ಮೋದಿ ಲಡಾಖ್ ಭೇಟಿಯಿಂದ ಯೋಧರಲ್ಲಿ ಆತ್ಮಸ್ಥೈರ್ಯ ಹೆಚ್ಚಿದೆ: ರಾಜನಾಥ್ ಸಿಂಗ್

ನವದೆಹಲಿ, ಜುಲೈ 3: ಪ್ರಧಾನಿ ನರೇಂದ್ರ ಮೋದಿ ಲಡಾಖ್‌ನ ಲೇಹ್‌ಗೆ ಭೇಟಿ ನೀಡಿದ್ದರಿಂದ ಯೋಧರ ಆತ್ಮಸ್ಥೈರ್ಯ ಮತ್ತಷ್ಟು ಹೆಚ್ಚಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಟ್ವೀಟ್ ಮಾಡಿರುವ ಅವರು, ದೇಶದ ಗಡಿಗಳು ಭಾರತೀಯ ಸೇನಾಪಡೆಗಳಿಂದಾಗಿ ಸದಾಕಾಲ ಭದ್ರತೆಯಿಂದಿರುತ್ತದೆ. ಪ್ರಧಾನಿ ಮೋದಿಯವರು ಲಡಾಖ್'ಗೆ ಭೇಟಿ ನೀಡಿದ್ದು, ಇದು ಯೋಧರ ನೈತಿಕ ಸ್ಥೈರ್ಯವನ್ನು ಹೆಚ್ಚು ಮಾಡಿದೆ ಪ್ರಧಾನಮಂತ್ರಿಗಳು ಈ ನಡೆಯನ್ನು ಶ್ಲಾಘಿಸಲೇಬೇಕು. ಇದಕ್ಕಾಗಿ ಅವರಿಗೆ ಧನ್ಯವಾದಗಳನ್ನು ಹೇಳಲು ಇಚ್ಛಿಸುತ್ತೇನೆಂದು ಹೇಳಿದ್ದಾರೆ.

ಜೂನ್ 15 ರಂದು ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ಭಾರತ ಹಾಗೂ ಚೀನಾ ನಡುವೆ ನಡೆದ ಸಂಘರ್ಷದಲ್ಲಿ ಭಾರತದ 20ಮಂದಿ ಯೋಧರು ಹುತಾತ್ಮರಾಗಿದ್ದರು.

ಲಡಾಖ್‌ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡಿರುವುದು ಯೋಧರ ನೈತಿಕ ಸ್ಥೈರ್ಯ ಹೆಚ್ಚು ಮಾಡಿದೆ ಎಂದಿದ್ದಾರೆ.

Rajnath Singh Says Modi Meeting With Soldiers Boosted Morale

ಗಲ್ವಾನ್ ಕಣಿವೆ ಪ್ರದೇಶದಲ್ಲಿ ಚೀನಾ ಹಾಗೂ ಭಾರತೀಯ ಸೇನೆ ನಡುವೆ ನಡೆದ ಘರ್ಷಣೆ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲಡಾಖ್‌ಗೆ ಭೇಟಿ ನೀಡಿದ್ದಾರೆ. ಇಂದು ಬೆಳಕಿನ ಜಾವ ಲಡಾಖ್ನ ಲೆಹ್ ಜಿಲ್ಲೆಯ ನಿಮೂಗೆ ಭೇಟಿ ನೀಡಿದ್ದು, ಭದ್ರತೆಗೆ ನಿಯೋಜನೆಗೊಂಡಿದ್ದ ಯೋಧರ ಜೊತೆಗೆ ಮಾತುಕತೆ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+