ಬೈಡನ್ ಸರ್ಕಾರದೊಂದಿಗೆ ಭಾರತದ ಮೊದಲ ಮಾತುಕತೆ: ಅಧಿಕಾರಿಗಳ ಜತೆ ದೋವಲ್, ರಾಜನಾಥ್ ಚರ್ಚೆ
ನವದೆಹಲಿ, ಜನವರಿ 28: ಅಮೆರಿಕದ ನೂತನ ಅಧ್ಯಕ್ಷರಾಗಿ ಜೋ ಬೈಡನ್ ಅಧಿಕಾರ ಸ್ವೀಕರಿಸಿದ ಬಳಿಕ ಭಾರತ-ಅಮೆರಿಕ ನಡುವಣ ರಕ್ಷಣಾ ಮಾತುಕತೆ ಮತ್ತೆ ಆರಂಭವಾಗಿದೆ. ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವನ್ ಅವರೊಂದಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಬುಧವಾರ ದೂರವಾಣಿ ಮಾತುಕತೆ ನಡೆಸಿದರು.
ಇನ್ನೊಂದೆಡೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಅಮೆರಿಕದ ನೂತನ ರಕ್ಷಣಾ ಕಾರ್ಯದರ್ಶಿ ಜನರಲ್ (ನಿವೃತ್ತ) ಲಾಯ್ಡ್ ಆಸ್ಟಿನ್ ಅವರಿಂದ ಪರಿಚಯಾತ್ಮಕ ದೂರವಾಣಿ ಕರೆ ಸ್ವೀಕರಿಸಿ ಮಾತನಾಡಿದರು. ಈ ದೂರವಾಣಿ ಸಂಭಾಷಣೆಗಳು ಜೋ ಬೈಡನ್ ಆಡಳಿತದೊಂದಿಗೆ ಭಾರತ ಸರ್ಕಾರದ ಮೊದಲ ಉನ್ನತ ಮಟ್ಟದ ಮಾತುಕತೆಗಳಾಗಿವೆ.
ನೂತನ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಅವರಿಗೆ ರಾಜನಾಥ್ ಸಿಂಗ್ ಅಭಿನಂದನೆ ತಿಳಿಸಿದರು. 'ಭಾರತ-ಅಮೆರಿಕ ರಕ್ಷಣಾ ಸಹಕಾರವನ್ನು ಮತ್ತಷ್ಟು ಗಟ್ಟಿಗೊಳಿಸುವ ನಮ್ಮ ದೃಢ ಬದ್ಧತೆಯನ್ನು ಪುನರುಚ್ಚರಿಸಿದೆವು. ನಮ್ಮ ಕಾರ್ಯತಂತ್ರ ಸಹಭಾಗಿತ್ವವನ್ನು ಬಲಪಡಿಸಲು ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಚಾರಗಳ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಂಡೆವು' ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ರಕ್ಷಣಾ ಸಚಿವರ ಮಟ್ಟದ ಮಾತುಕತೆಯಲ್ಲಿ ಚೀನಾ ಕುರಿತು ಸಹ ಚರ್ಚೆ ನಡೆಯಿತು. ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಭಾರತದ ಕಾರ್ಯತಂತ್ರ ಹಿತಾಸಕ್ತಿಗಳ ಸಂಬಂಧ ಮತ್ತು ಭೂ-ರಾಜಕೀಯ ಬೆಳವಣಿಗೆಗಳ ಕುರಿತು ವಿಸ್ತೃತ ಮಾತುಕತೆ ನಡೆಯಿತು ಎಂದು ವರದಿಯಾಗಿದೆ.
ಭಯೋತ್ಪಾದನೆಯ ಬೆದರಿಕೆಯನ್ನು ಎದುರಿಸುವುದು ಕಡಲು ಭದ್ರತೆ, ಸೈಬರ್ ಭದ್ರತೆ, ಇಂಡೋ-ಪೆಸಿಫಿಕ್ ಪ್ರದೇಶ ಹಾಗೂ ಅದರಾಚೆಗೆ ಶಾಂತಿ ಮತ್ತು ಸ್ಥಿರತೆ ಕಾಪಾಡುವುದು ಸೇರಿದಂತೆ ಅನೇಕ ಅಂತಾರಾಷ್ಟ್ರೀಯ ಮತ್ತು ಪ್ರಾದೇಶಿಕ ವಿಚಾರಗಳಲ್ಲಿ ಭಾರತ-ಅಮೆರಿಕಗಳು ಜತೆಯಾಗಿ ಕಾರ್ಯನಿರ್ವಹಿಸುವ ಬಗ್ಗೆ ಎನ್ಎಸ್ಎ ಅಜಿತ್ ದೋವಲ್ ಅವರು ಜೇಕ್ ಸುಲ್ಲಿವನ್ ಜತೆ ಮಾತುಕತೆ ನಡೆಸಿದರು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹೇಳಿಕೆ ತಿಳಿಸಿದೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications