ಮೋದಿ ಲಡಾಖ್ ಭೇಟಿಯಿಂದ ಯೋಧರಲ್ಲಿ ಆತ್ಮಸ್ಥೈರ್ಯ ಹೆಚ್ಚಿದೆ: ರಾಜನಾಥ್ ಸಿಂಗ್
ನವದೆಹಲಿ, ಜುಲೈ 3: ಪ್ರಧಾನಿ ನರೇಂದ್ರ ಮೋದಿ ಲಡಾಖ್ನ ಲೇಹ್ಗೆ ಭೇಟಿ ನೀಡಿದ್ದರಿಂದ ಯೋಧರ ಆತ್ಮಸ್ಥೈರ್ಯ ಮತ್ತಷ್ಟು ಹೆಚ್ಚಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಟ್ವೀಟ್ ಮಾಡಿರುವ ಅವರು, ದೇಶದ ಗಡಿಗಳು ಭಾರತೀಯ ಸೇನಾಪಡೆಗಳಿಂದಾಗಿ ಸದಾಕಾಲ ಭದ್ರತೆಯಿಂದಿರುತ್ತದೆ. ಪ್ರಧಾನಿ ಮೋದಿಯವರು ಲಡಾಖ್'ಗೆ ಭೇಟಿ ನೀಡಿದ್ದು, ಇದು ಯೋಧರ ನೈತಿಕ ಸ್ಥೈರ್ಯವನ್ನು ಹೆಚ್ಚು ಮಾಡಿದೆ ಪ್ರಧಾನಮಂತ್ರಿಗಳು ಈ ನಡೆಯನ್ನು ಶ್ಲಾಘಿಸಲೇಬೇಕು. ಇದಕ್ಕಾಗಿ ಅವರಿಗೆ ಧನ್ಯವಾದಗಳನ್ನು ಹೇಳಲು ಇಚ್ಛಿಸುತ್ತೇನೆಂದು ಹೇಳಿದ್ದಾರೆ.
भारतीय सेना के रहते देश की सीमाएँ हमेशा सुरक्षित रही हैं।
— Rajnath Singh (@rajnathsingh) July 3, 2020
प्रधानमंत्री श्री @narendramodi का आज लद्दाख़ जाकर सेना के जवानों से भेंट करके उनका उत्साहवर्धन करने से निश्चित रूप से सेना का मनोबल और ऊँचा हुआ है।मैं प्रधानमंत्रीजी के इस कदम की सराहना करते हुए उन्हें धन्यवाद देता हूँ।
ಜೂನ್ 15 ರಂದು ಲಡಾಖ್ನ ಗಲ್ವಾನ್ ಕಣಿವೆಯಲ್ಲಿ ಭಾರತ ಹಾಗೂ ಚೀನಾ ನಡುವೆ ನಡೆದ ಸಂಘರ್ಷದಲ್ಲಿ ಭಾರತದ 20ಮಂದಿ ಯೋಧರು ಹುತಾತ್ಮರಾಗಿದ್ದರು.
India-China standoff LIVE: ವಿಸ್ತಾರವಾದದ ವಿರುದ್ಧ ಮೋದಿ ಗುಡುಗು
ಲಡಾಖ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡಿರುವುದು ಯೋಧರ ನೈತಿಕ ಸ್ಥೈರ್ಯ ಹೆಚ್ಚು ಮಾಡಿದೆ ಎಂದಿದ್ದಾರೆ.
ಗಲ್ವಾನ್ ಕಣಿವೆ ಪ್ರದೇಶದಲ್ಲಿ ಚೀನಾ ಹಾಗೂ ಭಾರತೀಯ ಸೇನೆ ನಡುವೆ ನಡೆದ ಘರ್ಷಣೆ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲಡಾಖ್ಗೆ ಭೇಟಿ ನೀಡಿದ್ದಾರೆ. ಇಂದು ಬೆಳಕಿನ ಜಾವ ಲಡಾಖ್ನ ಲೆಹ್ ಜಿಲ್ಲೆಯ ನಿಮೂಗೆ ಭೇಟಿ ನೀಡಿದ್ದು, ಭದ್ರತೆಗೆ ನಿಯೋಜನೆಗೊಂಡಿದ್ದ ಯೋಧರ ಜೊತೆಗೆ ಮಾತುಕತೆ ನಡೆಸಿದ್ದಾರೆ.