ಇಂಥ ಯುದ್ಧ ವಿಮಾನದಲ್ಲಿ ಪ್ರಯಾಣಿಸುವ ಕನಸನ್ನೂ ಕಂಡಿರಲಿಲ್ಲ: ರಾಜನಾಥ್ ಸಿಂಗ್
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ಸಂಜೆ ಮೊದಲ ರಫೇಲ್ ಯುದ್ಧ ವಿಮಾನದಲ್ಲಿ ಪ್ರಯಾಣ ಬೆಳೆಸಿದರು. 87 ನೇ ವಾಯುಸೇನೆ ದಿನದಂದು ಭಾರತ ಸೇನೆಯ ತೆಕ್ಕೆಗೆ ಸೇರಿಕೊಂಡ ರಫೇಲ್ ಫೈಟರ್ ಜೆಟ್ ನಲ್ಲಿ ಪ್ರಯಾಣ ಬೆಳೆಸಿದ ತಮ್ಮ ಅನುಭವವನ್ನು ರಾಜನಾಥ್ ಸಿಂಗ್ ಹಂಚಿಕೊಂಡಿದ್ದಾರೆ.
ರಫೇಲ್ ಪ್ರಯಾಣಕ್ಕೂ ಮುಂಚೆ ಯುದ್ಧವಿಮಾನಕ್ಕೆ ಕುಂಕುಮ ಹಚ್ಚಿ, ಹೂವು ಏರಿಸಿ, ಅದರ ಚಕ್ರದ ಬಳಿ ನಿಂಬೆ ಹಣ್ಣಿ ಇಟ್ಟು ಆಯುಧ ಪೂಜೆ ನೆರವೇರಿಸಿದ ರಾಜನಾಥ್ ಸಿಂಗ್, ನಂತರ ಈ ವಾನದಲ್ಲಿ ಪ್ರಯಾಣಿಸಿದರು. ವಿವಾದದ ಕೇಂದ್ರಬಿಂದುವಾಗಿದ್ದ ರಫೇಲ್ ಫೈಟರ್ ಜೆಟ್ ಮಂಗಳವಾರ ಅಧಿಕೃತವಾಗಿ ಭಾರತೀಯ ಸೇನೆ ಸೇರಿದೆ.
ನಂತರ ತಮ್ಮ ಅನುಭವವನ್ನು ಹಂಚಿಕೊಂಡರು.

ಕನಸಿನಲ್ಲಿಯೂ ಎಣಿಸಿರಲಿಲ್ಲ!
"ರಫೇಲ್ ಯುದ್ಧ ವಿಮಾನ ಅತ್ಯಂತ ಮೃದು ಮತ್ತು ಸುಧಾರಿತ ತತ್ರಜ್ಞಾನದ ಫೈಟರ್ ಜೆಟ್. ಇಂಥ ಸೂಪರ್ ಸ್ಪೀಡ್ ಯುದ್ಧ ವಿಮಾನದಲ್ಲಿ ನಾನೊಂದು ದಿನ ಪ್ರಯಾಣ ಮಾಡುತ್ತೇನೆ ಎಂದು ನಾನು ಕನಸಿನಲ್ಲಿಯೂ ನಿರೀಕ್ಷಿಸರಲಿಲ್ಲ" ಎಂದು ರಾಜನಾಥ್ ಸಿಂಗ್ ತಮ್ಮ ಅನುಭವವನ್ನು ಹಂಚಿಕೊಂಡರು.

ಸ್ವರಕ್ಷಣೆಗಾಗಿ ಮಾತ್ರ!
ರಫೇಲ್ ಏರ್ ಕ್ರಾಫ್ಟ್ ಅನ್ನು ನಾವು ಯಾರ ಮೇಲೆಯೂ ದಾಳಿ ಮಾಡುವುದಕ್ಕಾಗಿ ಖರೀದಿಸಿಲ್ಲ. ಬದಲಾಗಿ ನಮ್ಮ ಸ್ವರಕ್ಷಣೆಗಾಗಿ ಖರೀದಿ ಮಾಡಿದ್ದೇವೆ ಎಂದು ರಫೇಲ್ ಪ್ರಯಾಣದ ನಂತರ ರಾಜನಾಥ್ ಸಿಂಗ್ ಹೇಳಿದರು.
"ನಮ್ಮ ವಾಯುಸೇನೆ ಜಗತ್ತಿನಲ್ಲೇ ನಾಲ್ಕನೇ ದೊಡ್ಡ ವಾಯುಸೇನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದೀಗ ರಫೇಲ್ ಸಹ ಸೇನೆಗೆ ಸೇರಿರುವುದು ಮತ್ತಷ್ಟು ಬಲ ತಂದಿದೆ. ರಫೇಲ್ ಎಂಬ ಫ್ರೆಂಚ್ ಪದದ ಅರ್ಥ ಹುಮ್ಮಸ್ಸಿನಿಂದ ಬೀಸುವ ಗಾಳಿ ಎಂದರ್ಥ. ನಮ್ಮ ಸೇನೆಗೂ ಇದು ಗಾಳಿಯ ವೇಗವನ್ನು ನೀಡಿದೆ" ಎಂದು ಸಿಂಗ್ ಹೇಳಿದರು.

ಮೊದಲನೆಯ ಯುದ್ಧ ವಿಮಾನ
RB-01 ಎಂಬ ಹೆಸರಿನ ರಫೇಲ್ ಯುದ್ಧ ವಿಮಾನ ಭಾರತ ಫ್ರಾನ್ಸ್ ನಿಂದ ಖರೀದಿ ಮಾಡಿದ 36 ಯುದ್ಧ ವಿಮಾನಗಳಲ್ಲಿ ಮೊದಲನೆಯದಾಗಿದೆ. ಅತ್ಯಾಧುನಿಕ ತಂತ್ರಜ್ಞಾನವುಳ್ಳ ಈ ಯುದ್ಧ ವಿಮಾನ ಎದುರಾಳಿಗಳ ದಾಳಿಯನ್ನು ಸಮರ್ಥವಾಗಿ ಎದುರಿಸಲು ಮತ್ತು ಸೋಲಿಸಲು ಅತ್ಯಂತ ಸಮರ್ಪಕವಾಗಿದೆ.

ಮೂರು ವರ್ಷಗಳ ಹಿಂದೆ ಒಪ್ಪಂದಕ್ಕೆ ಸಹಿ
36 ರಾಫೆಲ್ ಯುದ್ಧ ವಿಮಾನ ವ್ಯವಹಾರ ಒಪ್ಪಂದಕ್ಕೆ ಸೆಪ್ಟೆಂಬರ್ 23, 2016ರಂದು ಶುಕ್ರವಾರ ಉಭಯ ದೇಶಗಳ ಪ್ರತಿನಿಧಿಗಳು ಸಹಿ ಹಾಕಿದ್ದರು. ಸುಮಾರು 7.8 ಬಿಲಿಯನ್ ಯುರೋ (ಸುಮಾರು 780 ಕೋಟಿ) ವ್ಯವಹಾರಿಕ ಮೊತ್ತ ಇದಾಗಿದೆ. ಅಂದು ಕೇಂದ್ರ ರಕ್ಷಣಾ ಸಚಿವ ಮನೋಹರ ಪರಿಕ್ಕರ್ ಮತ್ತು ಫ್ರಾನ್ಸ್ ರಕ್ಷಣಾ ಸಚಿವ ಜಿಯಾನ್ ವೈವೆಸ್ ಲೆಡ್ರಿಯನ್ ಅವರು ದೆಹಲಿಯಲ್ಲಿ ಈ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications