ರಾಜೀವ್ ಹಂತಕರ ಬಿಡುಗಡೆ ಅಧಿಕಾರ ತಮಿಳುನಾಡು ಸರ್ಕಾರಕ್ಕಿಲ್ಲ!
ನವದೆಹಲಿ, ಡಿ.2: ಮಾಜಿ ಪ್ರಧಾನಿ ರಾಜೀವ್ಗಾಂಧಿ ಹಂತಕರನ್ನು ಬಿಡುಗಡೆ ಮಾಡುವ ಅಧಿಕಾರ ತಮಿಳುನಾಡು ಸರ್ಕಾರಕ್ಕೆ ಇಲ್ಲ. ಇದನ್ನು ಕೇಂದ್ರ ಸರ್ಕಾರವೇ ತೀರ್ಮಾನಿಸಬೇಕು ಎಂದು ಸುಪ್ರೀಂಕೋರ್ಟ್ ಬುಧವಾರ ಮಹತ್ವದ ತೀರ್ಪು ನೀಡಿದೆ.
ರಾಜೀವ್ಗಾಂಧಿ ಹಂತಕರನ್ನು ಬಿಡುಗಡೆ ಮಾಡಲು ತಮಿಳುನಾಡು ಸರ್ಕಾರ ಮುಂದಾಗಿತ್ತು. ಸುಪ್ರೀಂಕೋರ್ಟ್ ಬುಧವಾರ ನೀಡಿರುವ ತೀರ್ಪಿನಿಂದ ರಾಜೀವ್ಗಾಂಧಿ ಹಂತಕರನ್ನು ಬಿಡುಗಡೆ ಮಾಡಲು ಮುಂದಾಗಿದ್ದ ತಮಿಳುನಾಡು ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ.[ರಾಜೀವ್ ಗಾಂಧಿ ಹಂತಕರಿಗೆ ಗಲ್ಲುಶಿಕ್ಷೆ ಇಲ್ಲ : ಸುಪ್ರೀಂಕೋರ್ಟ್]
ಮುಖ್ಯ ನ್ಯಾಯಮೂರ್ತಿ ಎಚ್.ಎಲ್.ದತ್ತು, ಎಫ್.ಎಂ.ಐ.ಎಲ್.ಖಲೀಫುಲ್ಲಾ, ಪಿನಾಕಿ ಚಂದ್ರಾಗೋಷ್, ಅಭಯ್ಮನೋಹರ್ ಸಪ್ರೆ ಮತ್ತು ಯು.ಯು.ಲಲಿತ್ ಅವರನ್ನೊಳಗೊಂಡ ಐದು ಮಂದಿ ಸದಸ್ಯರ ಸಾಂವಿಧಾನಿಕ ಪೀಠ ಈ ತೀರ್ಪು ನೀಡಿದೆ.
ರಾಜೀವ್ಗಾಂಧಿ ಹಂತಕರನ್ನು ಬಿಡುಗಡೆ ಮಾಡಬೇಕೆಂದು ಹಿರಿಯ ವಕೀಲ ರಾಮ್ಜೇಠ್ಮಲಾನಿ, ರಾಕೇಶ್ ದ್ವಿವೇದಿ ಹಾಗೂ ವಿ.ಶ್ರೀಧರನ್ ಅವರು ಸುಪ್ರೀಂಕೋರ್ಟ್ನಲ್ಲಿ ವಾದ ಮಂಡಿಸಿದ್ದರು.

ರಾಜೀವ್ಗಾಂಧಿ ಕೊಲೆ ಪ್ರಕರಣವನ್ನು ಕೇಂದ್ರದ ವ್ಯಾಪ್ತಿಗೆ ಬರುವ ಸಿಬಿಐ ತನಿಖೆ ನಡೆಸಿ ವಿಚಾರಣೆಯನ್ನು ಪೂರ್ಣಗೊಳಿಸಿದೆ. ಹೀಗಾಗಿ ಆರೋಪಿಗಳನ್ನು ಬಿಡುಗಡೆ ಮಾಡುವ ಅಧಿಕಾರ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದಿಲ್ಲ. ಕೇಂದ್ರದ ತನಿಖಾ ಸಂಸ್ಥೆ ತನಿಖೆ ನಡೆಸಿರುವಾಗ ರಾಜ್ಯ ಸರ್ಕಾರ ಹೇಗೆ ತೀರ್ಮಾನ ಮಾಡುತ್ತದೆ ಎಂದು ನ್ಯಾಯಾಧೀಶರು ಪ್ರಶ್ನಿಸಿದರು.[ರಾಜೀವ್ ಗಾಂಧಿ ಹಂತಕಿಗೆ ಬಿಡುಗಡೆ ಭಾಗ್ಯವಿಲ್ಲ]
ಈ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಗನ್, ಸಂತನ್, ಅರಿವು ಎಂಬ ಆರೋಪಿಗಳಿಗೆ ನ್ಯಾಯಾಲಯ ನೀಡಿದ್ದ ಮರಣದಂಡನೆ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಮಾರ್ಪಾಟು ಮಾಡಲಾಗಿದೆ.
1991 ಮೇ 21ರಂದು ಲೋಕಸಭೆ ಚುನಾವಣೆಯ ಪ್ರಚಾರಕ್ಕೆ ತೆರಳಿದ್ದ ಅಂದಿನ ಪ್ರಧಾನಿ ರಾಜೀವ್ಗಾಂಧಿ ಅವರನ್ನು ಎಲ್ಟಿಟಿಇ ಉಗ್ರಗಾಮಿ ಸಂಘಟನೆ ಜತೆ ಸಂಪರ್ಕ ಹೊಂದಿದ್ದ ಈ ಏಳು ಆರೋಪಿಗಳು ಮಾನವ ಬಾಂಬ್ ಬಳಸಿ ಹತ್ಯೆ ಮಾಡಿದ್ದರು.
ಇದೇ ಪ್ರಕರಣದಲ್ಲಿ ಬಂಧಿತರಾಗಿರುವ ನಳಿನಿ, ರಾಬರ್ಟ್ಪಿಯೋಸ್, ಜಯಕುಮಾರ್ ಮತ್ತು ರವಿಚಂದ್ರನ್ಗೆ ತಮಿಳುನಾಡು ಸರ್ಕಾರ ಮಾನವೀಯತೆ ಆಧಾರದ ಮೇಲೆ ಬಿಡುಗಡೆ ಮಾಡಲು ಮುಂದಾಗಿತ್ತು.ಈ ಆರೋಪಿಗಳು ಚೆನ್ನೈ ಮತ್ತು ವೆಲ್ಲೂರು ಜೈಲಿನಲ್ಲಿದ್ದಾರೆ.(ಒನ್ ಇಂಡಿಯಾ ಸುದ್ದಿ)
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications