಟ್ 07: ಸೂಪರ್ಸ್ಟಾರ್ ರಜನಿಕಾಂತ್ ಅಭಿನಯದ 'ಜೈಲರ್' ಚಿತ್ರವು ಆಗಸ್ಟ್ 10 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ತಮಿಳುನಾಡಿನ ಅಭಿಮಾನಿಗಳು ರಜನಿಕಾಂತ್ ನಟನೆಯನ್ನು ಕಣ್ತುಂಬಿಕೊಳ್ಳಲು ಉತ್ಸುಕರಾಗಿದ್ದಾರೆ. ಬಹುದಿನಗಳ ಬಳಿಕ ಬಿಡುಗಡೆಯಾಗುತ್ತಿರುವ ಸೂಪರ್ಸ್ಟಾರ್ ಚಿತ್ರವನ್ನು ಮೊದಲನೇ ದಿನವೇ ನೋಡಬೇಕೆನ್ನುವುದು ಲಕ್ಷಾಂತರ ಅಭಿಮಾನಿಗಳ ಕನಸಾಗಿರುತ್ತದೆ. ಈ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಚೆನ್ನೈ ಕಂಪನಿಗಳು ಮುಂದಾಗಿವೆ.
ರಾಜ್ಯದಾದ್ಯಂತ ಅನೇಕ ಖಾಸಗಿ ಕಂಪನಿಗಳಲ್ಲಿ ಜೈಲರ್ ಬಿಡುಗಡೆಯ ದಿನಾಂಕದಂದು ರಜೆಯ ವಿನಂತಿಗಳು ಹೆಚ್ಚುತ್ತಿವೆ. ಇದರಿಂದಾಗಿ ಸಂಸ್ಥೆಗಳು ಆಗಸ್ಟ್ 10 ಅನ್ನು ರಜೆ ಎಂದು ಘೋಷಿಸಲು ನಿರ್ಧರಿಸುವ ಎಂದು ತಿಳಿದುಬಂದಿದೆ.

ಯುಎನ್ಒ ಆಕ್ವಾ ಕೇರ್ ಮತ್ತು ಸೇಲಂ ಸರ್ವೆ ಗ್ರೂಪ್ ಹೆಸರಿನ ಕಂಪನಿಯು ಆಗಸ್ಟ್ 10 ಅನ್ನು ಅಧಿಕೃತ ರಜಾದಿನವೆಂದು ಘೋಷಿಸಿದೆ. ಕಂಪನಿಗಳೇ ಉದ್ಯೋಗಿಗಳಿಗೆ ಟಿಕೆಟ್ ಖರೀದಿಸ ಮುಂದಾಗಿವೆ ಎಂದು ವರದಿಯಾಗಿದೆ.
ಹ್ಯಾಟ್ರಿಕ್ ಹಿರೋ ಶಿವರಾಜಕುಮಾರ್ ಮತ್ತು ಮಲಯಾಳಿ ನಟ ಮೋಹನ್ ಲಾಲ್ ಅವರಂತಹ ಇತರ ರಾಜ್ಯಗಳ ತಾರೆಯರು ಸಹ ನಟಿಸಿರುವ ಈ ಚಿತ್ರವು ಈಗಾಗಲೇ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.

ಮಧುರೈ ಮೂಲದ ಕಂಪನಿ 'ಯುಎನ್ಒ ಆಕ್ವಾ ಕೇರ್' ತನ್ನ ಶಾಖೆಗಳಲ್ಲಿ ರಜೆ ಘೋಷಿಸಿದೆ. ಚೆನ್ನೈ, ಬೆಂಗಳೂರು, ತಿರುಚ್ಚಿ, ತಿರುನಲ್ವೇಲಿ, ಚೆಂಗಲ್ಪಟ್ಟು, ಮಟ್ಟುತವಾನಿ, ಅರಪಾಲಯಂ ಮತ್ತು ಅಳಗಪ್ಪನ್ನಗರದಲ್ಲಿ ಚಿತ್ರ ಬಿಡುಗಡೆಯ ದಿನದಂದು ರಜೆ ನೀಡಲು ನಿರ್ಧರಿಸಿದೆ.
'ಸೂಪರ್ಸ್ಟಾರ್ ರಜನಿಕಾಂತ್ ಅವರ ಚಿತ್ರ ಜೈಲರ್ ಬಿಡುಗಡೆಯ ದಿನವಾದ ಆಗಸ್ಟ್ 10ರಂದು ರಜಾದಿನವನ್ನು ಘೋಷಿಸಲು ನಿರ್ಧರಿಸಿದ್ದೇವೆ. ಎಚ್ಆರ್ ಡಿಪಾರ್ಟ್ಮೆಂಟ್ಗೆ ರಾಶಿಗಟ್ಟಲೇ ರಜಾ ವಿನಂತಿಗಳು ಬಂದಿವೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಕಂಪನಿಯೇ ರಜಾದಿನವನ್ನು ಘೋಷಿಸಿದೆ. ಯುಎನ್ಒ ಆಕ್ವಾ ಉದ್ಯೋಗಿಗಳಿಗೆ ಉಚಿತ ಟಿಕೆಟ್ಗಳನ್ನು ಒದಗಿಸಲಿದೆ' ಎಂದು ಕಂಪನಿಯು ಸುತ್ತೋಲೆ ತಿಳಿಸಿದೆ.

ಅದೇ ರೀತಿ, ಸೇಲಂ ಸರ್ವೆ ಗ್ರೂಪ್ ಎನ್ನುವ ಕಂಪನಿಯು ರಜೆ ಉದ್ಯೋಗಿಗಳಿಗೆ ರಜೆ ಘೋಷಿಸಿದೆ. ಈ ಕಂಪನಿಯು ದೇಶಾದ್ಯಂತ 2000 ಕ್ಕೂ ಹೆಚ್ಚು ಜನರನ್ನು ಹೊಂದಿರುವ ಭೂಮಾಪನ ಕಂಪನಿಯಾಗಿದೆ. ಜೈಲರ್ ಬಿಡುಗಡೆ ದಿನದಂದು ಚೆನ್ನೈ, ಬೆಂಗಳೂರು, ಕೊಯಮತ್ತೂರು, ಗೋವಾ, ಮುಂಬೈ ಮತ್ತು ಒಡಿಶಾ ಶಾಖೆಗಳಲ್ಲಿ ಕೆಲಸ ಮಾಡುವ ತನ್ನ ಎಲ್ಲಾ ಉದ್ಯೋಗಿಗಳಿಗೆ ರಜೆ ಅನ್ವಯಿಸುತ್ತದೆ ಎಂದು ಅದು ಹೇಳಿದೆ. ಈ ಕಂಪನಿಯೂ ಸಹ ತಮ್ಮ ಉದ್ಯೋಗಿಗಳಿಗೆ ಉಚಿತ ಚಲನಚಿತ್ರ ಟಿಕೆಟ್ಗಳನ್ನು ನೀಡಲು ನಿರ್ಧರಿಸಿದೆ.
ಈ ಖಾಸಗಿ ಸಂಸ್ಥೆಗಳು ತೆಗೆದುಕೊಂಡ ನಿರ್ಣಯವು ಸಾಮಾಜಿಕ ಮಾಧ್ಯಮಗಳಲ್ಲಿ ಎಲ್ಲರ ಗಮನವನ್ನು ಸೆಳೆದಿದೆ. ಅಭಿಮಾನಿಗಳು ಮತ್ತು ಚಿತ್ರಪ್ರೇಮಿಗಳು ಕಂಪನಿಯ ನಿರ್ಧಾರಗಳನ್ನು ಶ್ಲಾಘಿಸಿದ್ದಾರೆ.

ಆಗಸ್ಟ್ 3 ರಂದು ಬಿಡುಗಡೆಯಾದ ಟ್ರೇಲರ್ ಅಂತರ್ಜಾಲದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಟ್ರೈಲರ್ ಅನ್ನು ಯೂಟ್ಯೂಬ್ ಅಲ್ಲಿ ಬಿಡುಗಡೆ ಮಾಡಿದ ತಕ್ಷಣ ಎಲ್ಲೆಡೆಯಿಂದ ಅಭಿಮಾನಿಗಳು ತಮ್ಮ ಕಾಮೆಂಟ್ಗಳನ್ನು ಹಾಕಿದ್ದಾರೆ. ಟ್ರೈಲರ್ ಅನ್ನು ಲೈಕ್ ಮಾಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications