ರಾಜ್ಕೋಟ್: ಬೆಲ್ಟ್ನಿಂದ ಥಳಿಸಿ ದಲಿತ ವ್ಯಕ್ತಿಯ ಕೊಲೆ
ಅಹಮದಾಬಾದ್, ಮೇ 21: ಗುಜರಾತ್ನ ರಾಜ್ಕೋಟ್ನಲ್ಲಿ ಕಾರ್ಖಾನೆಯೊಂದರ ಕಾರ್ಮಿಕರು ದಲಿತ ವ್ಯಕ್ತಿಯೊಬ್ಬರನ್ನು ಹೊಡೆದು ಹತ್ಯೆ ಮಾಡಿದ್ದಾರೆ.
ಶಾಪರ್ ಕೈಗಾರಿಕಾ ವಲಯದಲ್ಲಿ ಭಾನುವಾರ ಬೆಳಿಗ್ಗೆ ಈ ಘಟನೆ ನಡೆದಿದೆ.
ಗುತ್ತಿಗೆ ಕಾರ್ಮಿಕ ಮುಕೇಶ್ ಸಾವ್ಜಿ ವಾನಿಯಾ (40) ಎಂಬುವವರನ್ನು ಮೂವರು ಥಳಿಸಿ ಹತ್ಯೆ ಮಾಡುವ ವಿಡಿಯೋ ಸೌರಾಷ್ಟ್ರದಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಪೊಲೀಸರು ತನಿಖೆ ಆರಂಭಿಸಿ ಐವರನ್ನು ಬಂಧಿಸಿದ್ದಾರೆ.
On video, Dalit man tied up, flogged in Gujarat. He died, wife critical https://t.co/l1BvgnjlSr pic.twitter.com/VQfViAbRxL
— NDTV (@ndtv) 21 May 2018
ಮುಕೇಶ್, ಪತ್ನಿ ಜಯಾ ಮತ್ತು ಇನ್ನೊಬ್ಬ ಮಹಿಳೆ ಸವಿತಾ ಜತೆ ರಾದಾದಿಯಾ ಇಂಡಸ್ಟ್ರೀಸ್ನಲ್ಲಿ ಅನುಪಯುಕ್ತ ವಸ್ತುಗಳನ್ನು ಸಂಗ್ರಹಿಸುತ್ತಿದ್ದರು. ಆಗ ಕಾರ್ಖಾನೆಯ ಕೆಲಸಗಾರರು ಈ ಮೂವರ ಮೇಲೆ ಹಲ್ಲೆ ನಡೆಸಿದ್ದಾರೆ.

ಇಬ್ಬರು ಮಹಿಳೆಯರಿಗೂ ಥಳಿಸಿದ ಕಾರ್ಮಿಕರು ಅವರನ್ನು ಎಳೆದು ಹೊರಹಾಕಿದರು, ಬಳಿಕ ಮುಕೇಶ್ನನ್ನು ಫ್ಯಾಕ್ಟರಿಯ ಗೇಟ್ಗೆ ಕಟ್ಟಿಹಾಕಿ ಬೆಲ್ಟ್ನಿಂದ ಹಲ್ಲೆ ನಡೆಸಿದರು ಎಂಬುದಾಗಿ ಜಯಾ ದೂರಿನಲ್ಲಿ ತಿಳಿಸಿದ್ದಾರೆ ಎಂದು ಶಾಪರ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಮೇಶ್ ಸಿಂಧು ತಿಳಿಸಿದರು.
ಮಹಿಳೆಯರನ್ನು ಹೊರಗೆ ಅಟ್ಟಿದ ಬಳಿಕ ಅವರು ಮುಕೇಶ್ನನ್ನು ರಕ್ಷಿಸಲು ಸಂಬಂಧಿಕರನ್ನು ಕರೆತರುವವರೆಗೂ ಮುಕೇಶ್ ಮೇಲೆ ಹಲ್ಲೆ ನಡೆಸಿದ್ದಾರೆ. ರಾಜಕೋಟ್ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮುಕೇಶ್ ಮೃತಪಟ್ಟಿದ್ದಾರೆ. ಮುಕೇಶ್ ಪತ್ನಿ ಜಯಾ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮುಕೇಶ್ನನ್ನು ಕಳ್ಳ ಎಂದು ಭಾವಿಸಿ ಕಾರ್ಖಾನೆ ಕಾರ್ಮಿಕರು ಹಲ್ಲೆ ನಡೆಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ, ಅದನ್ನು ಪೊಲೀಸರು ದೃಢಪಡಿಸಿಲ್ಲ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications