ರಾಜ್ಕೋಟ್: ಬೆಲ್ಟ್ನಿಂದ ಥಳಿಸಿ ದಲಿತ ವ್ಯಕ್ತಿಯ ಕೊಲೆ
ಅಹಮದಾಬಾದ್, ಮೇ 21: ಗುಜರಾತ್ನ ರಾಜ್ಕೋಟ್ನಲ್ಲಿ ಕಾರ್ಖಾನೆಯೊಂದರ ಕಾರ್ಮಿಕರು ದಲಿತ ವ್ಯಕ್ತಿಯೊಬ್ಬರನ್ನು ಹೊಡೆದು ಹತ್ಯೆ ಮಾಡಿದ್ದಾರೆ.
ಶಾಪರ್ ಕೈಗಾರಿಕಾ ವಲಯದಲ್ಲಿ ಭಾನುವಾರ ಬೆಳಿಗ್ಗೆ ಈ ಘಟನೆ ನಡೆದಿದೆ.
ಗುತ್ತಿಗೆ ಕಾರ್ಮಿಕ ಮುಕೇಶ್ ಸಾವ್ಜಿ ವಾನಿಯಾ (40) ಎಂಬುವವರನ್ನು ಮೂವರು ಥಳಿಸಿ ಹತ್ಯೆ ಮಾಡುವ ವಿಡಿಯೋ ಸೌರಾಷ್ಟ್ರದಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಪೊಲೀಸರು ತನಿಖೆ ಆರಂಭಿಸಿ ಐವರನ್ನು ಬಂಧಿಸಿದ್ದಾರೆ.
On video, Dalit man tied up, flogged in Gujarat. He died, wife critical https://t.co/l1BvgnjlSr pic.twitter.com/VQfViAbRxL
— NDTV (@ndtv) 21 May 2018
ಮುಕೇಶ್, ಪತ್ನಿ ಜಯಾ ಮತ್ತು ಇನ್ನೊಬ್ಬ ಮಹಿಳೆ ಸವಿತಾ ಜತೆ ರಾದಾದಿಯಾ ಇಂಡಸ್ಟ್ರೀಸ್ನಲ್ಲಿ ಅನುಪಯುಕ್ತ ವಸ್ತುಗಳನ್ನು ಸಂಗ್ರಹಿಸುತ್ತಿದ್ದರು. ಆಗ ಕಾರ್ಖಾನೆಯ ಕೆಲಸಗಾರರು ಈ ಮೂವರ ಮೇಲೆ ಹಲ್ಲೆ ನಡೆಸಿದ್ದಾರೆ.

ಇಬ್ಬರು ಮಹಿಳೆಯರಿಗೂ ಥಳಿಸಿದ ಕಾರ್ಮಿಕರು ಅವರನ್ನು ಎಳೆದು ಹೊರಹಾಕಿದರು, ಬಳಿಕ ಮುಕೇಶ್ನನ್ನು ಫ್ಯಾಕ್ಟರಿಯ ಗೇಟ್ಗೆ ಕಟ್ಟಿಹಾಕಿ ಬೆಲ್ಟ್ನಿಂದ ಹಲ್ಲೆ ನಡೆಸಿದರು ಎಂಬುದಾಗಿ ಜಯಾ ದೂರಿನಲ್ಲಿ ತಿಳಿಸಿದ್ದಾರೆ ಎಂದು ಶಾಪರ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಮೇಶ್ ಸಿಂಧು ತಿಳಿಸಿದರು.
ಮಹಿಳೆಯರನ್ನು ಹೊರಗೆ ಅಟ್ಟಿದ ಬಳಿಕ ಅವರು ಮುಕೇಶ್ನನ್ನು ರಕ್ಷಿಸಲು ಸಂಬಂಧಿಕರನ್ನು ಕರೆತರುವವರೆಗೂ ಮುಕೇಶ್ ಮೇಲೆ ಹಲ್ಲೆ ನಡೆಸಿದ್ದಾರೆ. ರಾಜಕೋಟ್ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮುಕೇಶ್ ಮೃತಪಟ್ಟಿದ್ದಾರೆ. ಮುಕೇಶ್ ಪತ್ನಿ ಜಯಾ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮುಕೇಶ್ನನ್ನು ಕಳ್ಳ ಎಂದು ಭಾವಿಸಿ ಕಾರ್ಖಾನೆ ಕಾರ್ಮಿಕರು ಹಲ್ಲೆ ನಡೆಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ, ಅದನ್ನು ಪೊಲೀಸರು ದೃಢಪಡಿಸಿಲ್ಲ.
-
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಏರಿಕೆ: ಇಲ್ಲಿದೆ ಏಪ್ರಿಲ್ 9ರ ದರಪಟ್ಟಿ












Click it and Unblock the Notifications